AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ

ಜೀ ಕನ್ನಡದಲ್ಲಿ ಹೊಸ ಧಾರಾವಾಹಿ 'ಕೃಷ್ಣ ರುಕ್ಕು' ಮಾರ್ಚ್ 9 ರಿಂದ ಸಂಜೆ 6:30 ಕ್ಕೆ ಪ್ರಸಾರವಾಗಲಿದೆ. 'ಪುಟ್ಟಕ್ಕನ ಮಕ್ಕಳು' ಧಾರಾವಾಹಿ ಜಾಗಕ್ಕೆ ಬರುವ ಈ ಸೀರಿಯಲ್, ಅಣ್ಣನ ನಿಧನದ ನಂತರ ಕುಟುಂಬದ ಜವಾಬ್ದಾರಿ ಹೊತ್ತುಕೊಳ್ಳುವ ರುಕ್ಕು ಮತ್ತು ಅವಳ ಪ್ರೀತಿ, ದ್ವೇಷ, ವಿಧಿಯಾಟದ ಕಥೆ ಹೇಳುತ್ತದೆ. ಮೌನ ಗುಡ್ಡೇಮನೆ ರುಕ್ಕು, ಅಕ್ಷಯ್ ನಾಯಕ್ ಕೃಷ್ಣನ ಪಾತ್ರದಲ್ಲಿ, ಜೊತೆಗೆ ಎಸ್. ನಾರಾಯಣ್, ಸುಚಿತ್ರಾ ಪ್ರಮುಖ ಪಾತ್ರಗಳಲ್ಲಿದ್ದಾರೆ.

‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ
ಕೃಷ್ಣ ರುಕ್ಕು
ರಾಜೇಶ್ ದುಗ್ಗುಮನೆ
|

Updated on:Mar 05, 2026 | 3:07 PM

Share

ಜೀ ಕನ್ನಡ ವಾಹಿನಿ ಹೊಸ ಹೊಸ ಕಥೆಗಳ ಜೊತೆ ಪ್ರೇಕ್ಷಕರ ಎದುರು ಬರುತ್ತಿದೆ. ಈಗ ಹೊಸ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರಲು ಜೀ ವಾಹಿನಿ ರೆಡಿ ಆಗಿದೆ. ಅದುವೇ ‘ಕೃಷ್ಣ ರುಕ್ಕು’. ಮಾರ್ಚ್ 9ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6.30ಕ್ಕೆ ಧಾರಾವಾಹಿ ಪ್ರಸಾರ ಕಾಣಲಿದೆ. ಈ ಮೊದಲು ಈ ಸ್ಲಾಟ್​​ನಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಸೀರಿಯಲ್ ಮಾರ್ಚ್ 6ರಂದು ಕೊನೆ ಆಗುತ್ತಿದೆ. ಆ ಜಾಗಕ್ಕೆ ‘ಕೃಷ್ಣ ರುಕ್ಕು’ ಧಾರಾವಾಹಿ ಬಂದಿದೆ.

ಜೀ ಕನ್ನಡದಲ್ಲಿ ಪ್ರಸಾರ ಆಗುವ ಪ್ರತಿ ಧಾರಾವಾಹಿಯಲ್ಲೂ ಸಂಬಂಧಗಳ ಬಗ್ಗೆ, ಕುಟುಂಬದ ಬಗ್ಗೆ ಹೇಳಲಾಗುತ್ತದೆ. ಈ ಧಾರಾವಾಹಿ ಕೂಡ ಪ್ರೀತಿ, ದ್ವೇಷ ಹಾಗೂ ವಿಧಿಯಾಟದ ನಡುವೆ ಸಾಗುತ್ತದೆ. ಆಟೋ ಓಡಿಸೋ ಅಣ್ಣನ ಅಕಾಲಿಕ ನಿಧನದಿಂದ ಇಡೀ ಕುಟುಂಬದ ಜವಾಬ್ದಾರಿ ರುಕ್ಕು ಮೇಲೆ ಬೀಳುತ್ತದೆ. ಆಗ ಎದುರಾಗುವ ಸವಾಲುಗಳನ್ನು ಅವಳು ಹೇಗೆ ಎದುರಿಸುತ್ತಾಳೆ ಎಂಬುದು ಧಾರಾವಾಹಿಯ ಕಥೆ. ಮೌನ ಗುಡ್ಡೇಮನೆ ರುಕ್ಕು ಆಗಿ ನಟಿಸಿದರೆ, ಅಕ್ಷಯ್ ನಾಯಕ್ ಕೃಷ್ಣನ ಪಾತ್ರ ಮಾಡುತ್ತಿದ್ದಾರೆ.

ಎಸ್ ನಾರಾಯಣ್ ಅವರು ಸಿನಿಮಾ ನಿರ್ದೇಶನದ ಜೊತೆಗೆ ನಟನೆ ಕೂಡ ಮಾಡಿದರು. ಅವರಿಗೆ ಕಿರುತೆರೆ ಜೊತೆಯೂ ನಂಟಿದೆ. ಅವರು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಈಗ ಸೂರ್ಯ ಪ್ರಕಾಶ್ ಎಂಬ ಮಹತ್ವದ ಪಾತ್ರ ನಿರ್ವಹಿಸಿದ್ದಾರೆ. ಅವರ ಇರುವಿಕೆ ತಂಡಕ್ಕೆ ದೊಡ್ಡ ಬಲ ತುಂಬಿದಂತೆ ಆಗಿದೆ. ಖ್ಯಾತ ನಟಿ ಸುಚಿತ್ರ, ಗಾಯಕ ನವೀನ ಸಜ್ಜು ಮೊದಲಾದವರು ಧಾರಾವಾಹಿಯ ಭಾಗ ಆಗಿದ್ದಾರೆ. ಧೃತಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ರಾಜ್ ಹಾಗೂ ಶ್ರೀ ವಿದ್ಯಾ ‘ಕೃಷ್ಣ ರುಕ್ಕು’ ಸೀರಿಯಲ್​ನ ನಿರ್ಮಿಸಿದ್ದಾರೆ.

ಇದನ್ನೂ ಓದಿ: ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ

ಜೀ ಕನ್ನಡದ ಧಾರಾವಾಹಿಗಳು ಮೇಕಿಂಗ್ ವಿಷಯದಲ್ಲಿ ಸಾಕಷ್ಟು ಕಲರ್​ಫುಲ್ ಆಗಿರುತ್ತವೆ ಎಂಬ ಅಭಿಪ್ರಾಯ ವೀಕ್ಷಕರದ್ದು. ‘ಕೃಷ್ಣ ರುಕ್ಕು’ ಧಾರಾವಾಹಿ ಕೂಡ ಅದೇ ಮಾದರಿಯಲ್ಲಿ ಇದೆ ಎಂಬುದು ಪ್ರೋಮೋ ಮೂಲಕ ಗೊತ್ತಾಗಿದೆ. ಅಣ್ಣನ ಸಾವಿಗೆ ಕಾರಣ ಆದ ಕುಟುಂಬಕ್ಕೆ ಬರೋ ನಾಯಕಿ ಯಾವ ರೀತಿಯಲ್ಲಿ ದ್ವೇಷ ತೀರಿಸಿಕೊಳ್ಳುತ್ತಾಳೆ? ದ್ವೇಷ ಪ್ರೀತಿ ಆಗೋದು ಹೇಗೆ ಎಂಬ ಕುತೂಹಲದೊಂದಿಗೆ ಧಾರಾವಾಹಿ ಮೂಡಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:07 pm, Thu, 5 March 26

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​