AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’ ಹೊಸ ಸೀಸನ್​ಗೆ ವಿಶ್ವಾದ್ಯಂತ ಆಡಿಷನ್; ಜೀ ಕನ್ನಡ ವಾಹಿನಿಯಿಂದ ಹೊಸ ಪ್ರಯತ್ನ

SaReGaMaPa Season 20: ‘ಸರಿಗಮಪ’ ರಿಯಾಲಿಟಿ ಶೋಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಈ ಕಾರಣದಿಂದಲೇ ವಿಶ್ವಾದ್ಯಂತ ಆಡಿಷನ್ ನಡೆಸುವ ನಿರ್ಧಾರಕ್ಕೆ ಬಂದಿದೆ ಜೀ ಕನ್ನಡ ವಾಹಿನಿ.

‘ಸರಿಗಮಪ’ ಹೊಸ ಸೀಸನ್​ಗೆ ವಿಶ್ವಾದ್ಯಂತ ಆಡಿಷನ್; ಜೀ ಕನ್ನಡ ವಾಹಿನಿಯಿಂದ ಹೊಸ ಪ್ರಯತ್ನ
ಸರೆಗಮಪ
ರಾಜೇಶ್ ದುಗ್ಗುಮನೆ
|

Updated on: Jul 10, 2023 | 7:41 AM

Share

‘ಸರಿಗಮಪ’ (SaReGaMaPa) ರಿಯಾಲಿಟಿ ಶೋಗಳ ಆಡಿಷನ್ ಈ ಮೊದಲು ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿತ್ತು. ಬಳಿಕ ಅದನ್ನು ರಾಜ್ಯಾದ್ಯಂತ ವಿಸ್ತರಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಿ ಆಡಿಷನ್ ಮಾಡಿ ಪ್ರತಿಭೆಗಳನ್ನು ಕರೆತರುವ ಕೆಲಸ ಆಯಿತು. ಈಗ ಜೀ ಕನ್ನಡ ವಾಹಿನಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದೆ. ವಿಶ್ವಾದ್ಯಂತ ಇರುವ ಕನ್ನಡದವರಿಗಾಗಿ ಹೊಸ ರೀತಿಯಲ್ಲಿ ಆಡಿಷನ್ ಮಾಡಲು ಮುಂದಾಗಿದೆ. ವಿಶ್ವಾದ್ಯಂತ ಸಂಚಾರ ನಡೆಸಿ ಪ್ರತಿಭೆಗಳನ್ನು ಕರೆದು ತರಲು ಜೀ ಕನ್ನಡ (Zee Kannada) ವಾಹಿನಿ ಸಿದ್ಧವಾಗಿದೆ. ಈ ಪ್ರಯತ್ನಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ‘ಸರಿಗಮಪ’ ಈಗಾಗಲೇ 19 ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈಗ 20ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ವಿವಿಧ ರಾಜ್ಯದ ಪ್ರತಿಭೆಗಳಿಗೂ ಈ ಶೋನಲ್ಲಿ ಅವಕಾಶ ಸಿಕ್ಕಿದೆ. ಈ ಶೋಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಈ ಕಾರಣದಿಂದಲೇ ವಿಶ್ವಾದ್ಯಂತ ಆಡಿಷನ್ ನಡೆಸುವ ನಿರ್ಧಾರಕ್ಕೆ ಬಂದಿದೆ ಜೀ ಕನ್ನಡ ವಾಹಿನಿ.

ಹೌದು, ವಿಶ್ವಾದ್ಯಂತ ಆಡಿಷನ್ ನಡೆಸುತ್ತಿರುವ ಕುರಿತು ಜೀ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ‘ಸಪ್ತ ಸಾಗರದಾಚೆ ಸ್ವರ ಸಂಚಾರ’ ಎನ್ನುವ ಕ್ಯಾಪ್ಶನ್​ನೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. ‘ಪ್ರಥಮ ಬಾರಿಗೆ ವಿದೇಶದಲ್ಲಿ ಆಡಿಷನ್ಸ್ ಮಾಡುತ್ತಿದ್ದೇವೆ. ಸರಿಗಮಪ ಈಗ ವಿಶ್ವಕ್ಕೆ ವಿಸ್ತರಿಸಲಿದೆ. ಕನ್ನಡದ ಸ್ವರಸಂಭ್ರಮ ಈಗ ವಿಶ್ವ ಸಂಭ್ರಮ ಆಗಲಿದೆ. ವಿಶ್ವದ ಕನ್ನಡಿಗರಿಗಾಗಿ ಜೀ ಕನ್ನಡ ಶುರು ಮಾಡ್ತಿದೆ ವರ್ಲ್ಡ್​​ವೈಡ್ ಆಡಿಷನ್ಸ್​’ ಎಂದು ವಾಹಿನಿ ಪ್ರೋಮೋದಲ್ಲಿ ತಿಳಿಸಿದೆ.

ಇದನ್ನೂ ಓದಿ: ‘ಸರಿಗಮಪ ಲಿಟಲ್​​ ಚಾಂಪ್ಸ್’ ವಿನ್ನರ್​ ಪ್ರಗತಿ ಬಡಿಗೇರ್​ಗೆ 21 ಲಕ್ಷ ಮೌಲ್ಯದ ಸೈಟ್​; ಶಿವಾನಿಗೆ ಏನು?

ಅಂದಹಾಗೆ ವಿಶ್ವದ ಯಾವ ಯಾವ ರಾಷ್ಟ್ರಗಳಲ್ಲಿ ಈ ಆಡಿಷನ್ ನಡೆಯಲಿದೆ ಎನ್ನುವ ಕುರಿತು ಮಾಹಿತಿ ಹೊರಬಿದ್ದಿಲ್ಲ. ದುಬೈ, ಅಮೆರಿಕ ಮೊದಲಾದ ಕಡೆಗಳಲ್ಲಿ ಆಡಿಷನ್ಸ್ ನಡೆಯಬಹುದು ಎಂಬುದು ವೀಕ್ಷಕರ ಊಹೆ. ಇದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

View this post on Instagram

A post shared by Zee Kannada (@zeekannada)

ಈಗಾಗಲೇ ‘ಸರಿಗಮಪ’ ಶೋ ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿದೆ. ಅನೇಕ ಗಾಯಕರನ್ನು ಇದು ಪರಿಚಯಿಸಿದೆ. ನಾದಬ್ರಹ್ಮ ಹಂಸಲೇಖ ಅವರ ಮಾರ್ಗದರ್ಶನದಿಂದ ಅನೇಕರ ಬದುಕು ಬದಲಾಗಿದೆ. ಇದರ ವೀಕ್ಷಕರ ವರ್ಗ ಕೂಡ ದೊಡ್ಡದಿದೆ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ