AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ, ಬಿಗ್​ ಬಾಸ್​ ಮಾಜಿ ಸ್ಪರ್ಧಿ ಸೂರ್ಯ ಕಿರಣ್​ ಜಾಂಡಿಸ್​ನಿಂದ ನಿಧನ

ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಸೂರ್ಯ ಕಿರಣ್​ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಜಾಂಡಿಸ್​ನಿಂದ ಬಳಲುತ್ತಿದ್ದ ಸೂರ್ಯ ಕಿರಣ್​ ಅವರನ್ನು ಚೆನ್ನೈನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು (ಮಾ.11) ಅವರು ನಿಧನರಾಗಿದ್ದಾರೆ.

ನಿರ್ದೇಶಕ, ಬಿಗ್​ ಬಾಸ್​ ಮಾಜಿ ಸ್ಪರ್ಧಿ ಸೂರ್ಯ ಕಿರಣ್​ ಜಾಂಡಿಸ್​ನಿಂದ ನಿಧನ
ಸೂರ್ಯ ಕಿರಣ್​
ಮದನ್​ ಕುಮಾರ್​
|

Updated on: Mar 11, 2024 | 8:29 PM

Share

ತೆಲುಗು ಚಿತ್ರರಂಗದಿಂದ ಕಹಿ ಸುದ್ದಿ ಕೇಳಿಬಂದಿದೆ. ಟಾಲಿವುಡ್​ (Tollywood) ಸಿನಿಮಾ ನಿರ್ದೇಶಕ ಸೂರ್ಯ ಕಿರಣ್​ ಅವರು ನಿಧನರಾಗಿದ್ದಾರೆ. ಜಾಂಡಿಸ್​ನಿಂದ ಬಳಲುತ್ತಿದ್ದ ಅವರು ಚೆನ್ನೈನ ಆಸ್ಪತ್ರೆಯಲ್ಲಿ ಇಂದು (ಮಾರ್ಚ್​ 11) ಕೊನೆಯುಸಿರು ಎಳೆದಿದ್ದಾರೆ. ಅವರ ಸಾವಿನ ಸುದ್ದಿಯನ್ನು ಆಪ್ತರು ಖಚಿತಪಡಿಸಿದ್ದಾರೆ. ಸೂರ್ಯ ಕಿರಣ್ (Surya Kiran)​ ಅವರಿಗೆ 51 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ (Surya Kiran Death) ಟಾಲಿವುಡ್​ನ ಅನೇಕರು ಕಂಬನಿ ಮಿಡಿದಿದ್ದಾರೆ. ಸಿನಿಮಾ ಮಾತ್ರವಲ್ಲದೇ ‘ಬಿಗ್​ ಬಾಸ್​ ತೆಲುಗು’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕ ಸೂರ್ಯ ಕಿರಣ್​ ಅವರು ಫೇಮಸ್​ ಆಗಿದ್ದರು.

ಸೂರ್ಯ ಕಿರಣ್​ ಅವರ ನಿಧನದ ಸುದ್ದಿಯನ್ನು ಪಿಆರ್​ಒ ಸುರೇಶ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ‘ಜಾಂಡಿಸ್​ನಿಂದ ಸೂರ್ಯ ಕಿರಣ್​ ನಿಧನರಾಗಿದ್ದಾರೆ. ತೆಲುಗಿನಲ್ಲಿ ‘ಸತ್ಯಂ’, ‘ರಾಜು ಭಾಯ್​’ ಮುಂತಾದ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಎಕ್ಸ್​ನಲ್ಲಿ (ಟ್ವಿಟರ್​) ಸುರೇಶ್​ ಅವರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಖ್ಯಾತ ಕಿರುತೆರೆ ಕಲಾವಿದೆಗೆ ಹೃದಯಾಘಾತ; ನಟಿ, ನಿರ್ದೇಶಕಿ ಕವಿತಾ ಚೌಧರಿ ನಿಧನ

ಸೂರ್ಯ ಕಿರಣ್​ ಅವರ ಕುಟುಂಬದವರು ಮೂಲತಃ ಕೇರಳದ ತಿರುವನಂತಪುರದವರು. ಸೂರ್ಯ ಕಿರಣ್​ ಜನಿಸಿದ್ದು ಚೈನ್ನೈನಲ್ಲಿ. ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಅವರು ಬಾಲನಟನಾಗಿ ಅಭಿನಯಿಸಿದ್ದರು. ಆ ಮೂಲಕ ಅವರು ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ್ದರು. ಆಗ ಅವರನ್ನು ಮಾಸ್ಟರ್​ ಸುರೇಶ್​ ಎಂದು ಕರೆಯಲಾಗುತ್ತಿತ್ತು. ಸೂರ್ಯ ಕಿರಣ್​ ನಿರ್ದೇಶನ ಮಾಡಿದ ಮೊದಲ ಸಿನಿಮಾ ‘ಸತ್ಯಂ’ 2003ರಲ್ಲಿ ಬಿಡುಗಡೆ ಆಗಿತ್ತು. ಆ ಸಿನಿಮಾದಲ್ಲಿ ಜೆನಿಲಿಯಾ ಡಿಸೋಜಾ ಮತ್ತು ಸುಮಂತ್​ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದರು.

ಮೊದಲ ಸಿನಿಮಾದಲ್ಲೇ ಸೂರ್ಯ ಕಿರಣ್​ ಅವರು ಯಶಸ್ಸು ಕಂಡಿದ್ದರು. ‘ಸತ್ಯಂ’ ಸಿನಿಮಾ 150 ದಿನಗಳ ಕಾಲ ಪ್ರದರ್ಶನ ಕಂಡಿತ್ತು. ಬಳಿಕ 2006ರಲ್ಲಿ ‘ಬ್ರಹ್ಮಾಸ್ತ್ರ’, 2007ರಲ್ಲಿ ‘ರಾಜು ಭಾಯ್​’, 2020ರಲ್ಲಿ ‘ಚಾಪ್ಟರ್​ 6’ ಸಿನಿಮಾಗಳನ್ನು ಅವರು ನಿರ್ಧರಿಸಿದ್ದರು. ‘ಬಿಗ್​ ಬಾಸ್​ ತೆಲುಗು ಸೀಸನ್​ 4’ ಶೋನಲ್ಲಿ ಅವರು ಸ್ಪರ್ಧಿಸಿದ್ದರು. ಕೆಲವು ವರ್ಷಗಳಿಂದ ಈಚೆಗೆ ಸೂರ್ಯ ಕಿರಣ್​ ಅವರು ನಟನೆ ಮತ್ತು ನಿರ್ದೇಶನದಿಂದ ದೂರ ಉಳಿದುಕೊಂಡಿದ್ದರು. ಕಮ್​ಬ್ಯಾಕ್​ ಮಾಡಬೇಕು ಎಂಬ ಆಲೋಚನೆ ಅವರಿಗೆ ಇತ್ತು. ಅಷ್ಟರಲ್ಲಾಗಲೇ ಅನಾರೋಗ್ಯದಿಂದ ಅವರು ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್