AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ 

ಜೀ ಕನ್ನಡದ ಹೊಸ ರಿಯಾಲಿಟಿ ಶೋ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಈ ಶೋ ಕುಟುಂಬದ ಬಂಧಗಳನ್ನು ಹೇಳುತ್ತದೆ. ‘ಪ್ಯಾಟೆ ಹುಡಗೀರ್ ಹಳ್ಳಿ ಲೈಫು’ ಶೋ ಬರಲಿದೆ. ಅದರ ಜೊತೆ ಈ ಶೋ ಕೂಡ ಇರುತ್ತೆ ಎನ್ನಲಾಗಿದೆ. ಹೊಸ ರಿಯಾಲಿಟಿ ಶೋನ ಟೈಟಲ್ ಭಿನ್ನವಾಗಿದ್ದು, ಇನ್ನೂ ಯಾರೊಬ್ಬರೂ ಕೇಳಿಲ್ಲ ಅನ್ನೋದು ವಿಶೇಷ.

ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ 
ಹೊಸ ರಿಯಾಲಿಟಿ ಶೋ
ರಾಜೇಶ್ ದುಗ್ಗುಮನೆ
|

Updated on:Jul 17, 2025 | 8:14 AM

Share

ಜೀ ಕನ್ನಡ ಇತ್ತೀಚೆಗಷ್ಟೇ ‘ಪ್ಯಾಟೆ ಹುಡಗೀರ್ ಹಳ್ಳಿ ಲೈಫು’ ರಿಯಾಲಿಟಿ ಶೋ ತರೋದಾಗಿ ಘೋಷಣೆ ಮಾಡಿತ್ತು. ಇದಕ್ಕೆ ಆಡಿಷನ್ ಕೂಡ ಕರೆದಿದೆ. ಹೀಗಿರುವಾಗಲೇ ಜೀ  ಮತ್ತೊಂದು ರಿಯಾಲಿಟಿ ಶೋನ ಘೋಷಣೆ ಮಾಡಿದೆ. ಇದರ ಪ್ರೋಮೋ ಸಾಕಷ್ಟು ಗಮನ ಸೆಳೆದಿದೆ. ಅಷ್ಟಕ್ಕೂ ಯಾವುದು ಆ ಶೋ? ‘ನಾವು ನಮ್ಮವರು’. ಈ ರಿಯಾಲಿಟಿ ಶೋನ (Reality Show) ಟೈಟಲ್ ಭಿನ್ನವಾಗಿದ್ದು, ಇನ್ನೂ ಯಾರೊಬ್ಬರೂ ಕೇಳಿಲ್ಲ ಅನ್ನೋದು ವಿಶೇಷ.

ಶೀಘ್ರದಲ್ಲೇ ಜೀ ಕನ್ನಡದಲ್ಲಿ ‘ನಾವು ನಮ್ಮವರು’ ರಿಯಾಲಿಟಿ ಶೋ ಪ್ರಸಾರ ಕಾಣಲಿದ್ದು, ಪ್ರೋಮೋ ರಿಲೀಸ್ ಆಗಲಿದೆ. ಆತ ಬೆಂಗಳೂರಲ್ಲೇ ಕೆಲಸ ಮಾಡಿಕೊಂಡಿದ್ದವನು. ಅವನು ಊರಿಗೆ ಹಬ್ಬಕ್ಕೆ ತೆರಳಿ ಅದೆಷ್ಟೋ ಸಮಯ ಕಳೆದಿದೆ. ಹೀಗಾಗಿ ಅಮ್ಮ ಕರೆ ಮಾಡಿ ಬರುವಂತೆ ಕೋರಿಕೊಳ್ಳುತ್ತಾಳೆ. ಇದಕ್ಕೆ ಒಪ್ಪೋ ಆತ ಪತ್ನಿ, ಮಗಳ ಜೊತೆ ಊರಿಗೆ ಹೋಗುತ್ತಾನೆ.

ಇದನ್ನೂ ಓದಿ
Image
ಪವನ್ ಕಲ್ಯಾಣ್ ಚಿತ್ರ ‘ಹರಿ ಹರ ವೀರ ಮಲ್ಲು’ಗೆ ಶುರುವಾಗಿದೆ ಕರ್ನಾಟಕದ ಭಯ
Image
ಎಲ್ಲಿ ಹೋದರು ಕತ್ರಿನಾ ಕೈಫ್? ಬರ್ತ್​ಡೇಗಾದರೂ ಸಿಗುತ್ತಾ ಹೊಸ ಸಿನಿಮಾ?
Image
‘ಟಾಕ್ಸಿಕ್’ ನಟಿ ಕಿಯಾರಾ ಅಡ್ವಾಣಿ ಮನೆಗೆ ಬಂದಳು ಮಹಾಲಕ್ಷ್ಮೀ
Image
ಮುಂದಿನ ಮೂರು ವರ್ಷ ರಜನಿಕಾಂತ್ ಬ್ಯುಸಿ; ಮತ್ತೆ ಮೂರು ಸಿನಿಮಾ ಫೈನಲ್

ಜೀ ಕನ್ನಡ ಮಾಡಿರೋ ಪೋಸ್ಟ್

View this post on Instagram

A post shared by Zee Kannada (@zeekannada)

ಮಗ, ಸೋಸೆ ಬಂದರು ಎಂದು ಮನೆಯಲ್ಲಿ ಎಲ್ಲರೂ ಸಂಭ್ರಮಿಸುತ್ತಾರೆ. ಮನೆ ಊಟ ಮಾಡಿ ಆತನಿಗೆ ಖುಷಿ ಆಗುತ್ತದೆ. ಹಳ್ಳಿಯವರ ಪ್ರೀತಿ ನೋಡಿ ಆತನಿಗೆ ಹಿಗ್ಗೋ ಹಿಗ್ಗು. ಊರ ಪೂಜೆಯಲ್ಲಿ ಭಾಗಿಯಾಗುತ್ತಾನೆ. ‘ಸಂಬಂಧಗಳ ಬೇರನ್ನು ಗಟ್ಟಿ ಮಾಡಲು ಬರ್ತಿದೆ ನಾವು ನಮ್ಮವರು’ ಎಂದು ಜೀ ಕನ್ನಡ ಹೇಳಿದೆ.

ಈ ಮೊದಲು ಭರ್ಜರಿ ಬ್ಯಾಚುಲರ್ಸ್, ಕಾಮಿಡಿ ಕಿಲಾಡಿಗಳು, ಸರೆಗಮಪ ರೀತಿಯ ರಿಯಾಲಿಟಿ ಶೋಗಳು ಜೀ ಕನ್ನಡದಲ್ಲಿ ಪ್ರಸಾರ ಕಂಡಿವೆ. ಆದರೆ, ಇದೇ ಮೊದಲ ಬಾರಿಗೆ ಹೊಸ ರೀತಿಯ ರಿಯಾಲಿಟಿ ಶೋ ಜೊತೆ ಜೀ ಬರುತ್ತಿದೆ. ಇದರ ರೂಪು ರೇಷೆಗಳ ಬಗ್ಗೆ ಇನ್ನಷ್ಟೇ ಮಾಹಿತಿ ರಿವೀಲ್ ಆಗಬೇಕಿದೆ.

ಇದನ್ನೂ ಓದಿ:  ಬರಲಿದೆ ‘ಪ್ಯಾಟೆ ಹುಡುಗೀರ್ ಹಳ್ಳಿ ಲೈಫು’; ನೀವು ಭಾಗವಹಿಸಬಹುದು, ಇಲ್ಲಿದೆ ಆಡಿಷನ್ ವಿವರ

ಈಗಾಗಲೇ ‘ಸರಿಗಮಪ’ ರಿಯಾಲಿಟಿ ಶೋ ಪೂರ್ಣಗೊಂಡಿದೆ. ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಕೂಡ ಪೂರ್ಣಗೊಳ್ಳುವ ಹಂತದಲ್ಲಿ ಇದೆ. ಹೀಗಿರುವಾಗ ‘ಪ್ಯಾಟೆ ಮಂದಿ ಹಳ್ಳಿಗ್ ಬಂದ್ರು’ ಹಾಗೂ ‘ನಾವು ನಮ್ಮವರು’ ಶೋ ಜೊತೆ ಜೀ ಕನ್ನಡ ವಾಹಿನಿ ಪ್ರೇಕ್ಷಕರ ಎದುರು ಬರುತ್ತಿದೆ ಎನ್ನಲಾಗುತ್ತಿದೆ. ವೀಕ್ಷಕರಿಗೆ ವೀಕೆಂಡ್​ನಲ್ಲಿ ಡಬಲ್ ಮನರಂಜನೆ ಫಿಕ್ಸ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Thu, 17 July 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು