AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದ ಹೊಸ ರಿಯಾಲಿಟಿ ಶೋಗೆ ಕಾಲಿಟ್ಟ ರಜಿನಿ, ಧನರಾಜ್

ಜೀ ಕನ್ನಡದಲ್ಲಿ ಶೀಘ್ರದಲ್ಲೇ ಎರಡು ಹೊಸ ರಿಯಾಲಿಟಿ ಶೋಗಳು ಆರಂಭವಾಗಲಿವೆ. ಸರಿಗಮಪ ಲಿಟ್ಲ್ ಚಾಂಪ್ಸ್ ಮತ್ತು ಜೋಡಿ ನಂಬರ್ 1. ಕುತೂಹಲ ಕೆರಳಿಸಿರುವ ‘ಜೋಡಿ ನಂ.1’ ಶೋನಲ್ಲಿ ಜನಪ್ರಿಯ ಸೆಲೆಬ್ರಿಟಿ ಜೋಡಿಗಳಾದ ರಂಜಿನಿ-ಅರುಣ್ ಗೌಡ ಮತ್ತು ಬಿಗ್ ಬಾಸ್ ಧನರಾಜ್-ಪ್ರಜ್ಞಾ ಭಾಗವಹಿಸಲಿದ್ದಾರೆ.

ಜೀ ಕನ್ನಡದ ಹೊಸ ರಿಯಾಲಿಟಿ ಶೋಗೆ ಕಾಲಿಟ್ಟ ರಜಿನಿ, ಧನರಾಜ್
ಧನರಾಜ್​,ಪ್ರಜ್ಞಾ, ರಜಿನಿ
ರಾಜೇಶ್ ದುಗ್ಗುಮನೆ
|

Updated on: Mar 24, 2026 | 8:47 AM

Share

ಜೀ ಕನ್ನಡದಲ್ಲಿ (Zee Kannada) ಶೀಘ್ರವೇ ಎರಡೆರಡು ರಿಯಾಲಿಟಿ ಶೋಗಳು ಆರಂಭ ಆಗಲಿವೆ! ಹೌದು, ‘ಸರಿಗಮಪ ಲಿಟ್ಲ್​ ಚಾಂಪ್ಸ್’ಗೆ ಆಡಿಷನ್ ನಡೆದಿದ್ದು, ಶೀಘ್ರವೇ ಶೋ ಪ್ರಸಾರ ಆರಂಭಿಸಲಿದೆ. ಅದೇ ರೀತಿ, ‘ಜೋಡಿ ನಂಬರ್ 1’ ಹೆಸರಿನ ರಿಯಾಲಿಟಿ ಶೋ ಕೂಡ ಬರುತ್ತಿದೆ. ಈ ಶೋನಲ್ಲಿ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅಮೃತವರ್ಷಿಣಿ ರಜಿನಿ, ಬಿಗ್ ಬಾಸ್ ಧನರಾಜ್ ಮೊದಲಾದವರು ಶೋನ ಭಾಗ ಆಗಲಿದ್ದಾರೆ ಎಂಬುದು ವಿಶೇಷ.

ಜೀ ಕನ್ನಡದಲ್ಲಿ ಹಲವು ರಿಯಾಲಿಟಿ ಶೋಗಳು ಪ್ರಸಾರ ಕಂಡಿವೆ. ಇದರಲ್ಲಿ ಬಹುತೇಕವು ಯಶಸ್ವಿ ಕಂಡಿದೆ. ಅದರಲ್ಲಿ ‘ಸರಿಗಮಪ’ ಕೂಡ ಒಂದು. ಈ ಶೋ ಶೀಘ್ರವೇ ಪ್ರಸಾರ ಕಾಣಲಿದೆ ಎಂಬ ಪ್ರೋಮೋ ಗಮನ ಸೆಳೆದಿದೆ. ಈ ಪ್ರೋಮೋ ರಿಲೀಸ್ ಆದ ಬೆನ್ನಲ್ಲೇ ಮತ್ತೊಂದು ಪ್ರೋಮೋ ಬಿಡುಗಡೆ ಆಗಿದ್ದು, ಇದರಲ್ಲಿ ಜೋಡಿ ನಂಬರ್ 1 ರಿಯಾಲಿಟಿ ಶೋ ಬಗ್ಗೆ ಮಾಹಿತಿ ನೀಡಲಾಗಿದೆ.

View this post on Instagram

A post shared by Zee Kannada (@zeekannada)

ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿ ದಂಪತಿವರೆಗೆ ಕಿತ್ತಾಟ ಇದ್ದೇ ಇರುತ್ತದೆ. ಜೊತೆ ಪ್ರೀತಿ ಕೂಡ ಇರುತ್ತದೆ. ಎಲ್ಲಿ ಜಗಳ ಇರುತ್ತದೆಯೋ ಅಲ್ಲಿ ಪ್ರೀತಿ ಇರುತ್ತದೆ ಎಂಬ ಮಾತಿದೆ. ಇದನ್ನು ತೋರಿಸುವ ರೀತಿಯಲ್ಲಿ ‘ಜೋಡಿ ನಂಬರ್ 1’ ಬರುತ್ತಿದೆ. ಇದಕ್ಕೆ ಟ್ರೆಂಡ್​ನಲ್ಲಿರೋ ಜೋಡಿಗಳನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ ಎಂಬುದು ವಿಶೇಷ.

ಇದನ್ನೂ ಓದಿ: ‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ

ಹೌದು, ‘ಜೋಡಿ ನಂಬರ್ 1’ ರಿಯಾಲಿಟಿ ಶೋನಲ್ಲಿ ಧನರಾಜ್ ಹಾಗೂ ಅವರ ಪತ್ನಿ ಪ್ರಜ್ಞಾ ಆಗಮಿಸಲಿದ್ದಾರೆ. ಇವರು ರೀಲ್ಸ್ ಮಾಡಿ ಟ್ರೆಂಡ್ ಆದವರು. ಇನ್ನು, ರಂಜನಿ ಹಾಗೂ ಅರುಣ್ ಗೌಡ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ಮೊದಲು ಫ್ರೆಂಡ್ಸ್ ಆಗಿದ್ದ ಇವರು ಈಗ ಪತಿ-ಪತ್ನಿ ಆಗಿದ್ದಾರೆ. ಇವರು ಕೂಡ ಜೋಡಿ ನಂಬರ್ ಸ್ಪರ್ಧಿಗಳಾಗಿದ್ದಾರೆ. ಕೋಟೆ ಪ್ರಭಾಕರ್-ಮಾಲತಿ, ಜಯರಾಮ್​-ಗೀತಾ ಭಾರತಿ, ನಿರೀಕ್ಷಾ-ರುದ್ರ ಶೋನ ಭಾಗ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ ಆಮೇಲೇನಾಯ್ತು ನೋಡಿ
ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ ಆಮೇಲೇನಾಯ್ತು ನೋಡಿ
ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?
ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?
ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ
ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್