AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಟಿವಿಯಲ್ಲಿ ಬರೋಕೆ ರೆಡಿ ಆಯ್ತು ‘ಕೆಜಿಎಫ್ 2’; ಹೊಸ ಅಪ್ಡೇಟ್ ನೀಡಿದ ಜೀ ಕನ್ನಡ

‘ಕೆಜಿಎಫ್ 2’ ಚಿತ್ರವನ್ನು ಸಾಕಷ್ಟು ಮಂದಿ ಥಿಯೇಟರ್​ನಲ್ಲಿ ಕಣ್ತುಂಬಿಕೊಂಡರು. ನಂತರ ಒಟಿಟಿಯಲ್ಲಿ ರಿಲೀಸ್ ಆದಾಗಲೂ ಸಿನಿಮಾ ನೋಡಿ ಖುಷಿಪಟ್ಟರು. ಈಗ ಸಿನಿಮಾ ಟಿವಿಯಲ್ಲಿ ಬರುತ್ತಿದೆ.

KGF Chapter 2: ಟಿವಿಯಲ್ಲಿ ಬರೋಕೆ ರೆಡಿ ಆಯ್ತು ‘ಕೆಜಿಎಫ್ 2’; ಹೊಸ ಅಪ್ಡೇಟ್ ನೀಡಿದ ಜೀ ಕನ್ನಡ
ಯಶ್
TV9 Web
| Edited By: |

Updated on: Jul 19, 2022 | 9:38 PM

Share

‘ಕೆಜಿಎಫ್ 2’ ಸಿನಿಮಾ (KGF: Chapter 2) ಮಾಡಿದ ಮೋಡಿ ತುಂಬಾನೇ ದೊಡ್ಡದು. ಈ ಚಿತ್ರ ಬಾಲಿವುಡ್ ಮಂದಿಯೂ ತಿರುಗಿ ನೋಡುವಂತೆ ಮಾಡಿದೆ. ಈ ಚಿತ್ರದಿಂದ ಯಶ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಏಪ್ರಿಲ್ 14ರಂದು ಥಿಯೇಟರ್​ನಲ್ಲಿ ರಿಲೀಸ್ ಆದ ‘ಕೆಜಿಎಫ್ 2’ ಚಿತ್ರ ನಂತರ ಒಟಿಟಿಗೆ ಕಾಲಿಟ್ಟಿತು. ಈಗ ಸಿನಿಮಾ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಈ ಬಗ್ಗೆ ವಾಹಿನಿಯಿಂದ ಅಧಿಕೃತ ಘೋಷಣೆ ಆಗಿದೆ.

ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್’ ಸಿನಿಮಾ ದೊಡ್ಡ ಯಶಸ್ಸು ಕಂಡಿತು. ಅದರ ಮುಂದುವರಿದ ಭಾಗವಾಗಿ ತೆರೆಗೆ ಬಂದ ‘ಕೆಜಿಎಫ್ 2’ ಚಿತ್ರ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಪ್ರಶಾಂತ್ ನೀಲ್ ಸಾಮರ್ಥ್ಯ ಏನು ಎಂಬುದು ಇಡೀ ಜಗತ್ತಿಗೆ ಮತ್ತೊಮ್ಮೆ ಮನವರಿಕೆ ಆಯಿತು. ಈ ಚಿತ್ರದಿಂದ ಕನ್ನಡ ಚಿತ್ರರಂಗದ ಹಿರಿಮೆ ಮತ್ತಷ್ಟು ಹೆಚ್ಚಿತು. ಬಾಕ್ಸ್ ಆಫೀಸ್​ನಲ್ಲಿ 1250 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದ್ದು ಈ ಚಿತ್ರದ ಹೆಚ್ಚುಗಾರಿಕೆ.

ಇದನ್ನೂ ಓದಿ
Image
Srinidhi Shetty: ಗ್ಲಾಮರಸ್ ಲುಕ್​ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ
Image
ಮಧ್ಯರಾತ್ರಿ ಸಿನಿಮಾ ವೀಕ್ಷಿಸಿದ ಶ್ರೀನಿಧಿ ಶೆಟ್ಟಿ, ಗರುಡ, ವಿನಯ್ ರಾಜ್​ಕುಮಾರ್..; ಚಿತ್ರ ನೋಡಿ ಆಶಾ ಭಟ್ ಹೇಳಿದ್ದೇನು?
Image
Srinidhi Shetty: ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ಕ್ಯೂಟ್ ಫೋಟೋ ಗ್ಯಾಲರಿ
Image
‘ಕೆಜಿಎಫ್​ 2’ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ ಯಶ್, ಶ್ರೀನಿಧಿ ಶೆಟ್ಟಿ

‘ಕೆಜಿಎಫ್ 2’ ಚಿತ್ರವನ್ನು ಸಾಕಷ್ಟು ಮಂದಿ ಥಿಯೇಟರ್​ನಲ್ಲಿ ಕಣ್ತುಂಬಿಕೊಂಡರು. ನಂತರ ಒಟಿಟಿಯಲ್ಲಿ ರಿಲೀಸ್ ಆದಾಗಲೂ ಸಿನಿಮಾ ನೋಡಿ ಖುಷಿಪಟ್ಟರು. ಈಗ ಸಿನಿಮಾ ಟಿವಿಯಲ್ಲಿ ಬರುತ್ತಿದೆ. ಇದಕ್ಕಾಗಿ ಸಾಕಷ್ಟು ಮಂದಿ ಕಾದಿದ್ದರು. ಅಂತೂ ಆ ದಿನ ಬಂದಿದೆ. ಈ ಬಗ್ಗೆ ಪ್ರೋಮೋ ಹಂಚಿಕೊಂಡಿರುವ ಜೀ ಕನ್ನಡ ವಾಹಿನಿ, ‘ಪ್ರಪಂಚದಲ್ಲಿರೋ ಬಂಗಾರನೆಲ್ಲ ಅಮ್ಮನಿಗೆ ತಂದುಕೊಡೋ ಧೀರ ಸುಲ್ತಾನ ನಿಮ್ಮನೆ ಪರದೆಯಲ್ಲೂ ಬರ್ತಿದ್ದಾನೆ. ಕೆಜಿಎಫ್ ಚಾಪ್ಟರ್-2 ಅತಿ ಶೀಘ್ರದಲ್ಲಿ’ ಎಂದು ಕ್ಯಾಪ್ಶನ್ ನೀಡಿದೆ.

ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಸಾಮಾನ್ಯವಾಗಿ ದೊಡ್ಡ ದೊಡ್ಡ ಸಿನಿಮಾಗಳನ್ನು ಪ್ರಸಾರ ಮಾಡಲಾಗುತ್ತದೆ. ‘ಕೆಜಿಎಫ್ 2’ ಕೂಡ ಮುಂಬರುವ ವಿಶೇಷ ದಿನಗಳಲ್ಲಿ ಸಣ್ಣ ಪರದೆಗೆ ಅಪ್ಪಳಿಸಬಹುದು ಎನ್ನಲಾಗುತ್ತಿದೆ. ಆ ದಿನಾಂಕ ಆದಷ್ಟು ಬೇಗ ಘೋಷಣೆ ಆಗಲಿ ಎಂದು ವೀಕ್ಷಕರು ಕಾಯುತ್ತಿದ್ದಾರೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ‘ಕೆಜಿಎಫ್ 2’ ನೋಡಿ ಬದಲಾಗಿದೆ ಬಾಲಿವುಡ್ ಪ್ರೇಕ್ಷಕರ ಮನಸ್ಥಿತಿ? ಆಮಿರ್ ಖಾನ್​ಗೆ ಶುರುವಾಗಿದೆ ಭಯ

‘ಕೆಜಿಎಫ್ 2’ ಚಿತ್ರದಲ್ಲಿ ಯಶ್​ಗೆ ಜತೆಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ಸಂಜಯ್ ದತ್ ಪ್ರಮುಖ ವಿಲನ್ ಪಾತ್ರ ಮಾಡಿದ್ದಾರೆ. ರವೀನಾ ಟಂಡನ್ ಪ್ರಧಾನಿ ರಮಿಕಾ ಸೇನ್ ಆಗಿ ಕಾಣಿಸಿಕೊಂಡಿದ್ದಾರೆ.  ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಫಿಲ್ಮ್ಸ್​ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ಪ್ರಶಾಂತ್ ನೀಲ್ ನಿರ್ದೇಶನ ಇರುವ ಈ ಚಿತ್ರಕ್ಕೆ ಭುವನ್ ಗೌಡ ಛಾಯಾಗ್ರಹಣ ಇದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್