AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನಡೆದುಕೊಂಡ ರೀತಿ ನಿಮ್ಮ ವ್ಯಕ್ತಿತ್ವಕ್ಕೆ ಸೂಕ್ತವಲ್ಲ’; ಪಂಚಾಯ್ತಿಯಲ್ಲಿ ವೈಷ್ಣವಿಗೆ ಬುದ್ಧಿ ಹೇಳಿದ ಕಿಚ್ಚ ಸುದೀಪ್​

ಈ ವಾರ ವೈಷ್ಣವಿ ತಾಳ್ಮೆ ಕಳೆದುಕೊಂಡಿದ್ದರು. ಪ್ರಶಾಂತ್​ಗೆ ಕೈ ಎತ್ತಿ ಹೊಡೆಯೋಕೂ ಮುಂದಾಗಿದ್ದರು. ಈ ವಿಚಾರದಲ್ಲಿ ಕಿಚ್ಚ ಸುದೀಪ್​ ವೈಷ್ಣವಿಗೆ ಪಾಠ ಹೇಳಿದ್ದಾರೆ.

‘ನೀವು ನಡೆದುಕೊಂಡ ರೀತಿ ನಿಮ್ಮ ವ್ಯಕ್ತಿತ್ವಕ್ಕೆ ಸೂಕ್ತವಲ್ಲ’; ಪಂಚಾಯ್ತಿಯಲ್ಲಿ ವೈಷ್ಣವಿಗೆ ಬುದ್ಧಿ ಹೇಳಿದ ಕಿಚ್ಚ ಸುದೀಪ್​
ವೈಷ್ಣವಿ-ಸುದೀಪ್​
TV9 Web
| Edited By: |

Updated on:Jul 25, 2021 | 2:15 PM

Share

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಗೌಡ ಯಾರ ತಂಟೆಗೂ ಅಷ್ಟಾಗಿ ಹೋಗುವುದಿಲ್ಲ. ಜಗಳವಾಡುವ ಪರಿಸ್ಥಿತಿ ಬಂದರೂ ಅದನ್ನು ತಿಳಿ ಗೊಳಿಸುವ ಕಲೆ ವೈಷ್ಣವಿಗೆ ಕರಗತವಾಗಿದೆ. ಹೀಗಾಗಿ ಬಿಗ್​ ಬಾಸ್​ ಮನೆಯಲ್ಲಿ ಯಾರ ಜತೆಗೂ ಅವರು ಜಗಳ ಮಾಡಿಕೊಂಡಿಲ್ಲ. ಆದರೆ ಈ ವಾರ ಅವರು ತಾಳ್ಮೆ ಕಳೆದುಕೊಂಡಿದ್ದರು. ಪ್ರಶಾಂತ್​ಗೆ ಕೈ ಎತ್ತಿ ಹೊಡೆಯೋಕೂ ಮುಂದಾಗಿದ್ದರು. ಈ ವಿಚಾರದಲ್ಲಿ ಕಿಚ್ಚ ಸುದೀಪ್​ ವೈಷ್ಣವಿಗೆ ಪಾಠ ಹೇಳಿದ್ದಾರೆ.

ಈ ವಾರ ಸ್ಪರ್ಧಿಗಳು ಬೆನ್ನಿಗೆ ಗೋಣಿಚೀಲ ಕಟ್ಟಿಕೊಂಡು ವೃತ್ತಗಳ ಒಳಗೆ ಓಡುವ ಟಾಸ್ಕ್​ ನೀಡಲಾಗಿತ್ತು. ಮುಂದಿನ ಸದಸ್ಯರ ಚೀಲದಲ್ಲಿರುವ ವಸ್ತುವನ್ನು ಖಾಲಿ ಮಾಡಬೇಕು. ಈ ವೇಳೆ ವೈಷ್ಣವಿ ಹಿಂದೆ ಇದ್ದ ಪ್ರಶಾಂತ್​ ಚೀಲವನ್ನು ಗಟ್ಟಿಯಾಗಿ ಎಳೆದಿದ್ದರು. ಇದು ವೈಷ್ಣವಿ ಅವರ ಕೋಪಕ್ಕೆ ಕಾರಣವಾಗಿತ್ತು. ಹೀಗಾಗಿ, ಅವರು ಸಿಟ್ಟಿನಿಂದ ಪ್ರಶಾಂತ್​ ಮೇಲೆ ಕೈ ಎತ್ತಿದ್ದಾರೆ. ವೈಷ್ಣವಿ ಅವರ ನಡೆ ವೀಕ್ಷಕರಲ್ಲಿ ಅಚ್ಚರಿ ಮೂಡಿಸಿತ್ತು. ಈ ವಿಚಾರದಲ್ಲಿ ಸುದೀಪ್​ ಕೂಡ ಮಾತನಾಡಿದ್ದಾರೆ.

‘ವೈಷ್ಣವಿ ಅವರೇ ಅದೊಂದು ಟಾಸ್ಕ್​. ಆದರೆ, ನೀವೇಕೆ ಅಷ್ಟು ಗಂಭೀರವಾದಿರಿ ಎಂಬುದು ನನಗೆ ಗೊತ್ತಾಗಲಿಲ್ಲ. ಅದು ಅಗ್ರೆಸ್ಸಿವ್​ ಆಗಿ ಆಡುವ ಟಾಸ್ಕ್​. ಅದನ್ನು ಹಾಗೆಯೇ ಆಡಬೇಕು. ಈಗ ಕಬ್ಬಡ್ಡಿಯನ್ನು ಆರಾಮಾಗಿ ಆಡಬೇಕು ಅಂದರೆ ಆಗಲ್ಲ. ನಿಮಗೆ ಕೊಟ್ಟ ಆ ಟಾಸ್ಕ್​ಅನ್ನು ಬೇರೆ ರೀತಿ ಆಡಬೇಕು ಎಂದರೆ ಅದು ಸಾಧ್ಯವಿತ್ತೇ? ಹಾಗೆ ಬೇರೆ ಮಾರ್ಗ ಇತ್ತು ಎಂದಾದರೆ ನಮಗೆ ಹೇಳಿ ನೋಡೋಣ. ನಾವು ಅದನ್ನು ಸ್ವೀಕರಿಸುತ್ತೇವೆ’ ಎಂದರು ಸುದೀಪ್​.

ಇದಕ್ಕೆ ವೈಷ್ಣವಿ ಬೇಸರ ಮಾಡಿಕೊಂಡು ಕ್ಷಮೆ ಕೇಳಿದರು. ಅದಕ್ಕೆ ಸುದೀಪ್​, ‘ನೀವು ಕ್ಷಮೆ ಕೇಳೋದು ಬೇಡ. ಆಟವಾಡುವಾಗ ಸಿಟ್ಟಿನಲ್ಲಿ ಆ ರೀತಿ ಆಗುತ್ತದೆ ನಿಜ. ನಂತರ ನೀವು ಹೇಗೆ ನಡೆದುಕೊಳ್ಳುತ್ತೀರಿ ಎನ್ನುವುದರ ಮೇಲೆ ನಿಮ್ಮ ವೈಕ್ತಿತ್ವ ನಿರ್ಧಾರವಾಗುತ್ತದೆ. ನೀವು ಬಿಗ್​ ಬಾಸ್ ಮನೆಯಲ್ಲಿ ಈ ವಾರ ನಡೆದುಕೊಂಡಿದ್ದು ನಿಮ್ಮ ವ್ಯಕ್ತಿತ್ವಕ್ಕೆ ಸೂಕ್ತವಲ್ಲ’ ಎಂದು ಕಿವಿ ಮಾತು ಹೇಳಿದರು.

ಇದನ್ನೂ ಓದಿ: ‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ, ಕಿಚ್ಚ ಕೊಟ್ಟ ಉತ್ತರ ಏನು?

ವೈಷ್ಣವಿ ಕಣ್ಣಲ್ಲಿ ನೀರು ಹಾಕಿಸಿದ ಪ್ರಶಾಂತ್​; ಫಿನಾಲೆಗೂ ಮೊದಲೇ ಫ್ರೆಂಡ್​ಶಿಪ್​ನಲ್ಲಿ ಬ್ರೇಕಪ್?

Published On - 2:14 pm, Sun, 25 July 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು