AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲರ್ಸ್ ಕನ್ನಡ ಹಾಗೂ ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿಗಳು ಶೀಘ್ರವೇ ಮುಕ್ತಾಯ

ಎರಡು ಪ್ರಮುಖ ಧಾರಾವಾಹಿಗಳು ಕೊನೆ ಆಗುತ್ತಿವೆ. ಸದ್ಯ ಈ ವಿಚಾರ ಒಂದು ವರ್ಗದ ವೀಕ್ಷಕರಿಗೆ ಬೇಸರ ಮೂಡಿಸಿದೆ. ಯಾವ ಧಾರಾವಾಹಿ ಕೊನೆಗಳ್ಳುತ್ತಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಕಲರ್ಸ್ ಕನ್ನಡ ಹಾಗೂ ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿಗಳು ಶೀಘ್ರವೇ ಮುಕ್ತಾಯ
ವಾಹಿನಿಯ ಲೋಗೋ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:May 17, 2023 | 10:28 AM

Share

ಕಲರ್ಸ್ ಕನ್ನಡ ಹಾಗೂ ಜೀ ಕನ್ನಡ (Zee Kannada) ಮಧ್ಯೆ ಸಖತ್ ಪೈಪೋಟಿ ಇದೆ. ಕಿರುತೆರೆ ಲೋಕಕ್ಕೆ ವಿವಿಧ ರೀತಿಯ ಧಾರಾವಾಹಿಗಳನ್ನು ನೀಡುವ ಕೆಲಸ ಇವುಗಳಿಂದ ಆಗುತ್ತಿದೆ. ಈಗ ಎರಡೂ ವಾಹಿನಿಗಳಲ್ಲಿ ಹೊಸಹೊಸ ಧಾರಾವಾಹಿಗಳು ಬರೋಕೆ ಸಿದ್ಧಗೊಂಡಿವೆ. ಹೊಸ ಧಾರಾವಾಹಿ ಬರಬೇಕು ಎಂದರೆ ಈಗ ಪ್ರಸಾರ ಆಗುತ್ತಿರುವ ಧಾರಾವಾಹಿ ಕೊನೆಗೊಳ್ಳಲೇಬೇಕು. ಹೀಗಾಗಿ, ಎರಡು ಪ್ರಮುಖ ಧಾರಾವಾಹಿಗಳು ಕೊನೆ ಆಗುತ್ತಿವೆ. ಸದ್ಯ ಈ ವಿಚಾರ ಒಂದು ವರ್ಗದ ವೀಕ್ಷಕರಿಗೆ ಬೇಸರ ಮೂಡಿಸಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಜೊತೆ ಜೊತೆಯಲಿ

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಈ ವಾರ (ಮೇ 19) ಪೂರ್ಣಗೊಳ್ಳಲಿದೆ. ಕ್ಲೈಮ್ಯಾಕ್ಸ್ ಸಂಚಿಕೆಯ ಶೂಟಿಂಗ್ ಈಗಾಗಲೇ ಮುಗಿದಿದೆ ಎನ್ನಲಾಗುತ್ತಿದೆ. ಮೇಘಾ ಶೆಟ್ಟಿ ಅನು ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡರೆ, ಹರೀಶ್ ರಾಜ್ ಅವರು ಆರ್ಯವರ್ಧನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಧಾರಾವಾಹಿ ಪೂರ್ಣಗೊಳಿಸಲು ನಿರ್ಮಾಪಕ ಆರೂರು ಜಗದೀಶ್ ನಿರ್ಧರಿಸಿದ್ದಾರೆ.

ಕಲಾವಿದರ ಡೇಟ್ಸ್ ಹೊಂದಿಸಲು ಆರೂರು ಜಗದೀಶ್​ಗೆ ಸಾಧ್ಯವಾಗುತ್ತಿಲ್ಲ. ಅವರು ಇತ್ತೀಚೆಗೆ ಈ ಬಗ್ಗೆ ಮಾತನಾಡಿದ್ದರು. ಇದಲ್ಲದೆ, ಟಿಆರ್​ಪಿ ವಿಚಾರದಲ್ಲೂ ಧಾರಾವಾಹಿ ಒಳ್ಳೆಯ ಪರ್ಫಾರ್ಮೆನ್ಸ್ ಮಾಡುತ್ತಿಲ್ಲ. ಇವೆಲ್ಲವನ್ನೂ ಗಮನಿಸಿ ‘ಜೊತೆ ಜೊತೆಯಲಿ’ ಧಾರಾವಾಹಿ ಅಂತ್ಯ ಮಾಡಲಾಗುತ್ತಿದೆ. 1000 ಸಾವಿರ ಎಪಿಸೋಡ್ ಪೂರ್ಣಗೊಳಿಸಬೇಕು ಎಂಬುದು ಚಿತ್ರತಂಡದ ಉದ್ದೇಶ ಆಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಆರ್ಯನ ಪಾತ್ರ ಮಾಡುತ್ತಿದ್ದ ಅನಿರುದ್ಧ್​ ಜತ್ಕರ್ ತೊರೆದಿದ್ದು ಧಾರಾವಾಹಿಗೆ ಹಿನ್ನಡೆ ಆಯಿತು.

ಗಿಣಿರಾಮ

ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಗಿಣಿರಾಮ’ ಧಾರಾವಾಹಿ ಕೂಡ ಮೆಚ್ಚುಗೆ ಪಡೆದಿತ್ತು. ನಯನಾ ನಾಗರಾಜ್ ಅವರು ಮಹತಿ ದೇಶ​ಪಾಂಡೆ ಆಗಿ, ರಿತ್ವಿಕ್ ಮಠದ್ ಅವರು ಶಿವರಾಮ್ ದೇಶಪಾಂಡೆ ಆಗಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಕೂಡ ಟಿಆರ್​ಪಿ ಕಳೆದುಕೊಂಡಿದೆ. ಹೀಗಾಗಿ ಧಾರಾವಾಹಿ ಕೊನೆಗೊಳ್ಳುತ್ತಿದೆ.

ಇದನ್ನೂ ಓದಿ: ಜೀ ಕನ್ನಡದಲ್ಲಿ ಮೇ 29ರಿಂದ ‘ಅಮೃತಧಾರೆ’ ಧಾರಾವಾಹಿ ಆರಂಭ; ಯಾವ ಸೀರಿಯಲ್ ಅಂತ್ಯ?

2020ರಲ್ಲಿ ‘ಗಿಣಿರಾಮ’ ಪ್ರಸಾರ ಆರಂಭ ಆಯಿತು. ಮರಾಠಿ ಧಾರಾವಾಹಿಯ ರಿಮೇಕ್ ಇದಾಗಿದೆ. ಇಲ್ಲಿನ ಸೊಗಡಿಗೆ ತಕ್ಕಂತೆ ಕಥೆಯಲ್ಲಿ ಬದಲಾವಣೆ ಮಾಡಲಾಗಿತ್ತು. ಬೇರೆಯವರು ಮಾಡಿದ ಮೋಸಕ್ಕೆ ಒಳಗಾಗಿ ನಾಯಕಿ ಮಹತಿ ಮದುವೆಯಾಗಬೇಕಿದ್ದ ಹುಡುಗ ಮೃತಪಡುತ್ತಾನೆ. ಮಹತಿ ತಾನು ದ್ವೇಷಿಸುತ್ತಿದ್ದ ಶಿವರಾಮ್‌ನ ಮದುವೆ ಆಗುವ ಪರಿಸ್ಥಿತಿ ಬರುತ್ತದೆ. ಬಳಿಕ ಇವರ ಮಧ್ಯೆ ಪ್ರೀತಿ ಮೂಡುತ್ತದೆ. ಇದು ಧಾರಾವಾಹಿಯ ಕಥೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:21 am, Wed, 17 May 23

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ