AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drama Juniors: ‘ಡ್ರಾಮಾ ಜ್ಯೂನಿಯರ್ಸ್​ 4’ ಫಿನಾಲೆಯಲ್ಲಿ ಗೆದ್ದ ಮಕ್ಕಳಿಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?

Drama Juniors Season 4 winners: ‘ಡ್ರಾಮಾ ಜೂನಿಯರ್ಸ್’ ರಿಯಾಲಿಟಿ ಶೋ 4ನೇ ಸೀಸನ್ನಲ್ಲಿ ಗೆದ್ದ ಮಕ್ಕಳಿಗೆ ಟ್ರೋಫಿ ಜತೆ ನಗದು ಬಹುಮಾನ ಸಿಕ್ಕಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಈ ಹಣ ಬಳಕೆ ಆಗಲಿದೆ.

Drama Juniors: ‘ಡ್ರಾಮಾ ಜ್ಯೂನಿಯರ್ಸ್​ 4’ ಫಿನಾಲೆಯಲ್ಲಿ ಗೆದ್ದ ಮಕ್ಕಳಿಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?
ಡ್ರಾಮಾ ಜ್ಯೂನಿಯರ್ಸ್
TV9 Web
| Updated By: ಮದನ್​ ಕುಮಾರ್​|

Updated on: Aug 23, 2022 | 8:43 AM

Share

ಕಿರುತೆರೆ ಪ್ರೇಕ್ಷಕರ ಮೆಚ್ಚಿನ ‘ಡ್ರಾಮಾ ಜೂನಿಯರ್ಸ್’ (Drama Juniors) ರಿಯಾಲಿಟಿ ಶೋ 4ನೇ ಸೀಸನ್ ಅಂತ್ಯವಾಗಿದೆ. ಮಕ್ಕಳು ಭರ್ಜರಿಯಾಗಿ ಮನರಂಜನೆ ನೀಡುವ ಈ ಕಾರ್ಯಕ್ರಮ ‘ಜೀ ಕನ್ನಡ’ (Zee Kannada) ವಾಹಿನಿಯಲ್ಲಿ ಪ್ರಸಾರವಾಗಿದೆ. ಸತತ 23 ವಾರಗಳ ಕಾಲ ಕರುನಾಡನ್ನು ರಂಜಿಸಿದ ಈ ಶೋಗೆ ತನ್ನದೇ ಆದ ಪ್ರೇಕ್ಷಕರ ವರ್ಗವಿದೆ. ‘ಡ್ರಾಮಾ ಜ್ಯೂನಿಯರ್ಸ್​ ಸೀಸನ್​ 4’ ವಿನ್ನರ್​ (Drama Juniors Season 4 winners) ಆಗಿ ಸಮೃದ್ಧಿ ಎಸ್. ಮೊಗವೀರ್ ಹೊರಹೊಮ್ಮಿದ್ದಾಳೆ. ಮೂಲತಃ ಕುಂದಾಪುರದವಳಾದ ಆಕೆಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆಕರ್ಷಕ ಟ್ರೋಫಿ ಜೊತೆಗೆ 5 ಲಕ್ಷ ರೂಪಾಯಿ ನಗದು ಬಹುಮಾನ ಸಮೃದ್ಧಿಗೆ ಸಿಕ್ಕಿದೆ. ಚಾಮರಾಜನಗರದ ಗೌತಮ್ ರಾಜ್ ಮತ್ತು ಉಡುಪಿಯ ಸಾನಿಧ್ಯ ಆಚಾರ್ ಸಮಬಲ ಸಾಧಿಸಿಕೊಂಡು ಎರಡನೇ ಸ್ಥಾನ ಪಡೆದಿದ್ದಾರೆ.

ಮನಸೆಳೆಯುವ ಅಭಿನಯದ ಮೂಲಕ ಹೈಲೈಟ್​ ಆಗಿದ್ದ 15 ಮಕ್ಕಳು ಫೈನಲ್​ಗೆ ಆಯ್ಕೆಯಾಗಿದ್ದರು. ಅವರಲ್ಲಿ ನಾಲ್ಕು ಮಕ್ಕಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದರು. ಉತ್ತಮರಲ್ಲಿ ಅತ್ಯುತ್ತಮರನ್ನು ವಿಜೇತರನ್ನಾಗಿ ಘೋಷಿಸಲಾಗಿದೆ. ಅಲ್ಲದೇ, ಪ್ರತಿಯೊಬ್ಬ ಮಗುವಿಗೂ ಪದಕ ನೀಡುವ ಮೂಲಕ ಉಳಿದ 11 ಪ್ರತಿಭೆಗಳನ್ನು ಜೀ ಕನ್ನಡ ವಾಹಿನಿ ಕಡೆಯಿಂದ ಗೌರವಿಸಲಾಯಿತು.

ಇದನ್ನೂ ಓದಿ
Image
‘ಅವರು ಯಾವತ್ತಿದ್ರೂ ನಮ್ಮ ಹೀರೋಯಿನ್​’; ಡ್ರಾಮಾ ಜ್ಯೂನಿಯರ್ಸ್​ನಲ್ಲಿ ಒಂದಾದ ‘ಮಲ್ಲ’ ಜೋಡಿ
Image
‘ನಿಮಗೆ ವಯಸ್ಸಾಗಿದೆ ಅಂದ್ರೆ ಯಾರು ನಂಬ್ತಾರೆ’? ಲಕ್ಷ್ಮೀ-ಶಿವಣ್ಣ ಡ್ಯಾನ್ಸ್ ನೋಡಿ ರವಿಚಂದ್ರನ್ ಮಾತು
Image
ಮಕ್ಕಳ ಲೋಕದಲ್ಲಿ ಹೇಗಿದೆ ‘ಕೆಜಿಎಫ್​ 2’ ಕ್ರೇಜ್​? ಯಶ್​ ರೀತಿಯೇ ‘ಐ ಕಾಂಟ್​ ಅವಾಯ್ಡ್​..’ ಎಂದ ಪುಟಾಣಿ ಪ್ರತಿಭೆ
Image
Ravichandran: ಕ್ರೇಜಿಸ್ಟಾರ್ ರವಿಚಂದ್ರನ್ ಕಿಡ್ನಾಪ್; ಕಾರಣ ಊಹಿಸುತ್ತಿದ್ದಾರೆ ನೆಟ್ಟಿಗರು!

ಎರಡನೇ ಸ್ಥಾನ ಹಂಚಿಕೊಂಡ ಗೌತಮ್ ರಾಜ್ ಮತ್ತು ಉಡುಪಿಯ ಸಾನಿಧ್ಯ ಆಚಾರ್ ತಲಾ 3 ಲಕ್ಷ ರೂಪಾಯಿ ನಗದು ಬಹುಮಾನ ಪಡೆದುಕೊಂಡಿದ್ದಾರೆ. ಮಂಗಳೂರಿನ ವೇದಿಕ್ ಅವರು ಮೂರನೇ ಸ್ಥಾನ ಪಡೆದು ಜನಮೆಚ್ಚುಗೆ ಗಳಿಸಿದರು. ‘ಡ್ರಾಮಾ ಜ್ಯೂನಿಯರ್ಸ್​’ 4ನೇ ಆವೃತ್ತಿಯ ವಿಶಿಷ್ಟ ಪ್ರತಿಭೆಯಾಗಿ ವೇದಿಕೆಗೆ ಆಗಮಿಸಿದ್ದ ರಾಯಚೂರಿನ ಕುಳ್ಳ ಸಿಂಗಂ ಖ್ಯಾತಿಯ ಅರುಣ್ ಅವರಿಗೆ ವಿಶೇಷ ಬಹುಮಾನವಾಗಿ 1 ಲಕ್ಷ ರುಪಾಯಿ ನಗದು ಬಹುಮಾನವನ್ನು ನೀಡಲಾಯಿತು. ಮಕ್ಕಳಿಗೆ ನೀಡಿರುವ ನಗದು ಬಹುಮಾನ ಅವರ ವಿದ್ಯಾಭ್ಯಾಸಕ್ಕೆ ಬಳಕೆ ಆಗಲಿದೆ.

ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿಭಾಯಿಸಿದ ಎಲ್ಲಾ ಕಾರ್ಮಿಕರು, ಮೆಂಟರ್​​ಗಳು, ತೀರ್ಪುಗಾರರು, ಛಾಯಾಗ್ರಾಹಕರು ಹಾಗೂ ಸ್ಕಿಟ್ ಬರಹಗಾರರಿಗೆ ಈ ಶೋ ನಿರ್ದೇಶಕ ಹಾಗು ಜೀ ಕನ್ನಡ ವಾಹಿನಿಯ ನಾನ್ ಫಿಕ್ಷನ್ ಮುಖ್ಯಸ್ಥರಾದ ಶರಣಯ್ಯ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಡ್ರಾಮಾ ಜ್ಯೂನಿಯರ್ಸ್​ ಶೋನಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ವಾಹಿನಿಯ ಮುಖ್ಯಸ್ಥರಾದ ರಾಘವೇಂದ್ರ ಹುಣಸೂರು ಅಭಿನಂದನೆ ಸಲ್ಲಿಸಿದ್ದಾರೆ.

View this post on Instagram

A post shared by Zee Kannada (@zeekannada)

ವೀಕ್ಷಕರನ್ನು ನಕ್ಕು ನಗಿಸಲು ಶೀಘ್ರವೇ ‘ಕಾಮಿಡಿ ಕಿಲಾಡಿಗಳು ಸೀಸನ್ 4’ ಶುರುವಾಗಲಿದೆ ಎಂದು ರಾಘವೇಂದ್ರ ಹುಣಸೂರು ಮಾಹಿತಿ ನೀಡಿದ್ದಾರೆ. ಹೊಸ ಸೀಸನ್​ನಲ್ಲೂ ನಿರ್ದೇಶಕ ಯೋಗರಾಜ್ ಭಟ್, ನಟ ಜಗ್ಗೇಶ್ ಮತ್ತು ನಟಿ ರಕ್ಷಿತಾ ಪ್ರೇಮ್​ ಅವರು ತೀರ್ಪುಗಾರರಾಗಿ ಮುಂದುವರಿಯುತ್ತಾರೆ. ಮಾಸ್ಟರ್ ಆನಂದ್ ನಿರೂಪಣೆ ಮಾಡಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ