AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನಡೆದುಕೊಂಡ ರೀತಿ ನಿಮ್ಮ ವ್ಯಕ್ತಿತ್ವಕ್ಕೆ ಸೂಕ್ತವಲ್ಲ’; ಪಂಚಾಯ್ತಿಯಲ್ಲಿ ವೈಷ್ಣವಿಗೆ ಬುದ್ಧಿ ಹೇಳಿದ ಕಿಚ್ಚ ಸುದೀಪ್​

ಈ ವಾರ ವೈಷ್ಣವಿ ತಾಳ್ಮೆ ಕಳೆದುಕೊಂಡಿದ್ದರು. ಪ್ರಶಾಂತ್​ಗೆ ಕೈ ಎತ್ತಿ ಹೊಡೆಯೋಕೂ ಮುಂದಾಗಿದ್ದರು. ಈ ವಿಚಾರದಲ್ಲಿ ಕಿಚ್ಚ ಸುದೀಪ್​ ವೈಷ್ಣವಿಗೆ ಪಾಠ ಹೇಳಿದ್ದಾರೆ.

‘ನೀವು ನಡೆದುಕೊಂಡ ರೀತಿ ನಿಮ್ಮ ವ್ಯಕ್ತಿತ್ವಕ್ಕೆ ಸೂಕ್ತವಲ್ಲ’; ಪಂಚಾಯ್ತಿಯಲ್ಲಿ ವೈಷ್ಣವಿಗೆ ಬುದ್ಧಿ ಹೇಳಿದ ಕಿಚ್ಚ ಸುದೀಪ್​
ವೈಷ್ಣವಿ-ಸುದೀಪ್​
TV9 Web
| Edited By: |

Updated on:Jul 25, 2021 | 2:15 PM

Share

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಗೌಡ ಯಾರ ತಂಟೆಗೂ ಅಷ್ಟಾಗಿ ಹೋಗುವುದಿಲ್ಲ. ಜಗಳವಾಡುವ ಪರಿಸ್ಥಿತಿ ಬಂದರೂ ಅದನ್ನು ತಿಳಿ ಗೊಳಿಸುವ ಕಲೆ ವೈಷ್ಣವಿಗೆ ಕರಗತವಾಗಿದೆ. ಹೀಗಾಗಿ ಬಿಗ್​ ಬಾಸ್​ ಮನೆಯಲ್ಲಿ ಯಾರ ಜತೆಗೂ ಅವರು ಜಗಳ ಮಾಡಿಕೊಂಡಿಲ್ಲ. ಆದರೆ ಈ ವಾರ ಅವರು ತಾಳ್ಮೆ ಕಳೆದುಕೊಂಡಿದ್ದರು. ಪ್ರಶಾಂತ್​ಗೆ ಕೈ ಎತ್ತಿ ಹೊಡೆಯೋಕೂ ಮುಂದಾಗಿದ್ದರು. ಈ ವಿಚಾರದಲ್ಲಿ ಕಿಚ್ಚ ಸುದೀಪ್​ ವೈಷ್ಣವಿಗೆ ಪಾಠ ಹೇಳಿದ್ದಾರೆ.

ಈ ವಾರ ಸ್ಪರ್ಧಿಗಳು ಬೆನ್ನಿಗೆ ಗೋಣಿಚೀಲ ಕಟ್ಟಿಕೊಂಡು ವೃತ್ತಗಳ ಒಳಗೆ ಓಡುವ ಟಾಸ್ಕ್​ ನೀಡಲಾಗಿತ್ತು. ಮುಂದಿನ ಸದಸ್ಯರ ಚೀಲದಲ್ಲಿರುವ ವಸ್ತುವನ್ನು ಖಾಲಿ ಮಾಡಬೇಕು. ಈ ವೇಳೆ ವೈಷ್ಣವಿ ಹಿಂದೆ ಇದ್ದ ಪ್ರಶಾಂತ್​ ಚೀಲವನ್ನು ಗಟ್ಟಿಯಾಗಿ ಎಳೆದಿದ್ದರು. ಇದು ವೈಷ್ಣವಿ ಅವರ ಕೋಪಕ್ಕೆ ಕಾರಣವಾಗಿತ್ತು. ಹೀಗಾಗಿ, ಅವರು ಸಿಟ್ಟಿನಿಂದ ಪ್ರಶಾಂತ್​ ಮೇಲೆ ಕೈ ಎತ್ತಿದ್ದಾರೆ. ವೈಷ್ಣವಿ ಅವರ ನಡೆ ವೀಕ್ಷಕರಲ್ಲಿ ಅಚ್ಚರಿ ಮೂಡಿಸಿತ್ತು. ಈ ವಿಚಾರದಲ್ಲಿ ಸುದೀಪ್​ ಕೂಡ ಮಾತನಾಡಿದ್ದಾರೆ.

‘ವೈಷ್ಣವಿ ಅವರೇ ಅದೊಂದು ಟಾಸ್ಕ್​. ಆದರೆ, ನೀವೇಕೆ ಅಷ್ಟು ಗಂಭೀರವಾದಿರಿ ಎಂಬುದು ನನಗೆ ಗೊತ್ತಾಗಲಿಲ್ಲ. ಅದು ಅಗ್ರೆಸ್ಸಿವ್​ ಆಗಿ ಆಡುವ ಟಾಸ್ಕ್​. ಅದನ್ನು ಹಾಗೆಯೇ ಆಡಬೇಕು. ಈಗ ಕಬ್ಬಡ್ಡಿಯನ್ನು ಆರಾಮಾಗಿ ಆಡಬೇಕು ಅಂದರೆ ಆಗಲ್ಲ. ನಿಮಗೆ ಕೊಟ್ಟ ಆ ಟಾಸ್ಕ್​ಅನ್ನು ಬೇರೆ ರೀತಿ ಆಡಬೇಕು ಎಂದರೆ ಅದು ಸಾಧ್ಯವಿತ್ತೇ? ಹಾಗೆ ಬೇರೆ ಮಾರ್ಗ ಇತ್ತು ಎಂದಾದರೆ ನಮಗೆ ಹೇಳಿ ನೋಡೋಣ. ನಾವು ಅದನ್ನು ಸ್ವೀಕರಿಸುತ್ತೇವೆ’ ಎಂದರು ಸುದೀಪ್​.

ಇದಕ್ಕೆ ವೈಷ್ಣವಿ ಬೇಸರ ಮಾಡಿಕೊಂಡು ಕ್ಷಮೆ ಕೇಳಿದರು. ಅದಕ್ಕೆ ಸುದೀಪ್​, ‘ನೀವು ಕ್ಷಮೆ ಕೇಳೋದು ಬೇಡ. ಆಟವಾಡುವಾಗ ಸಿಟ್ಟಿನಲ್ಲಿ ಆ ರೀತಿ ಆಗುತ್ತದೆ ನಿಜ. ನಂತರ ನೀವು ಹೇಗೆ ನಡೆದುಕೊಳ್ಳುತ್ತೀರಿ ಎನ್ನುವುದರ ಮೇಲೆ ನಿಮ್ಮ ವೈಕ್ತಿತ್ವ ನಿರ್ಧಾರವಾಗುತ್ತದೆ. ನೀವು ಬಿಗ್​ ಬಾಸ್ ಮನೆಯಲ್ಲಿ ಈ ವಾರ ನಡೆದುಕೊಂಡಿದ್ದು ನಿಮ್ಮ ವ್ಯಕ್ತಿತ್ವಕ್ಕೆ ಸೂಕ್ತವಲ್ಲ’ ಎಂದು ಕಿವಿ ಮಾತು ಹೇಳಿದರು.

ಇದನ್ನೂ ಓದಿ: ‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ, ಕಿಚ್ಚ ಕೊಟ್ಟ ಉತ್ತರ ಏನು?

ವೈಷ್ಣವಿ ಕಣ್ಣಲ್ಲಿ ನೀರು ಹಾಕಿಸಿದ ಪ್ರಶಾಂತ್​; ಫಿನಾಲೆಗೂ ಮೊದಲೇ ಫ್ರೆಂಡ್​ಶಿಪ್​ನಲ್ಲಿ ಬ್ರೇಕಪ್?

Published On - 2:14 pm, Sun, 25 July 21

Follow Us
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್