AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’ ಹೊಸ ಸೀಸನ್​ಗೆ ವಿಶ್ವಾದ್ಯಂತ ಆಡಿಷನ್; ಜೀ ಕನ್ನಡ ವಾಹಿನಿಯಿಂದ ಹೊಸ ಪ್ರಯತ್ನ

SaReGaMaPa Season 20: ‘ಸರಿಗಮಪ’ ರಿಯಾಲಿಟಿ ಶೋಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಈ ಕಾರಣದಿಂದಲೇ ವಿಶ್ವಾದ್ಯಂತ ಆಡಿಷನ್ ನಡೆಸುವ ನಿರ್ಧಾರಕ್ಕೆ ಬಂದಿದೆ ಜೀ ಕನ್ನಡ ವಾಹಿನಿ.

‘ಸರಿಗಮಪ’ ಹೊಸ ಸೀಸನ್​ಗೆ ವಿಶ್ವಾದ್ಯಂತ ಆಡಿಷನ್; ಜೀ ಕನ್ನಡ ವಾಹಿನಿಯಿಂದ ಹೊಸ ಪ್ರಯತ್ನ
ಸರೆಗಮಪ
ರಾಜೇಶ್ ದುಗ್ಗುಮನೆ
|

Updated on: Jul 10, 2023 | 7:41 AM

Share

‘ಸರಿಗಮಪ’ (SaReGaMaPa) ರಿಯಾಲಿಟಿ ಶೋಗಳ ಆಡಿಷನ್ ಈ ಮೊದಲು ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿತ್ತು. ಬಳಿಕ ಅದನ್ನು ರಾಜ್ಯಾದ್ಯಂತ ವಿಸ್ತರಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಿ ಆಡಿಷನ್ ಮಾಡಿ ಪ್ರತಿಭೆಗಳನ್ನು ಕರೆತರುವ ಕೆಲಸ ಆಯಿತು. ಈಗ ಜೀ ಕನ್ನಡ ವಾಹಿನಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದೆ. ವಿಶ್ವಾದ್ಯಂತ ಇರುವ ಕನ್ನಡದವರಿಗಾಗಿ ಹೊಸ ರೀತಿಯಲ್ಲಿ ಆಡಿಷನ್ ಮಾಡಲು ಮುಂದಾಗಿದೆ. ವಿಶ್ವಾದ್ಯಂತ ಸಂಚಾರ ನಡೆಸಿ ಪ್ರತಿಭೆಗಳನ್ನು ಕರೆದು ತರಲು ಜೀ ಕನ್ನಡ (Zee Kannada) ವಾಹಿನಿ ಸಿದ್ಧವಾಗಿದೆ. ಈ ಪ್ರಯತ್ನಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ‘ಸರಿಗಮಪ’ ಈಗಾಗಲೇ 19 ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈಗ 20ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ವಿವಿಧ ರಾಜ್ಯದ ಪ್ರತಿಭೆಗಳಿಗೂ ಈ ಶೋನಲ್ಲಿ ಅವಕಾಶ ಸಿಕ್ಕಿದೆ. ಈ ಶೋಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಈ ಕಾರಣದಿಂದಲೇ ವಿಶ್ವಾದ್ಯಂತ ಆಡಿಷನ್ ನಡೆಸುವ ನಿರ್ಧಾರಕ್ಕೆ ಬಂದಿದೆ ಜೀ ಕನ್ನಡ ವಾಹಿನಿ.

ಹೌದು, ವಿಶ್ವಾದ್ಯಂತ ಆಡಿಷನ್ ನಡೆಸುತ್ತಿರುವ ಕುರಿತು ಜೀ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ‘ಸಪ್ತ ಸಾಗರದಾಚೆ ಸ್ವರ ಸಂಚಾರ’ ಎನ್ನುವ ಕ್ಯಾಪ್ಶನ್​ನೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. ‘ಪ್ರಥಮ ಬಾರಿಗೆ ವಿದೇಶದಲ್ಲಿ ಆಡಿಷನ್ಸ್ ಮಾಡುತ್ತಿದ್ದೇವೆ. ಸರಿಗಮಪ ಈಗ ವಿಶ್ವಕ್ಕೆ ವಿಸ್ತರಿಸಲಿದೆ. ಕನ್ನಡದ ಸ್ವರಸಂಭ್ರಮ ಈಗ ವಿಶ್ವ ಸಂಭ್ರಮ ಆಗಲಿದೆ. ವಿಶ್ವದ ಕನ್ನಡಿಗರಿಗಾಗಿ ಜೀ ಕನ್ನಡ ಶುರು ಮಾಡ್ತಿದೆ ವರ್ಲ್ಡ್​​ವೈಡ್ ಆಡಿಷನ್ಸ್​’ ಎಂದು ವಾಹಿನಿ ಪ್ರೋಮೋದಲ್ಲಿ ತಿಳಿಸಿದೆ.

ಇದನ್ನೂ ಓದಿ: ‘ಸರಿಗಮಪ ಲಿಟಲ್​​ ಚಾಂಪ್ಸ್’ ವಿನ್ನರ್​ ಪ್ರಗತಿ ಬಡಿಗೇರ್​ಗೆ 21 ಲಕ್ಷ ಮೌಲ್ಯದ ಸೈಟ್​; ಶಿವಾನಿಗೆ ಏನು?

ಅಂದಹಾಗೆ ವಿಶ್ವದ ಯಾವ ಯಾವ ರಾಷ್ಟ್ರಗಳಲ್ಲಿ ಈ ಆಡಿಷನ್ ನಡೆಯಲಿದೆ ಎನ್ನುವ ಕುರಿತು ಮಾಹಿತಿ ಹೊರಬಿದ್ದಿಲ್ಲ. ದುಬೈ, ಅಮೆರಿಕ ಮೊದಲಾದ ಕಡೆಗಳಲ್ಲಿ ಆಡಿಷನ್ಸ್ ನಡೆಯಬಹುದು ಎಂಬುದು ವೀಕ್ಷಕರ ಊಹೆ. ಇದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

View this post on Instagram

A post shared by Zee Kannada (@zeekannada)

ಈಗಾಗಲೇ ‘ಸರಿಗಮಪ’ ಶೋ ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿದೆ. ಅನೇಕ ಗಾಯಕರನ್ನು ಇದು ಪರಿಚಯಿಸಿದೆ. ನಾದಬ್ರಹ್ಮ ಹಂಸಲೇಖ ಅವರ ಮಾರ್ಗದರ್ಶನದಿಂದ ಅನೇಕರ ಬದುಕು ಬದಲಾಗಿದೆ. ಇದರ ವೀಕ್ಷಕರ ವರ್ಗ ಕೂಡ ದೊಡ್ಡದಿದೆ.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?