AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಜೋಕರ್ಸ್ ರೀತಿ ಕಾಣಿಸ್ತಾ ಇದೀರಾ, ನಿಮ್ಮಷ್ಟು ಮುಟ್ಠಾಳರು ಯಾರೂ ಇಲ್ಲ’; ಸುದೀಪ್

ಬಿಗ್ ಬಾಸ್ ಮನೆಯಲ್ಲಿ ಕೂಗಾಟ, ಅರಚಾಟ ಎಲ್ಲರೂ ಕೊಂಚ ಜೋರಾಗಿಯೇ ಮಾಡುತ್ತಿದ್ದಾರೆ. ಇದು ಸುದೀಪ್​ಗೆ ಬೇಸರ ಮೂಡಿಸಿದೆ. ಹೀಗಾಗಿ, ಈ ವಿಚಾರದಲ್ಲಿ ಸುದೀಪ್ ಅವರು ಎಚ್ಚರಿಕೆ ನೀಡಿದ್ದಾರೆ. ನೀವು ಮಾಡ್ತಿರೋದು ಸರಿ ಅಲ್ಲ ಎಂದು ಹೇಳಿದ್ದಾರೆ. ನೀವು ಹೊರಗೆ ಜೋಕರ್ಸ್ ರೀತಿ ಕಾಣಿಸುತ್ತಿದ್ದೀರಿ ಎಂಬುದಾಗಿ ಸುದೀಪ್ ಎಚ್ಚರಿಕೆ ನೀಡಿದರು.

‘ನೀವು ಜೋಕರ್ಸ್ ರೀತಿ ಕಾಣಿಸ್ತಾ ಇದೀರಾ, ನಿಮ್ಮಷ್ಟು ಮುಟ್ಠಾಳರು ಯಾರೂ ಇಲ್ಲ’; ಸುದೀಪ್
Bbk (2)
ರಾಜೇಶ್ ದುಗ್ಗುಮನೆ
|

Updated on: Nov 01, 2025 | 11:01 PM

Share

ಬಿಗ್ ಬಾಸ್ ಮನೆಯಲ್ಲಿ ಈ ವಾರ ಸಾಕಷ್ಟು ಬೆಳವಣಿಗೆ ನಡೆದಿದೆ. ಎಲ್ಲರೂ ತಮ್ಮನ್ನು ತಾವು ಸುಪ್ರೀಂ ಎಂದು ಅಂದುಕೊಂಡಿದ್ದಾರೆ. ತಾವು ತಮ್ಮ ಆಟವನ್ನು ಅದ್ಭುತವಾಗಿ ಆಡುತ್ತಿದ್ದಾಗಿ ಅಂದುಕೊಂಡಿದ್ದಾರೆ. ಈ ಬಗ್ಗೆ ಸುದೀಪ್ ಅವರು ಎಚ್ಚರಿಕೆ ಒಂದನ್ನು ನೀಡಿದ್ದಾರೆ. ಹೊರಗಿನ ಜಗತ್ತಿಗೆ ಎಲ್ಲರೂ ಹೇಗೆ ಕಾಣಿಸುತ್ತಿದ್ದಾರೆ ಎಂದು ಸುದೀಪ್ ಅವರು ವಿವರಿಸಿದರು.

ಬಿಗ್ ಬಾಸ್ ಮನೆಯಲ್ಲಿ ಕೂಗಾಟ, ಅರಚಾಟ ಎಲ್ಲರೂ ಕೊಂಚ ಜೋರಾಗಿಯೇ ಮಾಡುತ್ತಿದ್ದಾರೆ. ಇದು ಸುದೀಪ್​ಗೆ ಬೇಸರ ಮೂಡಿಸಿದೆ. ಹೀಗಾಗಿ, ಈ ವಿಚಾರದಲ್ಲಿ ಸುದೀಪ್ ಅವರು ಎಚ್ಚರಿಕೆ ನೀಡಿದ್ದಾರೆ. ನೀವು ಮಾಡ್ತಿರೋದು ಸರಿ ಅಲ್ಲ ಎಂದು ಹೇಳಿದ್ದಾರೆ. ನೀವು ಹೊರಗೆ ಜೋಕರ್ಸ್ ರೀತಿ ಕಾಣಿಸುತ್ತಿದ್ದೀರಿ ಎಂಬುದಾಗಿ ಸುದೀಪ್ ಎಚ್ಚರಿಕೆ ನೀಡಿದರು. ‘ಹೊರಗೆ ಸಾಕಷ್ಟು ದೃಷ್ಟಿ ಕೋನ ಇದೆ. ನಿಮಗೆ ಏನು ಬೇಕೋ ತೆಗೆದುಕೊಳ್ಳಿ, ನಿಮಗೇ ಏನು ಬೇಡವೋ ಬಿಡಿ’ ಎಂದರು ಸುದೀಪ್.

ಇದನ್ನೂ ಓದಿ: ‘ನಿಮ್ಮ ಬಿಸ್ನೆಸ್​ನಲ್ಲಿ ನೀವಿರಿ’; ರಕ್ಷಿತಾ ಶೆಟ್ಟಿ ತಂಟೆಗೆ ಬಂದ ಅಶ್ವಿನಿ, ರಿಷಾಗೆ ಸುದೀಪ್ ಎಚ್ಚರಿಕೆ

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಕನ್ನಡದ ಕಂಪು; ವಿಶ್ ತಿಳಿಸಿದ ಸುದೀಪ್
Image
ಟಾಲಿವುಡ್​ಗೆ 50 ಕೆಜಿ ಚಿನ್ನ ಧರಿಸಿ ಬಂದ ನಟಿ ಸೋನಾಕ್ಷಿ ಸಿನ್ಹಾ
Image
‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’: ಯಶ್  
Image
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ

‘ಎಲ್ಲರಿಗೂ ಗುಂಪು ಮಾಡಲಾಗಿತ್ತು. ಆದರೆ, ಗುಂಪು ಬಿಟ್ಟು ಹೊರಗೆ ಇದ್ರಿ. ರೂಲ್ಸ್ ಬಿಟ್ಟು ಹೋದ್ರಿ. ಬ್ಲ್ಯೂ ಹಾಗೂ ರೆಡ್ ಟೀಂ ಅನ್ನೋದು ಇರಲಿಲ್ಲ. ನೀವು ಅದಕ್ಕೆ ಬೆಲೆ ಕೊಡಲೇ ಇಲ್ಲ. ಬಿಗ್ ಬಾಸ್’ ಎಂದು ಸುದೀಪ್ ಹೇಳಿದ್ದಾರೆ.

ಕಳೆದ ವಾರ ಸ್ಪರ್ಧಿಗಳ ನಾಮಿನೇಟ್ ಆದಾಗ ಕುಟುಂಬದವರು ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ಸ್ಪರ್ಧಿಗಳನ್ನು ಮನೆಯವರು ವಹಿಸಿಕೊಂಡು ಬಂದಿದ್ದರು. ಇದನ್ನು ಕೇಳಿ  ಸ್ಪರ್ಧಿಗಳಿಗೂ ಖುಷಿ ಆಯಿತು. ಈ ಬಗ್ಗೆ ಸುದೀಪ್ ಎಚ್ಚರಿಕೆ ನೀಡಿದ್ದಾರೆ. ‘ಮನೆಯವರ ಮಾತನ್ನು ನೀವು ನಂಬಿದರೆ, ನಿಮ್ಮಷ್ಟು ದೊಡ್ಡ ಮುಟ್ಠಾಳರು ಮತ್ತೊಬ್ಬರು ಇಲ್ಲ’ ಎಂದು ಸುದೀಪ್ ಎಚ್ಚರಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More