AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲರ್ಸ್​ಗೆ ಬಂದು ಮತ್ತಷ್ಟು ಫೇಮಸ್ ಆದ ಹನುಮಂತ; ಜೀ ಕನ್ನಡ ಪ್ರತಿಕ್ರಿಯಿಸಿದ್ದು ಹೀಗೆ

ಹನುಮಂತ, ಜೀ ಕನ್ನಡದ ಸರಿಗಮಪದಿಂದ ಜನಪ್ರಿಯತೆ ಗಳಿಸಿದ ನಂತರ ಅವರು ಬಿಗ್ ಬಾಸ್ ಕನ್ನಡಕ್ಕೆ ಬಂದು ಶೋಗೆದ್ದಿದ್ದಾರೆ. ಕುರಿ ಕಾಯುವವನಿಂದ ರಿಯಾಲಿಟಿ ಶೋ ಸ್ಪರ್ಧಿಯಾಗಿ, ಮತ್ತು ಈಗ ಬಿಗ್ ಬಾಸ್ ವಿಜೇತನಾಗಿ ಅವರ ಪ್ರಯಾಣ ಅದ್ಭುತವಾಗಿದೆ. ಜೀ ಕನ್ನಡ ವಾಹಿನಿ ಅವರ ಗೆಲುವನ್ನು ಸಂಭ್ರಮಿಸಿದೆ ಮತ್ತು ಅವರ ಪ್ರತಿಭೆಯನ್ನು ಮತ್ತೆ ಹೊಗಳಿದೆ.

ಕಲರ್ಸ್​ಗೆ ಬಂದು ಮತ್ತಷ್ಟು ಫೇಮಸ್ ಆದ ಹನುಮಂತ; ಜೀ ಕನ್ನಡ ಪ್ರತಿಕ್ರಿಯಿಸಿದ್ದು ಹೀಗೆ
ಹನುಮಂತ
ರಾಜೇಶ್ ದುಗ್ಗುಮನೆ
|

Updated on:Jan 28, 2025 | 1:30 PM

Share

ಹನುಮಂತ ಅವರು ‘ಬಿಗ್ ಬಾಸ್’ ವಿನ್ನರ್ ಕಿರೀಟ ಪಡೆದಿದ್ದಾರೆ. ಅವರಿಗೆ ಬಿಗ್ ಬಾಸ್ ಸಾಕಷ್ಟು ಜನಪ್ರಿಯತೆ ನೀಡಿದೆ. ಈ ಶೋ ಮೂಲಕ ಅವರ ಅಭಿಮಾನಿ ಬಳಗ ಕೂಡ ಹಿರಿದಾಗಿದೆ. ಈ ಪ್ರತಿಭೆಯನ್ನು ಮೊದಲು ಗುರುತಿಸಿದ್ದು ಜೀ ಕನ್ನಡ. ಹೌದು, ಕೆಲ ವರ್ಷಗಳ ಹಿಂದೆ ಜೀ ಕನ್ನಡದ ‘ಸರಿಗಮಪ’ ಶೋ ಮೂಲಕ ಹನುಮಂತ ಅವರು ನಾಡಿನ ಜನತೆಗೆ ಪರಿಚಯ ಆದರು. ಈಗ ಅವರು ಕಲರ್ಸ್​ಗೆ ತೆರಳಿ ‘ಬಿಗ್ ಬಾಸ್’ ವಿನ್ ಆಗಿದ್ದಕ್ಕೆ ಜೀ ಕನ್ನಡ ವಾಹಿನಿ ಅಭಿನಂದನೆ ತಿಳಿಸಿದೆ.

ಹನುಮಂತ ಅವರು ಶಿಕ್ಷಣ ಪಡೆದ ಅವರು, ಕುರಿ ಕಾಯುವಿಕೆಯನ್ನು ಆಯ್ದುಕೊಂಡರು. ಆಗ ಹಾಡುಗಳನ್ನು ಹಾಡುತ್ತಿದ್ದರು. ಆ ಬಳಿಕ ಅವರು ‘ಸರೆಗಮಪ ಸೀಸನ್ 15’ರ ಸ್ಪರ್ಧಿಯಾಗಿ ಬಂದರು. ಅಲ್ಲಿ ಅವರು ರನ್ನರ್​ಅಪ್ ಆದರು. ಇದಲ್ಲದೆ, ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫ್ಯಾಮಿಲಿ ವಾರ್ ಸೀಸನ್ 2’ನಲ್ಲಿ ಭಾಗವಹಿಸಿದರು. ಇವರು ಇನ್ನೂ ಕೆಲವು ರಿಯಾಲಿಟಿ ಶೋಗಳನ್ನು ಮಾಡಿದರು. ಈಗ ಬಿಗ್ ಬಾಸ್ ವಿನ್ ಆಗಿ ಇತಿಹಾಸ ಬರೆದಿದ್ದಾರೆ.

ಹನುಮಂತ ಅವರ ಗೆಲುವಿಗೆ ಜೀ ಕನ್ನಡ ಪ್ರತಿಕ್ರಿಯಿಸಿದೆ. ‘ಪ್ರೀತಿಯ ಹನುಮಂತ, ನಮ್ಮ ಸರಿಗಮಪ ವೇದಿಕೆಗೆ ಈ ಅದಮ್ಯ ಪ್ರತಿಭೆಯನ್ನು ಹುಡುಕಿ, ಬೆಳಕಿಗೆ ತಂದ ಜೀ ಕನ್ನಡಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ’ ಎಂದು ಜೀ ಕನ್ನಡ ಪೋಸ್ಟ್ ಮಾಡಿದೆ. ಇದಕ್ಕೆ ನಿಮ್ಮಂಥ ನೆಲಮೂಲದ ಪ್ರತಿಭೆಯನ್ನು ಹುಡುಕಿ, ಬೆಳಕಿಗೆ ತಂದ ಜೀ ಕನ್ನಡ ನಿಮ್ಮ ಗೆಲುವನ್ನು ಸಂಭ್ರಮಿಸುತ್ತದೆ. ಹನುಮಂತ ಅವರೇ ನಿಮ್ಮ ಗೆಲುವಿಗೆ ಹಾರ್ದಿಕ ಅಭಿನಂದನೆಗಳು’ ಎಂದು ಅವರು ಬರೆದುಕೊಂಡಿದ್ದಾರೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಬಿಗ್ ಬಾಸ್​ನ ಈ ಸ್ಪರ್ಧಿಗಳ ಇನ್​ಸ್ಟಾಗ್ರಾಮ್ ಹಿಂಬಾಲಕರ ಸಂಖ್ಯೆ ಮೊದಲೆಷ್ಟಿತ್ತು? ಈಗೆಷ್ಟಾಯ್ತು?

ಪ್ರತಿ ಬಾರಿ ಬಿಗ್ ಬಾಸ್​ನಲ್ಲಿ ಜೀ ಕನ್ನಡದ ಕೆಲವು ಸ್ಪರ್ಧಿಗಳು ಭಾಗವಹಿಸುತ್ತಾರೆ. ಆದರೆ, ಯಾರೊಬ್ಬರೂ ಈವರೆಗೆ ಗೆದ್ದಿರಲಿಲ್ಲ. ಇದೇ ಮೊದಲಬಾರಿಗೆ ಜೀ ಕನ್ನಡದ ಪ್ರತಿಭೆ ಗೆಲುವು ಸಾಧಿಸಿದೆ. ಈ ಮೊದಲು ಹನುಮಂತಗೆ ಜೀ ಕನ್ನಡದವರು ಹಣ ನೀಡಿಲ್ಲ ಎಂಬ ಸುದ್ದಿ ವೈರಲ್ ಆಗಿತ್ತು. ಆದರೆ, ಅದರಲ್ಲಿ ಸತ್ಯ ಇಲ್ಲ ಎಂದು ಹನುಮಂತ ಅವರು ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:18 pm, Tue, 28 January 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ