AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ‘ಪ್ಯಾಟೆ ಹುಡುಗೀರ್ ಹಳ್ಳಿ ಲೈಫು’; ನೀವು ಭಾಗವಹಿಸಬಹುದು, ಇಲ್ಲಿದೆ ಆಡಿಷನ್ ವಿವರ

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಪ್ಯಾಟೆ ಹುಡುಗೀರ್ ಹಳ್ಳಿ ಲೈಫು’ ಆಡಿಷನ್‌ಗಳು ಜುಲೈ 19 ರಂದು ಬೆಂಗಳೂರಿನಲ್ಲಿ ನಡೆಯಲಿವೆ. 18-28 ವರ್ಷದ ನಗರದ ಮಾಡರ್ನ್ ಹುಡುಗಿಯರು ಆಡಿಷನ್‌ಗೆ ಅರ್ಜಿ ಸಲ್ಲಿಸಬಹುದು. ಅಕುಲ್ ಬಾಲಾಜಿ ಶೋ ನಿರೂಪಣೆ ಮಾಡಲಿದ್ದಾರೆ. ಹಳ್ಳಿ ಜೀವನದ ಅನುಭವಗಳನ್ನು ತೋರಿಸುವ ಈ ಶೋ ಮನರಂಜನೆ ಮತ್ತು ಕಾಮಿಡಿಯ ಸಮ್ಮಿಶ್ರಣವಾಗಿದೆ.

ಬರಲಿದೆ ‘ಪ್ಯಾಟೆ ಹುಡುಗೀರ್ ಹಳ್ಳಿ ಲೈಫು’; ನೀವು ಭಾಗವಹಿಸಬಹುದು, ಇಲ್ಲಿದೆ ಆಡಿಷನ್ ವಿವರ
ಅಕುಲ್ ಬಾಲಾಜಿ
ರಾಜೇಶ್ ದುಗ್ಗುಮನೆ
|

Updated on:Jul 16, 2025 | 6:57 AM

Share

ಜೀ ಕನ್ನಡದಲ್ಲಿ ಹಲವು ರಿಯಾಲಿಟಿ ಶೋಗಳು ಬಂದು ಹೋಗಿವೆ. ಇದರಲ್ಲಿ ಬಹುತೇಕವು ಮೆಚ್ಚುಗೆ ಪಡೆದಿದೆ. ಈಗ ಹೊಸ ರಿಯಾಲಿಟಿ ಶೋ ಜೊತೆ ಬರಲು ಜೀ ಕನ್ನಡ ವಾಹಿನಿ ರೆಡಿ ಆಗಿದೆ. ಅದು ‘ಪ್ಯಾಟೆ ಹುಡುಗೀರ್ ಹಳ್ಳಿ ಲೈಫು’ ಎಂದು ಹೇಳಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಜೀ ಕನ್ನಡ ವಾಹಿನಿ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಹಳ್ಳಿ ಜೀವನ ನಡೆಸಲು ರೆಡಿ ಇರೋ ಮಾಡರ್ನ್​ ಹುಡುಗಿಯರಿಗೆ ಆಹ್ವಾನ ನೀಡಲಾಗಿದೆ. ಅಕುಲ್ ಬಾಲಾಜಿ (Akul Balaji) ಶೋನ ನೇತೃತ್ವ ವಹಿಸಲಿದ್ದಾರೆ.

‘ಹಳ್ಳಿ ಬದುಕಿನ ಬವಣೆಗಳನ್ನು ತೆರೆ ಮೇಲೆ ತರೋ ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಶೀಘ್ರದಲ್ಲಿ’ ಎಂದು ಪ್ರೋಮೋಗೆ ಕ್ಯಾಪ್ಶನ್ ನೀಡಲಾಗಿದೆ. ಈ ಮೂಲಕ ವೀಕೆಂಡ್​ನಲ್ಲಿ ಮಸ್ತ್ ಮನರಂಜನೆ ನೀಡಲು ಒಂದು ಶೋ ರೆಡಿ ಆಗುತ್ತಿದೆ. ಈ ಶೋಗೆ ಆಡಿಷನ್ ಕೂಡ ನಡೆಯುತ್ತಿದೆ. ಅದರ ವಿವರವನ್ನು ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ.

ಇದನ್ನೂ ಓದಿ
Image
ಮುಂದಿನ ಮೂರು ವರ್ಷ ರಜನಿಕಾಂತ್ ಬ್ಯುಸಿ; ಮತ್ತೆ ಮೂರು ಸಿನಿಮಾ ಫೈನಲ್
Image
ಪಾತ್ರ ಕೊಡದ್ದಕ್ಕೆ ಸಿಟ್ಟು; ಯಶಸ್ಸು ಕೊಟ್ಟ ಬನ್ಸಾಲಿ ಮರೆತ ರಣವೀರ್ ಸಿಂಗ್
Image
ರಶ್ಮಿಕಾ ಸಿನಿಮಾ ಪ್ರಚಾರಕ್ಕೆ ಸಹಾಯ ಮಾಡಲಿದ್ದಾರೆ ಜೂ.ಎನ್​ಟಿಆರ್​-ಹೃತಿಕ್
Image
‘ರಾಮಾಯಣ’ ಬಜೆಟ್ ನಾಲ್ಕು ಸಾವಿರ ಕೋಟಿ; ಯಶ್ ಪಾಲೆಷ್ಟು?

ಜುಲೈ 19ರಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಆಡಿಷನ್ ನಡೆಯಲಿದೆ. ಆಡಿಷನ್​ನಲ್ಲಿ ಭಾಗವಹಿಸುವವರಿಗೆ ಕೆಲವು ಷರತ್ತುಗಳು ಇವೆ. ನಿಮ್ಮ ವಯಸ್ಸು  18ರಿಂದ 28 ವರ್ಷ ಆಗಿರಬೇಕು. ನೀವು ನಗರದಲ್ಲೇ ಹುಟ್ಟಿ ಬೆಳೆದು, ಸಖತ್ ಮಾಡರ್ನ್ ಆಗಿರಬೇಕು.  ಬರುವಾಗ ಆಧಾರ್ ಕಾರ್ಡ್ ಹಾಗೂ ಪಾಸ್​ಪೋರ್ಟ್ ಸೈಜ್ ಫೋಟೋ ತರೋಕೆ ಮರೆಯಬೇಡಿ.

ಜೀ ಕನ್ನಡ ವಾಹಿನಿ ಮಾಡಿದ ಪ್ರೋಮೋ ಪೋಸ್ಟ್

View this post on Instagram

A post shared by Zee Kannada (@zeekannada)

‘ನಿಮ್ಮ ಫೇವರಿಟ್ ರಿಯಾಲಿಟಿ ಶೋನಲ್ಲಿ ಅಕುಲ್ ಬರ್ತಿದಾನೆ ಎಂದರೆ ಸುನಾಮಿ-ಸುಂಟರಗಾಳಿ ಎಲ್ಲ ಆಗಲೇಬೇಕು’ ಎಂದು ಅಕುಲ್ ಬಾಲಾಜಿ ಹೇಳಿದ್ದಾರೆ. ಈ ಮೊದಲು ‘ಪ್ಯಾಟೆ ಹುಡುಗೀರ್ ಹಳ್ಳಿ ಲೈಫು’ ಶೋನ ಅಕುಲ್ ಅವರೇ ಹ್ಯಾಂಡಲ್ ಮಾಡಿದ್ದರು. ಈ ಬಾರಿಯೂ ಅವರೇ ನಿರೂಪಕರಾಗಿ ಇರಲಿದ್ದಾರೆ. ಖಡಕ್ ಆಗಿ ಅವರು ಶೋನ ನಡೆಸಿಕೊಡಲಿದ್ದಾರೆ. ಈ ಶೋಗೆ ಇನ್ನೂ ಶೀರ್ಷಿಕೆ ಅಧಿಕೃತವಾಗಿ ಫಿಕ್ಸ್ ಆಗಿಲ್ಲ.

ಇದನ್ನೂ ಓದಿ: ಬಿಗ್ ಬಾಸ್ ಮನೆಯ ವಸ್ತು ಬಳಸಿ ರೆಸಾರ್ಟ್ ಮಾಡಿದ ಅಕುಲ್ ಬಾಲಾಜಿ; ಸುದೀಪ್ ತಬ್ಬಿಬ್ಬು

ಮಾಡರ್ನ್​ ಹುಡುಗಿಯರಿಗೆ ಹಳ್ಳಿ ಲೈಫ್ ಬಗ್ಗೆ ಗೊತ್ತಿರುವುದಿಲ್ಲ. ಅಂಥವರನ್ನು ಕರೆತಂದು ಹಳ್ಳಿ ಜೀವನ ತೋರಿಸೋದು ಶೋನ ಉದ್ದೇಶ. ಇದರ ಜೊತೆ ಒಂದಷ್ಟು ಕಾಮಿಡಿ ಹಾಗೂ ಮನರಂಜನೆ ಇರುತ್ತದೆ. ಈ ಶೋ ಯಾವಾಗ ಬರುತ್ತದೆ ಎಂದು ಫ್ಯಾನ್ಸ್ ಎಗ್ಸೈಟ್ ಆಗಿದ್ದಾರೆ. ಈ ಬಗ್ಗೆ ಪೋಸ್ಟ್​ನಲ್ಲಿ ಕಮೆಂಟ್​ಗಳನ್ನು ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:55 am, Wed, 16 July 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್