AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಟೈಮ್ ಸ್ಟಾರ್ಟ್ ಆಗಿದೆ’; ಗಿಲ್ಲಿಗೆ ವಾರ್ನ್ ಮಾಡಿ ಬಿಗ್ ಬಾಸ್ ಬಳಿ ಅಶ್ವಿನಿ ಗೌಡ ವಿಶೇಷ ಮನವಿ

ಬಿಗ್ ಬಾಸ್ ಕನ್ನಡ ಮನೆಯಲ್ಲಿ ಅಶ್ವಿನಿ ಗೌಡ ಮತ್ತು ಗಿಲ್ಲಿ ನಡುವಿನ ಜಗಳ ತಾರಕಕ್ಕೇರಿದೆ. ಗಿಲ್ಲಿಗೆ ನೇರವಾಗಿ ಎಚ್ಚರಿಕೆ ನೀಡಿದ ಅಶ್ವಿನಿ, "ನಿನ್ನ ಟೈಮ್ ಸ್ಟಾರ್ಟ್ ಆಗಿದೆ" ಎಂದಿದ್ದಾರೆ. ನಾಮಿನೇಷನ್ ವೇಳೆ ನಡೆದ ಈ ವಾಕ್ಸಮರದಲ್ಲಿ ಗಿಲ್ಲಿ ಆರೋಪಗಳಿಗೆ ಅಶ್ವಿನಿ ಕೆರಳಿದರು. ನಂತರ ತಾಳ್ಮೆ ಕಳೆದುಕೊಂಡು ಬಿಗ್ ಬಾಸ್ ಬಳಿ ವಿಶೇಷ ಮನವಿ ಮಾಡಿಕೊಂಡರು. ಈ ಘಟನೆ ಜನವರಿ 5ರ ಸಂಚಿಕೆಯಲ್ಲಿ ಹೈಲೈಟ್ ಆಗಿದೆ.

‘ನಿನ್ನ ಟೈಮ್ ಸ್ಟಾರ್ಟ್ ಆಗಿದೆ’; ಗಿಲ್ಲಿಗೆ ವಾರ್ನ್ ಮಾಡಿ ಬಿಗ್ ಬಾಸ್ ಬಳಿ ಅಶ್ವಿನಿ ಗೌಡ ವಿಶೇಷ ಮನವಿ
ಅಶ್ವಿನಿ ಹಾಗೂ ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on:Jan 06, 2026 | 6:59 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಹಾವು ಮುಂಗುಸಿ ರೀತಿ ಯಾವಾಗಲೂ ಕಚ್ಚಾಡುತ್ತಾ ಇರುತ್ತಾರೆ. ಇವರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಅಶ್ವಿನಿ ಗೌಡ ಅವರು ಈ ಮೊದಲು ಸಿಟ್ಟನ್ನು ಬಿಟ್ಟು ಮೌನಕ್ಕೆ ಶರಣಾಗುವ ನಿರ್ಧಾರಕ್ಕೆ ಬಂದಿದ್ದರು. ಆದರೆ, ಪರಿಸ್ಥಿತಿ ಹಾಗೂ ಗಿಲ್ಲಿ ನಟನ ಚುಚ್ಚು ಮಾತುಗಳು ಇದಕ್ಕೆ ಅವಕಾಶ ಕೊಡುತ್ತಿಲ್ಲ. ಅವರು ಮತ್ತೆ ಮತ್ತೆ ಕೆರಳುತ್ತಿದ್ದಾರೆ. ಈಗ ಗಿಲ್ಲಿಗೆ ಅಶ್ವಿನಿ ಗೌಡ ನೇರವಾಗಿ ಗಿಲ್ಲಿಗೆ ವಾರ್ನ್ ಮಾಡಿದ್ದಾರೆ. ಜನವರಿ 5ರ ಎಪಿಸೋಡ್​​ನಲ್ಲಿ ಇದು ಹೈಲೈಟ್ ಆಗಿದೆ.

ಗಿಲ್ಲಿ ಅವರು ಅಶ್ವಿನಿ ಅವರನ್ನು ನಾಮಿನೇಟ್ ಮಾಡಿದರು. ಈ ವೇಳೆ ಅಶ್ವಿನಿ ವಿರುದ್ಧ ಗಿಲ್ಲಿ ಒಂದಷ್ಟು ಆರೋಪಗಳನ್ನು ಮಾಡಿದರು. ಇತ್ತೀಚೆಗೆ ರಾಶಿಕಾ ವಿರುದ್ಧ ಆರೋಪ ಮಾಡುವಾಗ ಅಶ್ವಿನಿ ಅವರು, ‘ರಾಶಿಕಾಗೆ ಮಲಗೋಕೆ ರಘು ತೊಡೆ ಬೇಕು’ ಎಂದು ಆರೋಪಿಸಿದ್ದರು. ಇದನ್ನು ಗಿಲ್ಲಿ ಖಂಡಿಸಿದ್ದಾರೆ. ‘ಅಶ್ವಿನಿ ಗೌಡ 2.O’ ಬಗ್ಗೆಯೂ ಪ್ರಶ್ನೆ ಮಾಡಿದ್ದಾರೆ. ಗಿಲ್ಲಿಯನ್ನು ಕೊಚ್ಚೆ ಎಂದು ಕರೆದರು ಅಶ್ವಿನಿ.

ಆ ಬಳಿಕ ಅಶ್ವಿನಿ ಅವರು ಗಿಲ್ಲಿಯನ್ನು ನಾಮಿನೇಟ್ ಮಾಡಿದರು. ಈ ವೇಳೆಯೂ ಕಿತ್ತಾಟ ನಡೆದಿದೆ. ‘ನಿನ್ನ ಟೈಮ್ ಸ್ಟಾರ್ಟ್ ಆಗಿದೆ’ ಎಂದು ಅಶ್ವಿನಿ ಅವರು ಗಿಲ್ಲಿಗೆ ಎಚ್ಚರಿಕೆ ನೀಡಿದರು. ಇದಕ್ಕೆ ಗಿಲ್ಲಿ ತಲೆಕೆಡಿಸಿಕೊಳ್ಳಲಿಲ್ಲ. ನಾಮಿನೇಷನ್ ಪ್ರಕ್ರಿಯೆ ಮುಗಿದ ಬಳಿಕೆ ಎಲ್ಲರೂ ಪದೇ ಪದೇ ಅಶ್ವಿನಿ ಅವರನ್ನು ಟ್ರಿಗರ್ ಮಾಡಿದರು. ಇದರಿಂದ ಅಶ್ವಿನಿ ಅವರಿಗೆ ಕೋಪ ಬಂದಿದೆ. ಆದರೂ ಅದನ್ನು ಅವರ ಅದುಮಿಟ್ಟುಕೊಂಡರು. ‘ಇದೆಲ್ಲವನ್ನೂ ಸಹಿಸಿಕೊಳ್ಳಲು ತಾಳ್ಮೆ ಕೊಡಿ’ ಎಂದು ಬಿಗ್ ಬಾಸ್ ಬಳಿ ವಿಶೇಷ ಮನವಿ ಮಾಡಿಕೊಂಡರು.

ಇದನ್ನೂ ಓದಿ: ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಬಿಗ್ ಬಾಸ್ ಬಾಗಿಲು?

ಅಶ್ವಿನಿ ಗೌಡ ಅವರು ಫಿನಾಲೆಗೆ ಏರುವ ಕನಸು ಕಾಣುತ್ತಿದ್ದಾರೆ. ಅವರು ಗೆಲ್ಲಬೇಕು ಎಂಬುದು ಅಭಿಮಾನಿಗಳ ಕೋರಿಕೆ. ಗಿಲ್ಲಿ ನಟ ಅವರು ಅವರಿಗೆ ಉತ್ತಮ ಪ್ರತಿಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:59 am, Tue, 6 January 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!