AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manchu Manoj Wedding: ರಾಜಕಾರಣಿ ಪುತ್ರಿಯೊಟ್ಟಿಗೆ ತೆಲುಗು ನಟ ಮಂಚು ಮನೋಜ್ ಎರಡನೇ ಮದುವೆ

ತೆಲುಗು ಚಿತ್ರರಂಗದ ನಟ ಮಂಚು ಮನೋಜ್ ಆಂಧ್ರದ ಜನಪ್ರಿಯ ರಾಜಕಾರಣಿಯ ಪುತ್ರಿ ಮೌನಿಕಾ ಅವರೊಟ್ಟಿಗೆ ವಿವಾಹವಾಗುತ್ತಿದ್ದಾರೆ. ಮಂಚು ಮನೋಜ್​ಗೆ ಇದು ಎರಡನೇ ಮದುವೆ.

Manchu Manoj Wedding: ರಾಜಕಾರಣಿ ಪುತ್ರಿಯೊಟ್ಟಿಗೆ ತೆಲುಗು ನಟ ಮಂಚು ಮನೋಜ್ ಎರಡನೇ ಮದುವೆ
ಮಂಚು ಮನೋಜ್-ಮೌನಿಕಾ
ಮಂಜುನಾಥ ಸಿ.
|

Updated on: Mar 03, 2023 | 11:27 PM

Share

ತೆಲುಗಿನ ಮಂಚು ಕುಟುಂಬದ ಕುಡಿ, ಹಿರಿಯ ನಟ ಮೋಹನ್​ಬಾಬು ಪುತ್ರ ಮಂಚು ಮನೋಜ್ (Manchu Manoj) ಅವರು ಎರಡನೇ ಬಾರಿ ಹಸೆ ಮಣೆ ಏರುತ್ತಿದ್ದಾರೆ. ಈ ಹಿಂದೆ 2015 ರಲ್ಲಿ ಪ್ರಣಿತಿ ರೆಡ್ಡಿಯನ್ನು ವಿವಾಹವಾಗಿದ್ದ ಮನೋಜ್, 2019 ರಲ್ಲಿ ಅವರಿಂದ ದೂರಾಗಿದ್ದರು. ಇದೀಗ ರಾಜಕಾರಣಿ ಪುತ್ರಿಯೊಬ್ಬರನ್ನು ಮನೋಜ್ ವಿವಾಹವಾಗುತ್ತಿದ್ದು(Marriage) , ನಾಳೆ ಮುಹೂರ್ತ ನಡೆಯಲಿದೆ.

ಆಂಧ್ರ ಪ್ರದೇಶದ ಜನಪ್ರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಭೂಮಿ ನಾಗ ರೆಡ್ಡಿ ಅವರ ಪುತ್ರಿ ಭೂಮಿ ಮೌನಿಕ ಅವರನ್ನು ವಿವಾಹವಾಗುತ್ತಿದ್ದು, ಇಂದು ಅರಿಶಿಣ ಶಾಸ್ತ್ರ ನಡೆಯುತ್ತಿವೆ. ತಾವು ಮದುವೆಯಾಗುತ್ತಿರುವ ಮೌನಿಕ ಅವರ ಚಿತ್ರವನ್ನು ಇಂದಷ್ಟೆ ಮಂಚು ಮನೋಜ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಂಚು ಮನೋಜ್ ಮದುವೆಯಾಗುತ್ತಿರುವ ಮೌನಿಕಾಗೂ ಸಹ ಇದು ಎರಡನೇ ವಿವಾಹ. ಈ ಹಿಂದೆ ಬೆಂಗಳೂರು ಮೂಲದ ಉದ್ಯಮಿಯೊಬ್ಬರನ್ನು ವಿವಾಹವಾಗಿದ್ದ ಮೌನಿಕಾಗೆ ಒಬ್ಬ ಗಂಡು ಮಗನಿದ್ದಾನೆ. ಇದೀಗ ಈ ಇಬ್ಬರೂ ಮದುವೆಯಾಗುತ್ತಿದ್ದಾರೆ.

ಮೂಲಗಳ ಪ್ರಕಾರ ಫೆಬ್ರವರಿ 23 ರಂದೇ ಮದುವೆ ಶಾಸ್ತ್ರಗಳು ಶುರುವಾಗಿದ್ದು, ಎರಡನೇ ಮದುವೆಯಾದರೂ ಬಹು ಅದ್ಧೂರಿಯಾಗಿಯೇ ವಿವಾಹ ಕಾರ್ಯಗಳು ನಡೆಯುತ್ತಿವೆ. ಮಂಚು ಮನೋಜ್​ರ ಸಹೋದರಿ ಲಕ್ಷ್ಮಿ ಮಂಚು ಸಹ ತಮ್ಮ ಸಹೋದರನ ಮದುವೆಯ ಚಿತ್ರಗಳನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ. ಮಾರ್ಚ್ 3 ರಂದು ಅರಿಶಿಣ ಶಾಸ್ತ್ರ ನಡೆಯುತ್ತಿದ್ದು, ಮಾರ್ಚ್ 4 ರಂದು ವಿವಾಹ ಕಾರ್ಯ ನಡೆಯಲಿದೆ ಎನ್ನಲಾಗುತ್ತಿದೆ.

ತೆಲುಗಿನ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಮಂಚು ಮನೋಜ್, 2019 ರಲ್ಲಿ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದರು. ಆದರೆ ಇತ್ತೀಚೆಗಷ್ಟೆ ತಾವು ಮತ್ತೆ ಸಿನಿಮಾ ಮಾಡುವುದಾಗಿ ಘೋಷಿಸಿದ್ದಾರೆ. ಅದರ ಬೆನ್ನಲ್ಲೆ ವಿವಾಹವೂ ಆಗುತ್ತಿದ್ದಾರೆ.

ಮಂಚು ಮನೋಜ್, ತೆಲುಗಿನ ಹಿರಿಯ ನಟ ಮೋಹನ್​ ಬಾಬು ಪುತ್ರ. ಇವರ ಸಹೋದರ ಮಂಚು ವಿಷ್ಣು ಸಹ ತೆಲುಗಿನ ಜನಪ್ರಿಯ ನಟರಲ್ಲೊಬ್ಬರು. ಜೊತೆಗೆ ತೆಲುಗು ಸಿನಿಮಾ ಕಲಾವಿದರ ಸಂಘದ ಅಧ್ಯಕ್ಷರು ಸಹ.

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್