AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಾ ಮೇಲೆ ಜನರು ಮಾಡುತ್ತಿರುವ ದೂರುಗಳ ಪಟ್ಟಿನ ಬಿಗ್ ಬಾಸ್​ನಲ್ಲೇ ತೆರೆದಿಟ್ಟ ಯೋಗರಾಜ್ ಭಟ್

ಬಿಗ್ ಬಾಸ್ ಕನ್ನಡದಲ್ಲಿ ಮಾನಸಾ ಅವರ ಆಕ್ರಮಣಕಾರಿ ವರ್ತನೆಯಿಂದಾಗಿ ಜನರಲ್ಲಿ ಆಕ್ರೋಶವಿದೆ. ಯೋಗರಾಜ್ ಭಟ್ ಅವರು ಹೊರಗಿನ ಜನರ ಅಭಿಪ್ರಾಯವನ್ನು ಪರೋಕ್ಷವಾಗಿ ತಿಳಿಸಿದ್ದಾರೆ. ಮಾನಸಾ ಅವರ ಎಲಿಮಿನೇಷನ್ ಸಾಧ್ಯತೆ ಹೆಚ್ಚಿದೆ. ಸಾಮಾಜಿಕ ಜಾಲತಾಣದಲ್ಲಿ ಮಾನಸಾ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.

ಮಾನಸಾ ಮೇಲೆ ಜನರು ಮಾಡುತ್ತಿರುವ ದೂರುಗಳ ಪಟ್ಟಿನ ಬಿಗ್ ಬಾಸ್​ನಲ್ಲೇ ತೆರೆದಿಟ್ಟ ಯೋಗರಾಜ್ ಭಟ್
ಮಾನಸಾ-ಯೋಗರಾಜ್ ಭಟ್
ರಾಜೇಶ್ ದುಗ್ಗುಮನೆ
|

Updated on:Oct 26, 2024 | 10:31 PM

Share

ತುಕಾಲಿ ಸಂತೋಷ್ ಪತ್ನಿ ಮಾನಸಾ ಹೆಚ್ಚು ಚರ್ಚೆ ಆಗುತ್ತಿದ್ದಾರೆ. ಈ ಬಾರಿ ಅವರು ನಾಮಿನೇಟ್ ಆಗಿದ್ದು, ಎಲಿಮಿನೇಷನ್ ಭಯ ಕಾಡುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅವರು ಬೇಗ ಎಲಿಮಿನೇಟ್ ಆಗಲಿ ಎಂದು ಅನೇಕರು ಆಶಿಸುತ್ತಿದ್ದಾರೆ. ಹೀಗಿರುವಾಗಲೇ  ಹೊರಗೆ ಅವರ ಬಗ್ಗೆ ಯಾವ ರೀತಿಯ ಅಭಿಪ್ರಾಯ ಇದೆ ಎಂಬುದನ್ನು ಯೋಗರಾಜ್ ಭಟ್ ಅವರು ಮಾನಸಾಗೆ ಹೇಳಿದ್ದಾರೆ.

ಬಿಗ್ ಬಾಸ್​ನಲ್ಲಿ ಗಂಡುಬೀರಿಯ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಮಾನಸಾ. ಚಿಕ್ಕ ವಿಚಾರ ಸಿಕ್ಕರೂ ಅವರು ಏರು ಧ್ವನಿಯಲ್ಲಿ ಕಿತ್ತಾಡುತ್ತಾರೆ. ಅವರನ್ನು ಅನೇಕರು ಟೀಕೆ ಮಾಡಿದ್ದಾರೆ. ಮಾನಸಾ ಅವರನ್ನು ಈ ರೀತಿ ಟ್ರೋಲ್ ಮಾಡುತ್ತಿರುವುದು ತುಕಾಲಿ ಸಂತೋಷ್​ ಮೇಲೆಯೂ ಪ್ರಭಾವ ಬೀರಿದೆ. ಅವರು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಸೆಕ್ಷನ್​ನ ಆಫ್ ಮಾಡಿ ಇಟ್ಟಿದ್ದಾರೆ. ಆ ಮಟ್ಟಿಗೆ ಅವರಿಗೆ ಕಂಗಾಲಾಗಿದ್ದಾರೆ. ಮಾನಸಾ ಬಗ್ಗೆ ಹೊರಗೆ ಇರುವ ಅಭಿಪ್ರಾಯ ಏನು ಎಂಬುದನ್ನು ಪರೋಕ್ಷವಾಗಿ ಯೋಗರಾಜ್ ಭಟ್ ಹೇಳಿದ್ದಾರೆ.

ಹನುಮಂತ ಅವರು ಕುರಿಗಾಹಿ. ಹೀಗಾಗಿ, ಯಾರು ಯಾವ ರೀತಿಯ ಕುರಿ ಎಂದು ಹೇಳುವ ಆಯ್ಕೆಯನ್ನು ಹನುಮಂತಗೆ ಯೋಗರಾಜ್​ ಭಟ್ ನೀಡಿದ್ದಾರೆ. ಈ ವೇಳೆ ಮಾನಸಾ ಅವರ ಹೆಸರನ್ನು ತೆಗೆದುಕೊಳ್ಳುವಾಗ, ‘ಗಂಡಸಾದ ಮಾನಸಾ ಅವರ ಬಗ್ಗೆ ಹೇಳಿ’ ಎಂದರು ಯೋಗರಾಜ್ ಭಟ್. ನಂತರ, ‘ಗಂಡಸಲ್ಲ.. ಮಾನಸಾ ಬಗ್ಗೆ ಹೇಳಿ’ ಎಂದರು. ‘ಎಲ್ಲರೂ ಇಲ್ಲಿ ಹಾಗೆಯೇ (ಗಂಡಸ ರೀತಿ) ಹೇಳ್ತಾರೆ’ ಎಂದರು ಮಾನಸಾ. ಇದಕ್ಕೆ ಉತ್ತರಿಸಿದ ಯೋಗರಾಜ್ ಭಟ್, ‘ಹೊರಗೂ ಹಾಗೇ ಅಂದ್ಕೊಂಡಿದಾರೆ’ ಎಂದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ನಿಷ್ಪ್ರಯೋಜಕ ವ್ಯಕ್ತಿ ಯಾರು? ಕೇಳಿಬಂತು ಐಶ್ವರ್ಯಾ, ಮಾನಸಾ ಹೆಸರು

ನಂತರ ಮಾನಸಾ ಬಗ್ಗೆ ಹೊರಗೆ ಇರುವ ದೂರುಗಳ ಪಟ್ಟಿಯನ್ನು ಯೋಗರಾಜ್ ಭಟ್ ತೆಗೆದಿಟ್ಟರು. ‘ನಮ್ಮ ನಾಲಿಗೆ ಮೇಲೆ ಹಿಡಿತವಿಲ್ಲ, ಬೇರೆಯವರ ವಿಚಾರಕ್ಕೆ ಮೂಗು ತೂರಿಸುತ್ತೀರಿ. ಇತರರ ಚರ್ಚೆ ಒಳಗೆ ಭಾಗವಹಿಸಿ, ಆ ಚರ್ಚೆಯನ್ನೇ ಬದಲಿಸುವುದು’ ಎಂದರು. ಈ ವಿಚಾರದಲ್ಲಿ ಮಾನಸಾ ಅವರು ತಿದ್ದುಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಮನಾಸಾ ಅವರು ಈ ವಾರ ಎಲಿಮಿನೇಟ್ ಆಗಲೂಬಹುದು ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:29 pm, Sat, 26 October 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್