AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF 2: ಜೀ ಕನ್ನಡದಲ್ಲಿ ಬರ್ತಿದೆ ‘ಕೆಜಿಎಫ್​: ಚಾಪ್ಟರ್​ 2’; ಆಗಸ್ಟ್​ 20ಕ್ಕೆ ಯಶ್​ ಅಭಿಮಾನಿಗಳಿಗೆ ಹಬ್ಬ

KGF Chapter 2 Television Premiere: ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ‘ಕೆಜಿಎಫ್​ 2’ ಚಿತ್ರವನ್ನು ಮಿಸ್​ ಮಾಡಿಕೊಂಡವರು ಈಗ ಟಿವಿಯಲ್ಲಿ ನೋಡಲು ಕಾಲ ಕೂಡಿಬಂದಿದೆ. ಆಗಸ್ಟ್​ 20ರ ಶನಿವಾರ ಸಂಜೆ 7 ಗಂಟೆಗೆ ಜೀ ಕನ್ನಡದಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ.

KGF 2: ಜೀ ಕನ್ನಡದಲ್ಲಿ ಬರ್ತಿದೆ ‘ಕೆಜಿಎಫ್​: ಚಾಪ್ಟರ್​ 2’; ಆಗಸ್ಟ್​ 20ಕ್ಕೆ ಯಶ್​ ಅಭಿಮಾನಿಗಳಿಗೆ ಹಬ್ಬ
ಯಶ್
TV9 Web
| Edited By: |

Updated on: Aug 18, 2022 | 3:29 PM

Share

ನಟ ‘ರಾಕಿಂಗ್​ ಸ್ಟಾರ್​’ ಯಶ್​ (Yash) ಅವರ ವೃತ್ತಿಬದುಕಿನ ಅತಿ ದೊಡ್ಡ ಸಿನಿಮಾವಾಗಿ ಮೂಡಿಬಂದ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಚಿತ್ರದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಕನ್ನಡ ಚಿತ್ರರಂಗದ ಕಡೆಗೆ ಇಡೀ ಜಗತ್ತು ತಿರುಗಿ ನೋಡುವಂತೆ ಮಾಡಿದ ಚಿತ್ರವಿದು. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಅಬ್ಬರಿಸಿದ ಪರಿಗೆ ಬಾಲಿವುಡ್​ ಮಂದಿ ಕೂಡ ದಂಗಾದರು. ನಂತರ ಒಟಿಟಿಯಲ್ಲಿ ಪ್ರಸಾರವಾಗಿಯೂ ಈ ಚಿತ್ರ ಸದ್ದು ಮಾಡಿತು. ಈಗ ಇದೇ ಮೊದಲ ಬಾರಿಗೆ ಟಿವಿಯಲ್ಲಿ ಬಿತ್ತರವಾಗಲು ಸಮಯ ನಿಗದಿ ಆಗಿದೆ. ಹೌದು, ‘ಜೀ ಕನ್ನಡ’ (Zee Kannada) ವಾಹಿನಿಯಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಟಿಲಿವಿಷನ್​ ಪ್ರೀಮಿಯರ್​ ಮಾಡಲಾಗುತ್ತಿದೆ. ಆಗಸ್ಟ್​ 20ರಂದು ಈ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣಲಿದ್ದು, ‘ರಾಕಿಂಗ್​ ಸ್ಟಾರ್​’ ಯಶ್​ ಅಭಿಮಾನಿಗಳಿಗೆ ಅಂದು ಮನರಂಜನೆಯ ಹಬ್ಬ ಆಗಲಿದೆ.

ಪ್ರಶಾಂತ್​ ನೀಲ್​ ಅವರ ನಿರ್ದೇಶನದಲ್ಲಿ ಮೂಡಿಬಂದ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರಕ್ಕೆ ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ವಿಜಯ್​ ಕಿರಗಂದೂರು ಬಂಡವಾಳ ಹೂಡಿದ್ದಾರೆ. ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಗಳಿಸಿದ್ದು ಬರೋಬ್ಬರಿ 1250 ಕೋಟಿ ರೂಪಾಯಿಗೂ ಹೆಚ್ಚು ಎಂಬುದು ಗಮನಾರ್ಹ. ‘ಕೆಜಿಎಫ್​ 2’ ಚಿತ್ರದಿಂದ ಹಲವರ ಬದುಕು ಬದಲಾಯಿತು. ಯಶ್​ ಅವರ ಮಾರುಕಟ್ಟೆ ಹಿರಿದಾಯಿತು.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಈ ಸಿನಿಮಾದಲ್ಲಿ ಬಾಲಿವುಡ್​ ಕಲಾವಿದರಾದ ರವೀನಾ ಟಂಡನ್​, ಸಂಜಯ್​ ದತ್​ ಅವರು ಮಹತ್ವದ ಪಾತ್ರ ಮಾಡಿದ್ದಾರೆ. ಇನ್ನುಳಿದಂತೆ ಪ್ರಕಾಶ್ ರೈ, ವಸಿಷ್ಠ ಸಿಂಹ, ದಿನೇಶ್​ ಮಂಗಳೂರು, ಅಚ್ಯುತ್​ ಕುಮಾರ್​, ರಾವ್​ ರಮೇಶ್​, ಈಶ್ವರಿ ರಾವ್​, ಅರ್ಚನಾ ಜೋಯಿಸ್​ ಮುಂತಾದವರು ನಟಿಸಿದ್ದಾರೆ. ಯಶ್​ಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ಅಭಿನಯಿಸಿದ್ದಾರೆ.

ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ‘ಕೆಜಿಎಫ್​ 2’ ಸಿನಿಮಾವನ್ನು ಮಿಸ್​ ಮಾಡಿಕೊಂಡವರು ಈಗ ಟಿವಿಯಲ್ಲಿ ನೋಡಲು ಕಾಲ ಕೂಡಿಬಂದಿದೆ. ಆಗಸ್ಟ್​ 20ರ ಶನಿವಾರ ಸಂಜೆ 7 ಗಂಟೆಗೆ ಜೀ ಕನ್ನಡದಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ. ವೀಕೆಂಡ್​ನಲ್ಲಿ ಮನೆ ಮಂದಿಯೆಲ್ಲ ಒಟ್ಟಾಗಿ ಕುಳಿತು ಎಂಜಾಯ್​ ಮಾಡಬಹುದು. ಈಗಾಗಲೇ ಬಿತ್ತರ ಆಗುತ್ತಿರುವ ವಿಶೇಷ ಪ್ರೋಮೋಗಳು ಗಮನ ಸೆಳೆಯುತ್ತಿವೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಭುವನ್​ ಗೌಡ ಅವರ ಛಾಯಾಗ್ರಹಣ, ಶಿವಕುಮಾರ್​ ಅವರ ಕಲಾ ನಿರ್ದೇಶನ ಮುಂತಾದವು ಈ ಚಿತ್ರದ ಹೈಲೈಟ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ