AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಣ’ ಧಾರಾವಾಹಿಗೆ ವಿಘ್ನ; ಇಂದು ಪ್ರಸಾರ ಆಗಲ್ಲ ಸೀರಿಯಲ್

Karna Serial: ಜೀ ಕನ್ನಡದಲ್ಲಿ ಪ್ರಸಾರವಾಗಬೇಕಿದ್ದ ‘ಕರ್ಣ’ ಧಾರಾವಾಹಿಯ ಬಿಡುಗಡೆ ಮುಂದೂಡಲ್ಪಟ್ಟಿದೆ. ಕಿರಣ್ ರಾಜ್, ಭವ್ಯಾ ಗೌಡ ಮತ್ತು ನಮ್ರತಾ ಗೌಡ ಅಭಿನಯಿಸುತ್ತಿರುವ ಈ ಧಾರಾವಾಹಿ ಜೂನ್ 16ಕ್ಕೆ ಪ್ರಾರಂಭವಾಗಬೇಕಿತ್ತು. ವಾಹಿನಿಯು ವಿಳಂಬಕ್ಕೆ ಕಾರಣವನ್ನು ತಿಳಿಸಿಲ್ಲವಾದರೂ, ಅಭಿಮಾನಿಗಳು ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

‘ಕರ್ಣ’ ಧಾರಾವಾಹಿಗೆ ವಿಘ್ನ; ಇಂದು ಪ್ರಸಾರ ಆಗಲ್ಲ ಸೀರಿಯಲ್
ಕಿರಣ್​-ಭವ್ಯಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 16, 2025 | 5:27 PM

Share

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಿರಣ್ ರಾಜ್ (Kiran Raj), ಭವ್ಯಾ ಗೌಡ ಹಾಗೂ ನಮ್ರತಾ ಗೌಡ ಅವರ ನಟನೆಯ ‘ಕರ್ಣ’ ಧಾರಾವಾಹಿ ಇಂದಿನಿಂದ (ಜೂನ್ 16) ರಾತ್ರಿ 8 ಗಂಟೆಗೆ ಪ್ರಸಾರ ಆರಂಭ ಆಗಬೇಕಿತ್ತು. ಇದಕ್ಕೆ ಸಂಬಂಧಿಸಿದ ಪ್ರೋಮೋಗಳನ್ನು ಜೀ ಕನ್ನಡ ವಾಹಿನಿ ಹಂಚಿಕೊಂಡಿತ್ತು. ಆದರೆ, ಈಗ ಧಾರಾವಾಹಿಯು ವಿಳಂಬ ಆಗಲಿದೆ ಎಂದು ಮಾಹಿತಿ ನೀಡಿದೆ. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ವಾಹಿನಿಯವರು ಮಾಹಿತಿ ನೀಡಿಲ್ಲ.

ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ. ‘ಕರ್ಣ ಹುಟ್ಟುವ ಮೊದಲೇ ಶಾಪಗ್ರಸ್ಥ. ತನ್ನದಲ್ಲದ ತಪ್ಪಿಗೆ ಜೀವನ ಪೂರ್ತಿ ಪರಿತಪಿಸಿದವನು. ಹೆಜ್ಜೆ ಹೆಜ್ಜೆಗೂ ದ್ವೇಷ, ಅಸೂಯೆ, ಹತಾಶೆ, ನಿರಾಶೆ, ನೋವು, ಅವಮಾನಗಳಿಗೆ ಗುರಿಯಾದವನು. ಆದರೆ ಎಲ್ಲ ಸವಾಲುಗಳನ್ನೂ ಹಿಮ್ಮೆಟ್ಟಿ ಜನರ ಪ್ರೀತಿ ಗಳಿಸಿದವನು’ ಎಂದು ಬರೆಯಲಾಗಿದೆ.

ಇದನ್ನೂ ಓದಿ
Image
‘ಹೆಸರ ಜೊತೆ ಅಕ್ಕ ಸೇರಿದ್ರೆ ಅರ್ಥವೇ ಬೇರೆಯಾಗುತ್ತೆ’; ದೀಪಿಕಾ ಬೇಸರ
Image
ಸಲ್ಲು ಮದುವೆ ಆಗದಿರಲು ವಿಚ್ಛೇದನದ ಭಯವೇ ಕಾರಣ; ಓಪನ್ ಆಗಿ ಮಾತನಾಡಿದ ನಟ
Image
ವಮಿಕಾ ಕೊಹ್ಲಿಯ ಕೈ ಬರಹ ಎಷ್ಟು ಕ್ಯೂಟ್ ನೋಡಿ; ಫೋಟೋ ಹಂಚಿಕೊಂಡ ಅನುಷ್ಕಾ
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ

‘ನಿಷ್ಠೆ, ನಿಯತ್ತು, ತ್ಯಾಗ, ಧೈರ್ಯಕ್ಕೆ ಇನ್ನೊಂದು ಹೆಸರು ಅವನು. ಯುಗ ಯುಗಗಳೇ ಕಳೆದರೂ ದಾನಶೂರನಾಗಿ ಎಲ್ಲರ ಮನದಲ್ಲಿ ನೆಲೆಯಾದವನು. ಕರ್ಣ ಬರೋದನ್ನ ತಡ ಆಗುವಂತೆ ಮಾಡಬಹುದು, ಆದ್ರೆ ಬರೋದನ್ನ ತಡೆಯೋದಕ್ಕೆ ಸಾಧ್ಯವೇ ಇಲ್ಲ. ಇಡೀ ಕರ್ನಾಟಕ ಕಾಯ್ತಾ ಇದೆ ಅನ್ನೋದು ಗೊತ್ತು. ಕೊಟ್ಟ ಮಾತಿನಂತೆ ಕರ್ಣ ಬಂದೇ ಬರ್ತಾನೆ… ಶೀಘ್ರದಲ್ಲೇ, ಅದೇ ಪ್ರೀತಿ – ವಿಶ್ವಾಸದಿಂದ ‘ಕರ್ಣ’ನನ್ನ ಬರಮಾಡಿಕೊಳ್ತರಿ ಅಲ್ವಾ’ ಎಂದು ಕೇಳಲಾಗಿದೆ.

View this post on Instagram

A post shared by Zee Kannada (@zeekannada)

ಇದಕ್ಕೆ ಅಭಿಮಾನಿಗಳು ವಿವಿಧ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ನಿಜಕ್ಕೂ ಆಗಿದ್ದೇನು? ಧಾರಾವಾಹಿಯ ಹೊಸ ಪ್ರಸಾರ ದಿನಾಂಕ ಯಾವಾಗ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಯಾವುದಾದರೂ ತಾಂತ್ರಿಕ ಸಮಸ್ಯೆಗಳು ಎದುರಾಗಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಇದನ್ನೂ ಓದಿ: ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ

‘ಕರ್ಣ’ ಧಾರಾವಾಹಿಯಲ್ಲಿ ಕಿರಣ್ ರಾಜ್ ಅವರು ‘ಕರ್ಣ’ ಹೆಸರಿನ ಪಾತ್ರವನ್ನು ಮಾಡುತ್ತಿದ್ದಾರೆ. ಅವರದ್ದು ವೈದ್ಯನ ಪಾತ್ರ. ಈ ಧಾರಾವಾಹಿ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಭವ್ಯಾ ಗೌಡ ಅವರ ಪ್ರೋಮೋ ಈಗಾಗಲೇ ರಿಲೀಸ್ ಆಗಿದೆ. ಅವರು ಮೆಡಿಕಲ್ ವಿದ್ಯಾರ್ಥಿನ ಪಾತ್ರ ಮಾಡಿದ್ದಾರೆ. ನಮ್ರತಾ ಗೌಡ ಪಾತ್ರ ಇನ್ನೂ ರಿವೀಲ್ ಆಗಿಲ್ಲ. ಭವ್ಯಾ ಸಹೋದರಿಯ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:26 pm, Mon, 16 June 25

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ