‘ಕರ್ಣ’ ಧಾರಾವಾಹಿಗೆ ವಿಘ್ನ; ಇಂದು ಪ್ರಸಾರ ಆಗಲ್ಲ ಸೀರಿಯಲ್

Karna Serial: ಜೀ ಕನ್ನಡದಲ್ಲಿ ಪ್ರಸಾರವಾಗಬೇಕಿದ್ದ ‘ಕರ್ಣ’ ಧಾರಾವಾಹಿಯ ಬಿಡುಗಡೆ ಮುಂದೂಡಲ್ಪಟ್ಟಿದೆ. ಕಿರಣ್ ರಾಜ್, ಭವ್ಯಾ ಗೌಡ ಮತ್ತು ನಮ್ರತಾ ಗೌಡ ಅಭಿನಯಿಸುತ್ತಿರುವ ಈ ಧಾರಾವಾಹಿ ಜೂನ್ 16ಕ್ಕೆ ಪ್ರಾರಂಭವಾಗಬೇಕಿತ್ತು. ವಾಹಿನಿಯು ವಿಳಂಬಕ್ಕೆ ಕಾರಣವನ್ನು ತಿಳಿಸಿಲ್ಲವಾದರೂ, ಅಭಿಮಾನಿಗಳು ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

‘ಕರ್ಣ’ ಧಾರಾವಾಹಿಗೆ ವಿಘ್ನ; ಇಂದು ಪ್ರಸಾರ ಆಗಲ್ಲ ಸೀರಿಯಲ್
ಕಿರಣ್​-ಭವ್ಯಾ
Edited By:

Updated on: Jun 16, 2025 | 5:27 PM

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಿರಣ್ ರಾಜ್ (Kiran Raj), ಭವ್ಯಾ ಗೌಡ ಹಾಗೂ ನಮ್ರತಾ ಗೌಡ ಅವರ ನಟನೆಯ ‘ಕರ್ಣ’ ಧಾರಾವಾಹಿ ಇಂದಿನಿಂದ (ಜೂನ್ 16) ರಾತ್ರಿ 8 ಗಂಟೆಗೆ ಪ್ರಸಾರ ಆರಂಭ ಆಗಬೇಕಿತ್ತು. ಇದಕ್ಕೆ ಸಂಬಂಧಿಸಿದ ಪ್ರೋಮೋಗಳನ್ನು ಜೀ ಕನ್ನಡ ವಾಹಿನಿ ಹಂಚಿಕೊಂಡಿತ್ತು. ಆದರೆ, ಈಗ ಧಾರಾವಾಹಿಯು ವಿಳಂಬ ಆಗಲಿದೆ ಎಂದು ಮಾಹಿತಿ ನೀಡಿದೆ. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ವಾಹಿನಿಯವರು ಮಾಹಿತಿ ನೀಡಿಲ್ಲ.

ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ. ‘ಕರ್ಣ ಹುಟ್ಟುವ ಮೊದಲೇ ಶಾಪಗ್ರಸ್ಥ. ತನ್ನದಲ್ಲದ ತಪ್ಪಿಗೆ ಜೀವನ ಪೂರ್ತಿ ಪರಿತಪಿಸಿದವನು. ಹೆಜ್ಜೆ ಹೆಜ್ಜೆಗೂ ದ್ವೇಷ, ಅಸೂಯೆ, ಹತಾಶೆ, ನಿರಾಶೆ, ನೋವು, ಅವಮಾನಗಳಿಗೆ ಗುರಿಯಾದವನು. ಆದರೆ ಎಲ್ಲ ಸವಾಲುಗಳನ್ನೂ ಹಿಮ್ಮೆಟ್ಟಿ ಜನರ ಪ್ರೀತಿ ಗಳಿಸಿದವನು’ ಎಂದು ಬರೆಯಲಾಗಿದೆ.

ಇದನ್ನೂ ಓದಿ
‘ಹೆಸರ ಜೊತೆ ಅಕ್ಕ ಸೇರಿದ್ರೆ ಅರ್ಥವೇ ಬೇರೆಯಾಗುತ್ತೆ’; ದೀಪಿಕಾ ಬೇಸರ
ಸಲ್ಲು ಮದುವೆ ಆಗದಿರಲು ವಿಚ್ಛೇದನದ ಭಯವೇ ಕಾರಣ; ಓಪನ್ ಆಗಿ ಮಾತನಾಡಿದ ನಟ
ವಮಿಕಾ ಕೊಹ್ಲಿಯ ಕೈ ಬರಹ ಎಷ್ಟು ಕ್ಯೂಟ್ ನೋಡಿ; ಫೋಟೋ ಹಂಚಿಕೊಂಡ ಅನುಷ್ಕಾ
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ

‘ನಿಷ್ಠೆ, ನಿಯತ್ತು, ತ್ಯಾಗ, ಧೈರ್ಯಕ್ಕೆ ಇನ್ನೊಂದು ಹೆಸರು ಅವನು. ಯುಗ ಯುಗಗಳೇ ಕಳೆದರೂ ದಾನಶೂರನಾಗಿ ಎಲ್ಲರ ಮನದಲ್ಲಿ ನೆಲೆಯಾದವನು. ಕರ್ಣ ಬರೋದನ್ನ ತಡ ಆಗುವಂತೆ ಮಾಡಬಹುದು, ಆದ್ರೆ ಬರೋದನ್ನ ತಡೆಯೋದಕ್ಕೆ ಸಾಧ್ಯವೇ ಇಲ್ಲ. ಇಡೀ ಕರ್ನಾಟಕ ಕಾಯ್ತಾ ಇದೆ ಅನ್ನೋದು ಗೊತ್ತು. ಕೊಟ್ಟ ಮಾತಿನಂತೆ ಕರ್ಣ ಬಂದೇ ಬರ್ತಾನೆ… ಶೀಘ್ರದಲ್ಲೇ, ಅದೇ ಪ್ರೀತಿ – ವಿಶ್ವಾಸದಿಂದ ‘ಕರ್ಣ’ನನ್ನ ಬರಮಾಡಿಕೊಳ್ತರಿ ಅಲ್ವಾ’ ಎಂದು ಕೇಳಲಾಗಿದೆ.

ಇದಕ್ಕೆ ಅಭಿಮಾನಿಗಳು ವಿವಿಧ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ನಿಜಕ್ಕೂ ಆಗಿದ್ದೇನು? ಧಾರಾವಾಹಿಯ ಹೊಸ ಪ್ರಸಾರ ದಿನಾಂಕ ಯಾವಾಗ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಯಾವುದಾದರೂ ತಾಂತ್ರಿಕ ಸಮಸ್ಯೆಗಳು ಎದುರಾಗಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಇದನ್ನೂ ಓದಿ: ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ

‘ಕರ್ಣ’ ಧಾರಾವಾಹಿಯಲ್ಲಿ ಕಿರಣ್ ರಾಜ್ ಅವರು ‘ಕರ್ಣ’ ಹೆಸರಿನ ಪಾತ್ರವನ್ನು ಮಾಡುತ್ತಿದ್ದಾರೆ. ಅವರದ್ದು ವೈದ್ಯನ ಪಾತ್ರ. ಈ ಧಾರಾವಾಹಿ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಭವ್ಯಾ ಗೌಡ ಅವರ ಪ್ರೋಮೋ ಈಗಾಗಲೇ ರಿಲೀಸ್ ಆಗಿದೆ. ಅವರು ಮೆಡಿಕಲ್ ವಿದ್ಯಾರ್ಥಿನ ಪಾತ್ರ ಮಾಡಿದ್ದಾರೆ. ನಮ್ರತಾ ಗೌಡ ಪಾತ್ರ ಇನ್ನೂ ರಿವೀಲ್ ಆಗಿಲ್ಲ. ಭವ್ಯಾ ಸಹೋದರಿಯ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:26 pm, Mon, 16 June 25

ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us