AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’ ಹೊಸ ಸೀಸನ್​ಗೆ ವಿಶ್ವಾದ್ಯಂತ ಆಡಿಷನ್; ಜೀ ಕನ್ನಡ ವಾಹಿನಿಯಿಂದ ಹೊಸ ಪ್ರಯತ್ನ

SaReGaMaPa Season 20: ‘ಸರಿಗಮಪ’ ರಿಯಾಲಿಟಿ ಶೋಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಈ ಕಾರಣದಿಂದಲೇ ವಿಶ್ವಾದ್ಯಂತ ಆಡಿಷನ್ ನಡೆಸುವ ನಿರ್ಧಾರಕ್ಕೆ ಬಂದಿದೆ ಜೀ ಕನ್ನಡ ವಾಹಿನಿ.

‘ಸರಿಗಮಪ’ ಹೊಸ ಸೀಸನ್​ಗೆ ವಿಶ್ವಾದ್ಯಂತ ಆಡಿಷನ್; ಜೀ ಕನ್ನಡ ವಾಹಿನಿಯಿಂದ ಹೊಸ ಪ್ರಯತ್ನ
ಸರೆಗಮಪ
ರಾಜೇಶ್ ದುಗ್ಗುಮನೆ
|

Updated on: Jul 10, 2023 | 7:41 AM

Share

‘ಸರಿಗಮಪ’ (SaReGaMaPa) ರಿಯಾಲಿಟಿ ಶೋಗಳ ಆಡಿಷನ್ ಈ ಮೊದಲು ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿತ್ತು. ಬಳಿಕ ಅದನ್ನು ರಾಜ್ಯಾದ್ಯಂತ ವಿಸ್ತರಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಿ ಆಡಿಷನ್ ಮಾಡಿ ಪ್ರತಿಭೆಗಳನ್ನು ಕರೆತರುವ ಕೆಲಸ ಆಯಿತು. ಈಗ ಜೀ ಕನ್ನಡ ವಾಹಿನಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದೆ. ವಿಶ್ವಾದ್ಯಂತ ಇರುವ ಕನ್ನಡದವರಿಗಾಗಿ ಹೊಸ ರೀತಿಯಲ್ಲಿ ಆಡಿಷನ್ ಮಾಡಲು ಮುಂದಾಗಿದೆ. ವಿಶ್ವಾದ್ಯಂತ ಸಂಚಾರ ನಡೆಸಿ ಪ್ರತಿಭೆಗಳನ್ನು ಕರೆದು ತರಲು ಜೀ ಕನ್ನಡ (Zee Kannada) ವಾಹಿನಿ ಸಿದ್ಧವಾಗಿದೆ. ಈ ಪ್ರಯತ್ನಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ‘ಸರಿಗಮಪ’ ಈಗಾಗಲೇ 19 ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈಗ 20ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ವಿವಿಧ ರಾಜ್ಯದ ಪ್ರತಿಭೆಗಳಿಗೂ ಈ ಶೋನಲ್ಲಿ ಅವಕಾಶ ಸಿಕ್ಕಿದೆ. ಈ ಶೋಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಈ ಕಾರಣದಿಂದಲೇ ವಿಶ್ವಾದ್ಯಂತ ಆಡಿಷನ್ ನಡೆಸುವ ನಿರ್ಧಾರಕ್ಕೆ ಬಂದಿದೆ ಜೀ ಕನ್ನಡ ವಾಹಿನಿ.

ಹೌದು, ವಿಶ್ವಾದ್ಯಂತ ಆಡಿಷನ್ ನಡೆಸುತ್ತಿರುವ ಕುರಿತು ಜೀ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ‘ಸಪ್ತ ಸಾಗರದಾಚೆ ಸ್ವರ ಸಂಚಾರ’ ಎನ್ನುವ ಕ್ಯಾಪ್ಶನ್​ನೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. ‘ಪ್ರಥಮ ಬಾರಿಗೆ ವಿದೇಶದಲ್ಲಿ ಆಡಿಷನ್ಸ್ ಮಾಡುತ್ತಿದ್ದೇವೆ. ಸರಿಗಮಪ ಈಗ ವಿಶ್ವಕ್ಕೆ ವಿಸ್ತರಿಸಲಿದೆ. ಕನ್ನಡದ ಸ್ವರಸಂಭ್ರಮ ಈಗ ವಿಶ್ವ ಸಂಭ್ರಮ ಆಗಲಿದೆ. ವಿಶ್ವದ ಕನ್ನಡಿಗರಿಗಾಗಿ ಜೀ ಕನ್ನಡ ಶುರು ಮಾಡ್ತಿದೆ ವರ್ಲ್ಡ್​​ವೈಡ್ ಆಡಿಷನ್ಸ್​’ ಎಂದು ವಾಹಿನಿ ಪ್ರೋಮೋದಲ್ಲಿ ತಿಳಿಸಿದೆ.

ಇದನ್ನೂ ಓದಿ: ‘ಸರಿಗಮಪ ಲಿಟಲ್​​ ಚಾಂಪ್ಸ್’ ವಿನ್ನರ್​ ಪ್ರಗತಿ ಬಡಿಗೇರ್​ಗೆ 21 ಲಕ್ಷ ಮೌಲ್ಯದ ಸೈಟ್​; ಶಿವಾನಿಗೆ ಏನು?

ಅಂದಹಾಗೆ ವಿಶ್ವದ ಯಾವ ಯಾವ ರಾಷ್ಟ್ರಗಳಲ್ಲಿ ಈ ಆಡಿಷನ್ ನಡೆಯಲಿದೆ ಎನ್ನುವ ಕುರಿತು ಮಾಹಿತಿ ಹೊರಬಿದ್ದಿಲ್ಲ. ದುಬೈ, ಅಮೆರಿಕ ಮೊದಲಾದ ಕಡೆಗಳಲ್ಲಿ ಆಡಿಷನ್ಸ್ ನಡೆಯಬಹುದು ಎಂಬುದು ವೀಕ್ಷಕರ ಊಹೆ. ಇದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

View this post on Instagram

A post shared by Zee Kannada (@zeekannada)

ಈಗಾಗಲೇ ‘ಸರಿಗಮಪ’ ಶೋ ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿದೆ. ಅನೇಕ ಗಾಯಕರನ್ನು ಇದು ಪರಿಚಯಿಸಿದೆ. ನಾದಬ್ರಹ್ಮ ಹಂಸಲೇಖ ಅವರ ಮಾರ್ಗದರ್ಶನದಿಂದ ಅನೇಕರ ಬದುಕು ಬದಲಾಗಿದೆ. ಇದರ ವೀಕ್ಷಕರ ವರ್ಗ ಕೂಡ ದೊಡ್ಡದಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ