AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ಎಪಿಸೋಡ್​ ಪೂರ್ಣಗೊಳಿಸಿದ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ತಂಡಕ್ಕೆ ಖುಷಿಯೋ ಖುಷಿ

‘ಜೀ ಕನ್ನಡ’ ವಾಹಿನಿಯ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಯಲ್ಲಿ ಮಧ್ಯಮ ವರ್ಗದ ಜನರ ಬದುಕಿನ ಕಥೆ ಇದೆ. ಈ ಕಹಾನಿಯನ್ನು ಹೇಳುವುದರ ಜೊತೆಗೆ ಜೀವನದ ಮೌಲ್ಯಗಳನ್ನು ಭಗವಂತನ ಪಾತ್ರದ ಮೂಲಕ ವೀಕ್ಷಕರಿಗೆ ತಿಳಿಸಲಾಗುತ್ತಿದೆ. ಈ ಎಲ್ಲ ವಿಶೇಷಗಳಿಂದಾಗಿ ಕಿರುತೆರೆ ವೀಕ್ಷಕರಿಗೆ ಈ ಸೀರಿಯಲ್​ ಇಷ್ಟ ಆಗಿದೆ.

200 ಎಪಿಸೋಡ್​ ಪೂರ್ಣಗೊಳಿಸಿದ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ತಂಡಕ್ಕೆ ಖುಷಿಯೋ ಖುಷಿ
ಭೂಮಿಗೆ ಬಂದ ಭಗವಂತ
ಮದನ್​ ಕುಮಾರ್​
|

Updated on: Dec 26, 2023 | 6:24 PM

Share

ಕನ್ನಡ ಕಿರುತೆರೆಯಲ್ಲಿ ಹಲವು ಡಿಫರೆಂಟ್​ ಸೀರಿಯಲ್​ಗಳು ಪ್ರಸಾರ ಆಗುತ್ತಿವೆ. ಪೈಪೋಟಿಯ ಮಧ್ಯೆ ನೂರಾರು ಸಂಚಿಕೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವುದು ಒಂದು ಸವಾಲು. ‘ಜೀ ಕನ್ನಡ’ (Zee Kannada) ವಾಹಿನಿಯಲ್ಲಿ ಬಿತ್ತರ ಆಗುತ್ತಿರುವ ‘ಭೂಮಿಗೆ ಬಂದ ಭಗವಂತ’ (Bhoomige Banda Bhagavantha) ಧಾರಾವಾಹಿ ಈಗ 200 ಎಪಿಸೋಡ್​ಗಳನ್ನು ಪೂರೈಸಿದೆ. ಬೇರೆ ಬೇರೆ ಕಾರಣಗಳಿಂದಾಗಿ ಪ್ರೇಕ್ಷಕರಿಗೆ ಈ ಸೀರಿಯಲ್​ ಇಷ್ಟ ಆಗಿದೆ. ನವೀನ್ ಕೃಷ್ಣ (Zee Kannada), ಕೃತಿಕಾ ರವೀಂದ್ರ ಮುಂತಾದವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಎಲ್ಲ ವಯೋಮಾನದ ವೀಕ್ಷಕರಿಗೂ ಈ ಧಾರಾವಾಹಿ ಇಷ್ಟ ಆಗಿದೆ ಎಂದು ತಂಡ ಹೇಳಿಕೊಂಡಿದೆ.

‘ಜೀ ಕನ್ನಡ’ ವಾಹಿನಿಯಲ್ಲಿ ರಿಯಾಲಿಟಿ ಶೋಗಳ ಜೊತೆಗೆ ಸೀರಿಯಲ್​ಗೂ ಹೆಚ್ಚು ಮಹತ್ವ ನೀಡಲಾಗುತ್ತದೆ. ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ನೀಡುವ ಹಲವು ಸೀರಿಯಲ್​ಗಳು ಪ್ರಸಾರ ಕಾಣುತ್ತಿವೆ. ಆ ಪೈಕಿ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಗೆ ಕೂಡ ಪ್ರೇಕ್ಷಕರು ಮನ ಸೋತಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 10 ಗಂಟೆಗೆ ಈ ಸೀರಿಯಲ್​ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: Dinesh Phadnis: ‘ಸಿಐಡಿ’ ಧಾರಾವಾಹಿ ನಟ ದಿನೇಶ್​ ಫಡ್ನಿಸ್​ ಇನ್ನಿಲ್ಲ; ಲಿವರ್​ ಸಮಸ್ಯೆಯಿಂದ ನಿಧನ

‘ಭೂಮಿಗೆ ಬಂದ ಭಗವಂತ’ ಧಾರಾವಾಹಿಯಲ್ಲಿ ಮಧ್ಯಮ ವರ್ಗದ ಜನರ ಬದುಕಿನ ಕಥೆ ಇದೆ. ಈ ಕಹಾನಿಯನ್ನು ಹೇಳುವುದರ ಜೊತೆಗೆ ಜೀವನದ ಮೌಲ್ಯಗಳನ್ನು ಭಗವಂತನ ಪಾತ್ರದ ಮೂಲಕ ವೀಕ್ಷಕರಿಗೆ ತಿಳಿಸಲಾಗುತ್ತಿದೆ. ಈ ಎಲ್ಲ ವಿಶೇಷಗಳಿಂದಾಗಿ ಕಿರುತೆರೆ ವೀಕ್ಷಕರಿಗೆ ಈ ಸೀರಿಯಲ್​ ಇಷ್ಟ ಆಗಿದೆ. 200 ಸಂಚಿಕೆಗಳನ್ನು ಪೂರೈಸಿರುವ ಖುಷಿಯಲ್ಲಿ ಈ ತಂಡ ಮುನ್ನುಗ್ಗುತ್ತಿದೆ.

‘ತಾಂಡವ ಪ್ರೊಡಕ್ಷನ್’ ನಿರ್ಮಾಣ ಸಂಸ್ಥೆಯ ಮೂಲಕ ಮೂಡಿಬರುತ್ತಿರುವ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಗೆ ಆರೂರು ಜಗದೀಶ್ ಅವರು ಪ್ರಧಾನ ನಿರ್ದೇಶಕರಾಗಿದ್ದಾರೆ. ಸಂಚಿಕೆ ನಿರ್ದೇಶಕರಾಗಿ ಕುಮಾರ್ ಕೆರಗೋಡು ಕೆಲಸ ಮಾಡುತ್ತಿದ್ದಾರೆ. ನವೀನ್ ಕೃಷ್ಣ, ಕೃತಿಕಾ ರವೀಂದ್ರ ಜೊತೆ ಉಮೇಶ್ ಎಂ.ಎಸ್, ಕಾರ್ತಿಕ್ ಸಾಮಗ, ಅನುರಾಗ್, ಅಂಕಿತಾ ಜಯರಾಮ್, ಅಶ್ವಿನಿ, ಶೋಧನ್ ಬಸ್ರೂರ್ ಮುಂತಾದವರು ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?