AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ವಾರವೂ ಎರಡಂಕಿ ಟಿಆರ್​ಪಿ ಪಡೆದ ‘ಕರ್ಣ’; ಟಾಪ್ ಐದು ಧಾರಾವಾಹಿಗಳಿವು

Karna Serial: ಜೀ ಕನ್ನಡ ವಾಹಿನಿಯ "ಕರ್ಣ" ಧಾರಾವಾಹಿ ಟಿಆರ್ಪಿ ರೇಟಿಂಗ್‌ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಕಿರಣ್ ರಾಜ್, ಭವ್ಯಾ ಗೌಡ ಮತ್ತು ನಮ್ರತಾ ಗೌಡ ಅವರ ಅಭಿನಯ ಈ ಯಶಸ್ಸಿಗೆ ಕಾರಣ.ಈ ಧಾರಾವಾಹಿಯಲ್ಲಿ ಹಾಡು ಹಾಗೂ ಫೈಟ್​ಗಳು ಕೂಡ ಇದ್ದು, ವಿಶೇಷ ಎನಿಸಿಕೊಂಡಿದೆ.

ಎರಡನೇ ವಾರವೂ ಎರಡಂಕಿ ಟಿಆರ್​ಪಿ ಪಡೆದ ‘ಕರ್ಣ’; ಟಾಪ್ ಐದು ಧಾರಾವಾಹಿಗಳಿವು
ಕರ್ಣ ಟೀಂ
ರಾಜೇಶ್ ದುಗ್ಗುಮನೆ
|

Updated on: Jul 18, 2025 | 12:54 PM

Share

ಜೀ ಕನ್ನಡದಲ್ಲಿ ಹೊಸದಾಗಿ ಆರಂಭ ಆದ ‘ಕರ್ಣ’ ಧಾರಾವಾಹಿಯನ್ನು (Karna Serial) ಜನರು ಮೆಚ್ಚಿಕೊಂಡಿದ್ದಾರೆ. ಕಿರಣ್ ರಾಜ್, ಭವ್ಯಾ ಗೌಡ ಹಾಗೂ ನಮ್ರತಾ ಗೌಡ ಅವರು ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಈಗ ಟಿಆರ್​ಪಿಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಅಷ್ಟೇ ಅಲ್ಲ ಈ ಧಾರಾವಾಹಿಗೆ ಎರಡಂಕಿ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಟಾಪ್ ಐದು ಧಾರಾವಾಹಿಗಳ ವಿವರ ಇಲ್ಲಿದೆ.

‘ಕರ್ಣ’ ಧಾರಾವಾಹಿ ಆರಂಭಕ್ಕೆ ಕೆಲವು ಅಡೆತಡೆಗಳು ಎದುರಾದವು. ಇದೆಲ್ಲವನ್ನೂ ಮೆಟ್ಟಿ ನಿಂತು ಈ ಧಾರಾವಾಹಿ ಪ್ರಸಾರ ಆರಂಭಿಸಿತು. ಈಗ ಧಾರಾವಾಹಿ ಎಲ್ಲ ಕಡೆಗಳಲ್ಲೂ ಮೆಚ್ಚುಗೆಯನ್ನು ಪಡೆದಿದೆ. ಈ ಧಾರಾವಾಹಿ 10+ ಟಿಆರ್​ಪಿ ಪಡೆದುಕೊಂಡಿದೆ. ಈ ಮೂಲಕ ಪ್ರಸಾರ ಆರಂಭಿಸಿದ ಎರಡನೇ ವಾರವೂ ಧಾರಾವಾಹಿ ತನ್ನ ಪಾರುಪತ್ಯ ಸಾಧಿಸಿದೆ. ಇದು ತಂಡದ ಖುಷಿ ಹೆಚ್ಚಿಸಿದೆ.

ಹೊಸ ಧಾರಾವಾಹಿ ಆದ ಕಾರಣ ಆರಂಭದಲ್ಲಿ ಒಳ್ಳೆಯ ಟಿಆರ್​ಪಿ ಬರುತ್ತದೆ. ಆದರೆ, ಅದನ್ನು ಮುಂದಿನ ದಿನಗಳಲ್ಲಿ ಕಾಪಾಡಿಕೊಂಡು ಹೋಗೋದು ದೊಡ್ಡ ಚಾಲೆಂಜ್. ಆ ಲಾಚೆಂಜ್​ನ ‘ಕರ್ಣ’ ಧಾರಾವಾಹಿ ತಂಡ ಹೇಗೆ ನಿಭಾಯಿಸುತ್ತದೆ ಅನ್ನೋದು ಮುಖ್ಯವಾಗುತ್ತದೆ.

ಇದನ್ನೂ ಓದಿ
Image
ಬರ್ತ್​ಡೇ ಗರ್ಲ್ ಪ್ರಿಯಾಂಕಾ ಚೋಪ್ರಾ ಎಷ್ಟು ಶ್ರೀಮಂತೆ ಗೊತ್ತಾ?
Image
ಸಿನಿಮಾ ರಿಲೀಸ್ ಸಂದರ್ಭದಲ್ಲೇ ಆಸ್ಪತ್ರೆಗೆ ದಾಖಲಾದ ವಿಜಯ್ ದೇವರಕೊಂಡ
Image
ಥಿಯೇಟರ್​ನಲ್ಲಿ ರಿಲೀಸ್ ಆದ ಒಂದೇ ದಿನಕ್ಕೆ ಈ ಥ್ರಿಲ್ಲರ್ ಚಿತ್ರ ಒಟಿಟಿಗೆ
Image
ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ 

ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ವಿಕಾಶ್ ಉತ್ತಯ್ಯ, ನಿಶಾ ರವಿಕೃಷ್ಣನ್ ಮೊದಲಾದವರು ನಟಿಸಿದ್ದಾರೆ. ಈ ಧಾರವಾಹಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಒಳ್ಳೆಯ ರೇಟಿಂಗ್ ಪಡೆದು ಮುಂದೆ ಸಾಗುತ್ತಿದೆ.

ಇದನ್ನೂ ಓದಿ: ಕಿರಣ್ ರಾಜ್ ಸಿನಿಮಾ ಜೊತೆ ‘ಕರ್ಣ’ ಧಾರಾವಾಹಿ ಮಾಡ್ತಿರೋದೇಕೆ? ಆ ವಿಶೇಷ ವ್ಯಕ್ತಿಯೇ ಕಾರಣ

ನಾಲ್ಕನೇ ಸ್ಥಾನದಲ್ಲಿ ‘ನಾನಿನ್ನ ಬಿಡಲಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಹಾರರ್ ಶೈಲಿಯಲ್ಲಿ ಮೂಡಿ ಬಂದಿದ್ದು, ಜನರಿಂದ ಮೆಚ್ಚುಗೆ ಪಡೆಯುತ್ತಿದೆ. ಮಾಟ-ಮಂತ್ರಗಳ ವಿಚಾರಗಳನ್ನೂ ಇಲ್ಲಿ ಹೇಳಲಾಗುತ್ತಿದೆ. ಐದನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಇತ್ತೀಚೆಗೆ ಸಾಕಷ್ಟು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಟಾಪ್ ಐದರಲ್ಲಿರುವ ಎಲ್ಲಾ ಧಾರಾವಾಹಿಗಳು ಜೀ ಕನ್ನಡದವೇ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ