AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ವಾರವೂ ಎರಡಂಕಿ ಟಿಆರ್​ಪಿ ಪಡೆದ ‘ಕರ್ಣ’; ಟಾಪ್ ಐದು ಧಾರಾವಾಹಿಗಳಿವು

Karna Serial: ಜೀ ಕನ್ನಡ ವಾಹಿನಿಯ "ಕರ್ಣ" ಧಾರಾವಾಹಿ ಟಿಆರ್ಪಿ ರೇಟಿಂಗ್‌ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಕಿರಣ್ ರಾಜ್, ಭವ್ಯಾ ಗೌಡ ಮತ್ತು ನಮ್ರತಾ ಗೌಡ ಅವರ ಅಭಿನಯ ಈ ಯಶಸ್ಸಿಗೆ ಕಾರಣ.ಈ ಧಾರಾವಾಹಿಯಲ್ಲಿ ಹಾಡು ಹಾಗೂ ಫೈಟ್​ಗಳು ಕೂಡ ಇದ್ದು, ವಿಶೇಷ ಎನಿಸಿಕೊಂಡಿದೆ.

ಎರಡನೇ ವಾರವೂ ಎರಡಂಕಿ ಟಿಆರ್​ಪಿ ಪಡೆದ ‘ಕರ್ಣ’; ಟಾಪ್ ಐದು ಧಾರಾವಾಹಿಗಳಿವು
ಕರ್ಣ ಟೀಂ
ರಾಜೇಶ್ ದುಗ್ಗುಮನೆ
|

Updated on: Jul 18, 2025 | 12:54 PM

Share

ಜೀ ಕನ್ನಡದಲ್ಲಿ ಹೊಸದಾಗಿ ಆರಂಭ ಆದ ‘ಕರ್ಣ’ ಧಾರಾವಾಹಿಯನ್ನು (Karna Serial) ಜನರು ಮೆಚ್ಚಿಕೊಂಡಿದ್ದಾರೆ. ಕಿರಣ್ ರಾಜ್, ಭವ್ಯಾ ಗೌಡ ಹಾಗೂ ನಮ್ರತಾ ಗೌಡ ಅವರು ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಈಗ ಟಿಆರ್​ಪಿಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಅಷ್ಟೇ ಅಲ್ಲ ಈ ಧಾರಾವಾಹಿಗೆ ಎರಡಂಕಿ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಟಾಪ್ ಐದು ಧಾರಾವಾಹಿಗಳ ವಿವರ ಇಲ್ಲಿದೆ.

‘ಕರ್ಣ’ ಧಾರಾವಾಹಿ ಆರಂಭಕ್ಕೆ ಕೆಲವು ಅಡೆತಡೆಗಳು ಎದುರಾದವು. ಇದೆಲ್ಲವನ್ನೂ ಮೆಟ್ಟಿ ನಿಂತು ಈ ಧಾರಾವಾಹಿ ಪ್ರಸಾರ ಆರಂಭಿಸಿತು. ಈಗ ಧಾರಾವಾಹಿ ಎಲ್ಲ ಕಡೆಗಳಲ್ಲೂ ಮೆಚ್ಚುಗೆಯನ್ನು ಪಡೆದಿದೆ. ಈ ಧಾರಾವಾಹಿ 10+ ಟಿಆರ್​ಪಿ ಪಡೆದುಕೊಂಡಿದೆ. ಈ ಮೂಲಕ ಪ್ರಸಾರ ಆರಂಭಿಸಿದ ಎರಡನೇ ವಾರವೂ ಧಾರಾವಾಹಿ ತನ್ನ ಪಾರುಪತ್ಯ ಸಾಧಿಸಿದೆ. ಇದು ತಂಡದ ಖುಷಿ ಹೆಚ್ಚಿಸಿದೆ.

ಹೊಸ ಧಾರಾವಾಹಿ ಆದ ಕಾರಣ ಆರಂಭದಲ್ಲಿ ಒಳ್ಳೆಯ ಟಿಆರ್​ಪಿ ಬರುತ್ತದೆ. ಆದರೆ, ಅದನ್ನು ಮುಂದಿನ ದಿನಗಳಲ್ಲಿ ಕಾಪಾಡಿಕೊಂಡು ಹೋಗೋದು ದೊಡ್ಡ ಚಾಲೆಂಜ್. ಆ ಲಾಚೆಂಜ್​ನ ‘ಕರ್ಣ’ ಧಾರಾವಾಹಿ ತಂಡ ಹೇಗೆ ನಿಭಾಯಿಸುತ್ತದೆ ಅನ್ನೋದು ಮುಖ್ಯವಾಗುತ್ತದೆ.

ಇದನ್ನೂ ಓದಿ
Image
ಬರ್ತ್​ಡೇ ಗರ್ಲ್ ಪ್ರಿಯಾಂಕಾ ಚೋಪ್ರಾ ಎಷ್ಟು ಶ್ರೀಮಂತೆ ಗೊತ್ತಾ?
Image
ಸಿನಿಮಾ ರಿಲೀಸ್ ಸಂದರ್ಭದಲ್ಲೇ ಆಸ್ಪತ್ರೆಗೆ ದಾಖಲಾದ ವಿಜಯ್ ದೇವರಕೊಂಡ
Image
ಥಿಯೇಟರ್​ನಲ್ಲಿ ರಿಲೀಸ್ ಆದ ಒಂದೇ ದಿನಕ್ಕೆ ಈ ಥ್ರಿಲ್ಲರ್ ಚಿತ್ರ ಒಟಿಟಿಗೆ
Image
ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ 

ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ವಿಕಾಶ್ ಉತ್ತಯ್ಯ, ನಿಶಾ ರವಿಕೃಷ್ಣನ್ ಮೊದಲಾದವರು ನಟಿಸಿದ್ದಾರೆ. ಈ ಧಾರವಾಹಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಒಳ್ಳೆಯ ರೇಟಿಂಗ್ ಪಡೆದು ಮುಂದೆ ಸಾಗುತ್ತಿದೆ.

ಇದನ್ನೂ ಓದಿ: ಕಿರಣ್ ರಾಜ್ ಸಿನಿಮಾ ಜೊತೆ ‘ಕರ್ಣ’ ಧಾರಾವಾಹಿ ಮಾಡ್ತಿರೋದೇಕೆ? ಆ ವಿಶೇಷ ವ್ಯಕ್ತಿಯೇ ಕಾರಣ

ನಾಲ್ಕನೇ ಸ್ಥಾನದಲ್ಲಿ ‘ನಾನಿನ್ನ ಬಿಡಲಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಹಾರರ್ ಶೈಲಿಯಲ್ಲಿ ಮೂಡಿ ಬಂದಿದ್ದು, ಜನರಿಂದ ಮೆಚ್ಚುಗೆ ಪಡೆಯುತ್ತಿದೆ. ಮಾಟ-ಮಂತ್ರಗಳ ವಿಚಾರಗಳನ್ನೂ ಇಲ್ಲಿ ಹೇಳಲಾಗುತ್ತಿದೆ. ಐದನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಇತ್ತೀಚೆಗೆ ಸಾಕಷ್ಟು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಟಾಪ್ ಐದರಲ್ಲಿರುವ ಎಲ್ಲಾ ಧಾರಾವಾಹಿಗಳು ಜೀ ಕನ್ನಡದವೇ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!