AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಜನಿಸಿದ ನಂತರ ಹೇಗಿದ್ದಾರೆ ‘ಯುವರತ್ನ’ ನಟಿ ಸಾಯೆಶಾ? ಇಲ್ಲಿದೆ ಲೇಟೆಸ್ಟ್​ ಫೋಟೋ

ನಿರ್ದೇಶಕ ಅಟ್ಲೀ ಮಂಗಳವಾರ (ಸೆಪ್ಟೆಂಬರ್ 21) 35ನೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಸೆಲೆಬ್ರಿಟಿಗಳಿಗೆ ಆಹ್ವಾನ ಇತ್ತು. ಅದೇ ರೀತಿ ಆರ್ಯ ಹಾಗೂ ಸಾಯೆಶಾ ಕೂಡ ಈ ಸೆಲಬ್ರೇಷನ್​ನಲ್ಲಿ ಭಾಗಿಯಾಗಿದ್ದಾರೆ.

ಮಗು ಜನಿಸಿದ ನಂತರ ಹೇಗಿದ್ದಾರೆ ‘ಯುವರತ್ನ’ ನಟಿ ಸಾಯೆಶಾ? ಇಲ್ಲಿದೆ ಲೇಟೆಸ್ಟ್​ ಫೋಟೋ
ಮಗು ಜನಿಸಿದ ನಂತರ ಹೇಗಿದ್ದಾರೆ ‘ಯುವರತ್ನ’ ನಟಿ ಸಾಯೆಶಾ? ಇಲ್ಲಿದೆ ಲೇಟೆಸ್ಟ್​ ಫೋಟೋ
TV9 Web
| Edited By: |

Updated on: Sep 22, 2021 | 8:08 PM

Share

ನಟಿ ಸಾಯೆಶಾ ಹಾಗೂ ಆರ್ಯ ದಂಪತಿ ಇತ್ತೀಚೆಗೆ ಸಿಹಿಸುದ್ದಿಯನ್ನು ಹಂಚಿಕೊಂಡಿದ್ದರು. ಹೆಣ್ಣು ಮಗುವಿಗೆ ತಂದೆ ಆಗಿರುವ ಬಗ್ಗೆ ಆರ್ಯ ಘೋಷಣೆ ಮಾಡಿಕೊಂಡಿದ್ದರು. ಗರ್ಭಿಣಿ ಆದ ನಂತರದಲ್ಲಿ ಸಾಯೆಶಾ ಅಭಿಮಾನಿಗಳ ಕಣ್ಣಿಗೆ ಬಿದ್ದಿಲ್ಲ. ಮಗು ಜನಿಸಿದ ನಂತರ ಇದೇ ಮೊದಲ ಬಾರಿಗೆ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಅವರನ್ನು ನೋಡಿ ಅಭಿಮಾನಿಗಳು ಸಖತ್​ ಖುಷಿ ಆಗಿದ್ದಾರೆ.

ಗರ್ಭಿಣಿ ಆದ ನಂತರ ದೇಹ ಸ್ವಲ್ಪ ಆಕಾರ ಕಳೆದುಕೊಳ್ಳುತ್ತದೆ. ಮಗು ಜನಿಸಿದ ನಂತರವಂತೂ ದೇಹ ಮೊದಲಿನ ಸ್ಥಿತಿಗೆ ಮರಳೋಕೆ ಸ್ವಲ್ಪ ಸಮಯಬೇಕು. ಅನೇಕ ಹೀರೋಯಿನ್​ಗಳು ಮಗು ಜನಿಸಿದ ಕೆಲ ಸಮಯದ ನಂತರ ಜಿಮ್​ನಲ್ಲಿ ಬೆವರು ಹರಿಸುತ್ತಾರೆ. ಹೀಗಾಗಿ, ಸಾಯೆಶಾ ಹೇಗಾಗಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಕಾಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ.

ನಿರ್ದೇಶಕ ಅಟ್ಲೀ ಮಂಗಳವಾರ (ಸೆಪ್ಟೆಂಬರ್ 21) 35ನೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಸೆಲೆಬ್ರಿಟಿಗಳಿಗೆ ಆಹ್ವಾನ ಇತ್ತು. ಅದೇ ರೀತಿ ಆರ್ಯ ಹಾಗೂ ಸಾಯೆಶಾ ಕೂಡ ಈ ಸೆಲಬ್ರೇಷನ್​ನಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಫೋಟೋ ಪೋಸ್ಟ್ ಮಾಡಿರುವ ಆರ್ಯ, ‘ಹುಟ್ಟುಹಬ್ಬದ ಶುಭಾಶಯಗಳು ಅಟ್ಲೀ. ನಿಮಗೆ ಶುಭವಾಗಲಿ. ನನ್ನ ಜೀವನದ ಅತ್ಯಂತ ಸ್ಮರಣೀಯ ರಾತ್ರಿಗೆ ತುಂಬಾ ಧನ್ಯವಾದಗಳು. ಲವ್ ಯು ಬೇಬಿ’ ಎಂದು ಬರೆದುಕೊಂಡಿದ್ದಾರೆ.

ಈ ಪಾರ್ಟಿಯ ಫೋಟೋಗಳು ವೈರಲ್​ ಆಗಿವೆ. ಸಾಯೆಶಾ ಪತಿಯ ಜತೆ ನಿಂತಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಶೀಘ್ರವೇ ಅವರು ನಟನೆಗೆ ಮರಳಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಸಾಯೆಶಾಗೆ ಮಗು ಜನಿಸಿದ ನಂತರದಲ್ಲಿ ಆರ್ಯ ವಿರುದ್ಧ ಆರೋಪವೊಂದು ಕೇಳಿ ಬಂದಿತ್ತು. ಜರ್ಮನಿಯಲ್ಲಿ ನೆಲೆಸಿರುವ ಶ್ರೀಲಂಕಾ ಮೂಲದ ತಮಿಳು ಮಹಿಳೆಗೆ ನಟ ಆರ್ಯ ಅವರು ಮೋಸ ಮಾಡಿದ್ದಾರೆ ಎನ್ನಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಚೆನ್ನೈ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ನಿಜವಾದ ಆರೋಪಿಗಳನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದರು. ಆ ಮೂಲಕ ನಟ ಆರ್ಯ ನಿಟ್ಟುಸಿರು ಬಿಟ್ಟಿದ್ದರು.

ಇದನ್ನೂ ಓದಿ: ಸದ್ದಿಲ್ಲದೆ ಆರಂಭವಾಯ್ತು ಅಟ್ಲೀ-ಶಾರುಖ್​ ಸಿನಿಮಾ ಶೂಟಿಂಗ್; ಲೀಕ್​ ಆಯ್ತು ಸೆಟ್​ ಫೋಟೋ

ಶಾರುಖ್​ ಖಾನ್​-ಅಟ್ಲೀ ಸಿನಿಮಾಗೆ ಜನಪ್ರಿಯ ವೆಬ್​ ಸೀರಿಸ್ ‘ಮನಿ ಹೈಸ್ಟ್’​ ಕಥೆ?

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​