AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’ ಹೊಸ ಸೀಸನ್​ಗೆ ವಿಶ್ವಾದ್ಯಂತ ಆಡಿಷನ್; ಜೀ ಕನ್ನಡ ವಾಹಿನಿಯಿಂದ ಹೊಸ ಪ್ರಯತ್ನ

SaReGaMaPa Season 20: ‘ಸರಿಗಮಪ’ ರಿಯಾಲಿಟಿ ಶೋಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಈ ಕಾರಣದಿಂದಲೇ ವಿಶ್ವಾದ್ಯಂತ ಆಡಿಷನ್ ನಡೆಸುವ ನಿರ್ಧಾರಕ್ಕೆ ಬಂದಿದೆ ಜೀ ಕನ್ನಡ ವಾಹಿನಿ.

‘ಸರಿಗಮಪ’ ಹೊಸ ಸೀಸನ್​ಗೆ ವಿಶ್ವಾದ್ಯಂತ ಆಡಿಷನ್; ಜೀ ಕನ್ನಡ ವಾಹಿನಿಯಿಂದ ಹೊಸ ಪ್ರಯತ್ನ
ಸರೆಗಮಪ
ರಾಜೇಶ್ ದುಗ್ಗುಮನೆ
|

Updated on: Jul 10, 2023 | 7:41 AM

Share

‘ಸರಿಗಮಪ’ (SaReGaMaPa) ರಿಯಾಲಿಟಿ ಶೋಗಳ ಆಡಿಷನ್ ಈ ಮೊದಲು ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿತ್ತು. ಬಳಿಕ ಅದನ್ನು ರಾಜ್ಯಾದ್ಯಂತ ವಿಸ್ತರಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಿ ಆಡಿಷನ್ ಮಾಡಿ ಪ್ರತಿಭೆಗಳನ್ನು ಕರೆತರುವ ಕೆಲಸ ಆಯಿತು. ಈಗ ಜೀ ಕನ್ನಡ ವಾಹಿನಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದೆ. ವಿಶ್ವಾದ್ಯಂತ ಇರುವ ಕನ್ನಡದವರಿಗಾಗಿ ಹೊಸ ರೀತಿಯಲ್ಲಿ ಆಡಿಷನ್ ಮಾಡಲು ಮುಂದಾಗಿದೆ. ವಿಶ್ವಾದ್ಯಂತ ಸಂಚಾರ ನಡೆಸಿ ಪ್ರತಿಭೆಗಳನ್ನು ಕರೆದು ತರಲು ಜೀ ಕನ್ನಡ (Zee Kannada) ವಾಹಿನಿ ಸಿದ್ಧವಾಗಿದೆ. ಈ ಪ್ರಯತ್ನಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ‘ಸರಿಗಮಪ’ ಈಗಾಗಲೇ 19 ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈಗ 20ನೇ ಸೀಸನ್​ಗೆ ತಯಾರಿ ನಡೆಯುತ್ತಿದೆ. ವಿವಿಧ ರಾಜ್ಯದ ಪ್ರತಿಭೆಗಳಿಗೂ ಈ ಶೋನಲ್ಲಿ ಅವಕಾಶ ಸಿಕ್ಕಿದೆ. ಈ ಶೋಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಈ ಕಾರಣದಿಂದಲೇ ವಿಶ್ವಾದ್ಯಂತ ಆಡಿಷನ್ ನಡೆಸುವ ನಿರ್ಧಾರಕ್ಕೆ ಬಂದಿದೆ ಜೀ ಕನ್ನಡ ವಾಹಿನಿ.

ಹೌದು, ವಿಶ್ವಾದ್ಯಂತ ಆಡಿಷನ್ ನಡೆಸುತ್ತಿರುವ ಕುರಿತು ಜೀ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ‘ಸಪ್ತ ಸಾಗರದಾಚೆ ಸ್ವರ ಸಂಚಾರ’ ಎನ್ನುವ ಕ್ಯಾಪ್ಶನ್​ನೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. ‘ಪ್ರಥಮ ಬಾರಿಗೆ ವಿದೇಶದಲ್ಲಿ ಆಡಿಷನ್ಸ್ ಮಾಡುತ್ತಿದ್ದೇವೆ. ಸರಿಗಮಪ ಈಗ ವಿಶ್ವಕ್ಕೆ ವಿಸ್ತರಿಸಲಿದೆ. ಕನ್ನಡದ ಸ್ವರಸಂಭ್ರಮ ಈಗ ವಿಶ್ವ ಸಂಭ್ರಮ ಆಗಲಿದೆ. ವಿಶ್ವದ ಕನ್ನಡಿಗರಿಗಾಗಿ ಜೀ ಕನ್ನಡ ಶುರು ಮಾಡ್ತಿದೆ ವರ್ಲ್ಡ್​​ವೈಡ್ ಆಡಿಷನ್ಸ್​’ ಎಂದು ವಾಹಿನಿ ಪ್ರೋಮೋದಲ್ಲಿ ತಿಳಿಸಿದೆ.

ಇದನ್ನೂ ಓದಿ: ‘ಸರಿಗಮಪ ಲಿಟಲ್​​ ಚಾಂಪ್ಸ್’ ವಿನ್ನರ್​ ಪ್ರಗತಿ ಬಡಿಗೇರ್​ಗೆ 21 ಲಕ್ಷ ಮೌಲ್ಯದ ಸೈಟ್​; ಶಿವಾನಿಗೆ ಏನು?

ಅಂದಹಾಗೆ ವಿಶ್ವದ ಯಾವ ಯಾವ ರಾಷ್ಟ್ರಗಳಲ್ಲಿ ಈ ಆಡಿಷನ್ ನಡೆಯಲಿದೆ ಎನ್ನುವ ಕುರಿತು ಮಾಹಿತಿ ಹೊರಬಿದ್ದಿಲ್ಲ. ದುಬೈ, ಅಮೆರಿಕ ಮೊದಲಾದ ಕಡೆಗಳಲ್ಲಿ ಆಡಿಷನ್ಸ್ ನಡೆಯಬಹುದು ಎಂಬುದು ವೀಕ್ಷಕರ ಊಹೆ. ಇದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

View this post on Instagram

A post shared by Zee Kannada (@zeekannada)

ಈಗಾಗಲೇ ‘ಸರಿಗಮಪ’ ಶೋ ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿದೆ. ಅನೇಕ ಗಾಯಕರನ್ನು ಇದು ಪರಿಚಯಿಸಿದೆ. ನಾದಬ್ರಹ್ಮ ಹಂಸಲೇಖ ಅವರ ಮಾರ್ಗದರ್ಶನದಿಂದ ಅನೇಕರ ಬದುಕು ಬದಲಾಗಿದೆ. ಇದರ ವೀಕ್ಷಕರ ವರ್ಗ ಕೂಡ ದೊಡ್ಡದಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ