Super Star Krishna Death: ಮಹೇಶ್​ ಬಾಬು ತಂದೆ ಸೂಪರ್​ ಸ್ಟಾರ್​ ಕೃಷ್ಣ ನಿಧನ

Krishna Ghattamaneni: 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಕೃಷ್ಣ ಅವರ ‘ತೇನೆಮನಸಲು’, ‘ಸಾಕ್ಷಿ’, ‘ಅಲ್ಲೂರಿ ಸೀತಾರಾಮರಾಜು’ ಮುಂತಾದ ಚಿತ್ರಗಳು ಜನಪ್ರಿಯವಾಗಿದ್ದವು.

Super Star Krishna Death: ಮಹೇಶ್​ ಬಾಬು ತಂದೆ ಸೂಪರ್​ ಸ್ಟಾರ್​ ಕೃಷ್ಣ ನಿಧನ
ಸೂಪರ್ ಸ್ಟಾರ್ ಕೃಷ್ಣ, ಮಹೇಶ್ ಬಾಬು
Follow us
| Updated By: ಮದನ್​ ಕುಮಾರ್​

Updated on:Nov 15, 2022 | 7:26 AM

ಹೈದರಾಬಾದ್: ನಟ ಮಹೇಶ್​ ಬಾಬು (Mahesh Babu) ಅವರ ತಂದೆ, ಸೂಪರ್​ ಸ್ಟಾರ್​​ ಕೃಷ್ಣ ಘಟ್ಟಮನೇನಿ (Krishna Ghattamaneni) ಹೈದರಾಬಾದ್​​ನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ನಿಧನರಾದರು. ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಕೃಷ್ಣ ಘಟ್ಟಮನೇನಿ ಅವರ ‘ತೇನೆಮನಸಲು’, ‘ಸಾಕ್ಷಿ’, ‘ಅಲ್ಲೂರಿ ಸೀತಾರಾಮರಾಜು’ ಮುಂತಾದ ಚಿತ್ರಗಳು ಜನಪ್ರಿಯವಾಗಿದ್ದವು. ಬಾಂಡ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಅವರನ್ನು ಅವಿಭಜಿತ ಆಂಧ್ರಪ್ರದೇಶದ ಜನರು ‘ಬಾಂಡ್ ಕೃಷ್ಣ’ ಎಂದು ಪ್ರೀತಿಯಿಂದ ಕರೆಯುತ್ತಿದ್ದರು. ಕೃಷ್ಣ ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ (Super Star Krishna Death) ಅಭಿಮಾನಿಗಳು, ಆಪ್ತರು ಹಾಗೂ ಹಲವು ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಕೃಷ್ಣ ಅವರು ಸೂಪರ್ ಸ್ಟಾರ್​ ಆಗಿ ಮಿಂಚಿದವರು. 1965ರಲ್ಲಿ ಅವರು ನಟನೆಯ ಜರ್ನಿ ಆರಂಭಿಸಿದ್ದರು. ಪೌರಾಣಿಕ, ಐತಿಹಾಸಿಕ ಸೇರಿದಂತೆ ಹಲವು ಬಗೆಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಅವರು ಅಭಿಮಾನಿಗಳ ಮನ ಗೆದ್ದರು. ಕೃಷ್ಣ ಅವರ ಅಂದಾಜು 25 ಸಿನಿಮಾಗಳಲ್ಲಿ ಮಹೇಶ್​ ಬಾಬು ಬಾಲ ನಟನಾಗಿ ಅಭಿನಯಿಸಿದ್ದರು.

ಇದನ್ನೂ ಓದಿ
Image
‘ಪ್ರಿನ್ಸ್​’ ಮನೆಯಲ್ಲಿ ಶೋಕ, ಚಿರು ಚಿತ್ರಕ್ಕೆ ಪ್ರೀ-ರಿಲೀಸ್​ ಇವೆಂಟ್​; ಮಳೆಯಲ್ಲಿ ನಿಂತು ಮೆಗಾಸ್ಟಾರ್​ ಹೇಳಿದ್ದೇನು?
Image
Sitara: ಮಹೇಶ್​ ಬಾಬು ತಾಯಿ ಅಂತ್ಯಕ್ರಿಯೆ ವೇಳೆ ಬಿಕ್ಕಿಬಿಕ್ಕಿ ಅತ್ತ ‘ಪ್ರಿನ್ಸ್​’ ಮಗಳು ಸಿತಾರಾ
Image
Indira Devi Passes Away: ಮಹೇಶ್​ ಬಾಬು ತಾಯಿ ಇಂದಿರಾ ದೇವಿ ನಿಧನ; ‘ಪ್ರಿನ್ಸ್​’ ಕುಟುಂಬದಲ್ಲಿ ಶೋಕ
Image
Krisham Raju: ಪ್ರಭಾಸ್ ದೊಡ್ಡಪ್ಪ, ಟಾಲಿವುಡ್​ನ​ ರೆಬೆಲ್​ಸ್ಟಾರ್ ಕೃಷ್ಣಂರಾಜು ನಿಧನ

ಸೆಪ್ಟೆಂಬರ್​ 28ರಂದು ಕೃಷ್ಣ ಅವರ ಪತ್ನಿ ಇಂದಿರಾ ದೇವಿ ನಿಧನ ಹೊಂದಿದರು. ಆ ಬಳಿಕ ಕೃಷ್ಣ ಅವರು ಖಿನ್ನತೆಗೆ ಒಳಗಾದರು ಎನ್ನಲಾಗಿದೆ. ಈ ವರ್ಷ ಆರಂಭದಲ್ಲಿ ಕೃಷ್ಣ ಅವರ ಹಿರಿಯ ಪುತ್ರ ರಮೇಶ್​ ಬಾಬು ಕೂಡ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದರು. ಒಟ್ಟಿನಲ್ಲಿ ಮಹೇಶ್​ ಬಾಬು ಕುಟುಂಬಕ್ಕೆ 2022ರಲ್ಲಿ ಒಂದರಮೇಲೊಂದು ಕಷ್ಟ ಎದುರಾಗುತ್ತಿದೆ. ಕೃಷ್ಣ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೃಷ್ಣ ತೇನಿಮನಸಲು, ಸಾಕ್ಷಿ, ಅಲ್ಲೂರಿ ಸೀತಾರಾಮರಾಜು, ಸಿಂಹಾಸನಂ, ಪಾಡಿಪಂಟಲು, ಪಚ್ಚನಿಸಂಸಾರಂ, ಪಂಡಂಟಿಕಾಪುರಂ, ದೇವಡು ಚೇಸಿನ ಮನಷುಲು, ಅಗ್ನಿಪರ್ವತಂ, ಕಂಚುಕಾಗಡ, ನಂಬರ್​ ಒನ್​, ಬ್ರಹ್ಮಾಸ್ತ್ರಂ, ಮೋಸಗಾಳ್ಳಕು ಮೋಸಗಾಡು, ಮುಂದಡುಗು, ಕಂಚುಕಾಗಡ, ವಾರಸುಡು, ಒಸೆಯ್ ರಾಮುಲಮ್ಮ, ಪ್ರಜಾರಾಜ್ಯಂ, ಗೂಢಚಾರಿ 116, ಏಜೆಂಟ್ ಗೋಪಿ, ಅಶ್ವತ್ಥಾಮ, ಇದ್ದರು ದೊಂಗಲು, ಮುಗ್ಗುರು ಕೊಡುಕಲು, ಅನ್ನದಮ್ಮುಲ ಸವಾಲ್​, ಕೈದಿ ರುದ್ರಯ್ಯ, ಈನಾಡು ಸೇರಿದಂತೆ 350ಕ್ಕೂ ಅಧಿಕ ಸಿನಿಮಾಗಳಲ್ಲಿ ಕೃಷ್ಣ ಅವರು ಬಣ್ಣ ಹಚ್ಚಿದ್ದರು.

ಅಪಾರ ಜನಪ್ರಿಯತೆ ಹೊಂದಿದ್ದ ಕೃಷ್ಣ ಅವರಿಗೆ 2500ಕ್ಕೂ ಹೆಚ್ಚು ಅಭಿಮಾನಿ ಸಂಘಗಳಿದ್ದವು. ಪದ್ಮ ಭೂಷಣ, ನಂದಿ ಅವಾರ್ಡ್, ಫಿಲ್ಮ್​ ಫೇರ್​ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿದ್ದವು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:31 am, Tue, 15 November 22

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ