AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ವಾರವೂ ಎರಡಂಕಿ ಟಿಆರ್​ಪಿ ಪಡೆದ ‘ಕರ್ಣ’; ಟಾಪ್ ಐದು ಧಾರಾವಾಹಿಗಳಿವು

Karna Serial: ಜೀ ಕನ್ನಡ ವಾಹಿನಿಯ "ಕರ್ಣ" ಧಾರಾವಾಹಿ ಟಿಆರ್ಪಿ ರೇಟಿಂಗ್‌ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಕಿರಣ್ ರಾಜ್, ಭವ್ಯಾ ಗೌಡ ಮತ್ತು ನಮ್ರತಾ ಗೌಡ ಅವರ ಅಭಿನಯ ಈ ಯಶಸ್ಸಿಗೆ ಕಾರಣ.ಈ ಧಾರಾವಾಹಿಯಲ್ಲಿ ಹಾಡು ಹಾಗೂ ಫೈಟ್​ಗಳು ಕೂಡ ಇದ್ದು, ವಿಶೇಷ ಎನಿಸಿಕೊಂಡಿದೆ.

ಎರಡನೇ ವಾರವೂ ಎರಡಂಕಿ ಟಿಆರ್​ಪಿ ಪಡೆದ ‘ಕರ್ಣ’; ಟಾಪ್ ಐದು ಧಾರಾವಾಹಿಗಳಿವು
ಕರ್ಣ ಟೀಂ
ರಾಜೇಶ್ ದುಗ್ಗುಮನೆ
|

Updated on: Jul 18, 2025 | 12:54 PM

Share

ಜೀ ಕನ್ನಡದಲ್ಲಿ ಹೊಸದಾಗಿ ಆರಂಭ ಆದ ‘ಕರ್ಣ’ ಧಾರಾವಾಹಿಯನ್ನು (Karna Serial) ಜನರು ಮೆಚ್ಚಿಕೊಂಡಿದ್ದಾರೆ. ಕಿರಣ್ ರಾಜ್, ಭವ್ಯಾ ಗೌಡ ಹಾಗೂ ನಮ್ರತಾ ಗೌಡ ಅವರು ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಈಗ ಟಿಆರ್​ಪಿಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಅಷ್ಟೇ ಅಲ್ಲ ಈ ಧಾರಾವಾಹಿಗೆ ಎರಡಂಕಿ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಟಾಪ್ ಐದು ಧಾರಾವಾಹಿಗಳ ವಿವರ ಇಲ್ಲಿದೆ.

‘ಕರ್ಣ’ ಧಾರಾವಾಹಿ ಆರಂಭಕ್ಕೆ ಕೆಲವು ಅಡೆತಡೆಗಳು ಎದುರಾದವು. ಇದೆಲ್ಲವನ್ನೂ ಮೆಟ್ಟಿ ನಿಂತು ಈ ಧಾರಾವಾಹಿ ಪ್ರಸಾರ ಆರಂಭಿಸಿತು. ಈಗ ಧಾರಾವಾಹಿ ಎಲ್ಲ ಕಡೆಗಳಲ್ಲೂ ಮೆಚ್ಚುಗೆಯನ್ನು ಪಡೆದಿದೆ. ಈ ಧಾರಾವಾಹಿ 10+ ಟಿಆರ್​ಪಿ ಪಡೆದುಕೊಂಡಿದೆ. ಈ ಮೂಲಕ ಪ್ರಸಾರ ಆರಂಭಿಸಿದ ಎರಡನೇ ವಾರವೂ ಧಾರಾವಾಹಿ ತನ್ನ ಪಾರುಪತ್ಯ ಸಾಧಿಸಿದೆ. ಇದು ತಂಡದ ಖುಷಿ ಹೆಚ್ಚಿಸಿದೆ.

ಹೊಸ ಧಾರಾವಾಹಿ ಆದ ಕಾರಣ ಆರಂಭದಲ್ಲಿ ಒಳ್ಳೆಯ ಟಿಆರ್​ಪಿ ಬರುತ್ತದೆ. ಆದರೆ, ಅದನ್ನು ಮುಂದಿನ ದಿನಗಳಲ್ಲಿ ಕಾಪಾಡಿಕೊಂಡು ಹೋಗೋದು ದೊಡ್ಡ ಚಾಲೆಂಜ್. ಆ ಲಾಚೆಂಜ್​ನ ‘ಕರ್ಣ’ ಧಾರಾವಾಹಿ ತಂಡ ಹೇಗೆ ನಿಭಾಯಿಸುತ್ತದೆ ಅನ್ನೋದು ಮುಖ್ಯವಾಗುತ್ತದೆ.

ಇದನ್ನೂ ಓದಿ
Image
ಬರ್ತ್​ಡೇ ಗರ್ಲ್ ಪ್ರಿಯಾಂಕಾ ಚೋಪ್ರಾ ಎಷ್ಟು ಶ್ರೀಮಂತೆ ಗೊತ್ತಾ?
Image
ಸಿನಿಮಾ ರಿಲೀಸ್ ಸಂದರ್ಭದಲ್ಲೇ ಆಸ್ಪತ್ರೆಗೆ ದಾಖಲಾದ ವಿಜಯ್ ದೇವರಕೊಂಡ
Image
ಥಿಯೇಟರ್​ನಲ್ಲಿ ರಿಲೀಸ್ ಆದ ಒಂದೇ ದಿನಕ್ಕೆ ಈ ಥ್ರಿಲ್ಲರ್ ಚಿತ್ರ ಒಟಿಟಿಗೆ
Image
ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ 

ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ವಿಕಾಶ್ ಉತ್ತಯ್ಯ, ನಿಶಾ ರವಿಕೃಷ್ಣನ್ ಮೊದಲಾದವರು ನಟಿಸಿದ್ದಾರೆ. ಈ ಧಾರವಾಹಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಒಳ್ಳೆಯ ರೇಟಿಂಗ್ ಪಡೆದು ಮುಂದೆ ಸಾಗುತ್ತಿದೆ.

ಇದನ್ನೂ ಓದಿ: ಕಿರಣ್ ರಾಜ್ ಸಿನಿಮಾ ಜೊತೆ ‘ಕರ್ಣ’ ಧಾರಾವಾಹಿ ಮಾಡ್ತಿರೋದೇಕೆ? ಆ ವಿಶೇಷ ವ್ಯಕ್ತಿಯೇ ಕಾರಣ

ನಾಲ್ಕನೇ ಸ್ಥಾನದಲ್ಲಿ ‘ನಾನಿನ್ನ ಬಿಡಲಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಹಾರರ್ ಶೈಲಿಯಲ್ಲಿ ಮೂಡಿ ಬಂದಿದ್ದು, ಜನರಿಂದ ಮೆಚ್ಚುಗೆ ಪಡೆಯುತ್ತಿದೆ. ಮಾಟ-ಮಂತ್ರಗಳ ವಿಚಾರಗಳನ್ನೂ ಇಲ್ಲಿ ಹೇಳಲಾಗುತ್ತಿದೆ. ಐದನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಇತ್ತೀಚೆಗೆ ಸಾಕಷ್ಟು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಟಾಪ್ ಐದರಲ್ಲಿರುವ ಎಲ್ಲಾ ಧಾರಾವಾಹಿಗಳು ಜೀ ಕನ್ನಡದವೇ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!