AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತಕ್ಕೆ ತುತ್ತಾದ ನಟ ಸಾಯಿ ಧರಂ ತೇಜ್: ಅತಿವೇಗದಲ್ಲಿ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದೇ ಕಾರಣ ಎಂಬ ಶಂಕೆ

ಅತಿಯಾದ ವೇಗದಲ್ಲಿ ಬೈಕ್​ ಓಡಿಸಿದ್ದರಿಂದಲೇ ಅನಾಹುತ ಸಂಭವಿಸಿರುವುದು ಮೇಲ್ನೋಟಕ್ಕೆ ಕಾಣಿಸಿದ್ದು, ಸ್ಪೋರ್ಟ್ಸ್ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಯಿ ಧರಂ ತೇಜ್ ಅವರ​ ಬಲಗಣ್ಣು, ಎದೆ, ಹೊಟ್ಟೆ ಭಾಗದಲ್ಲಿ ಗಾಯಗಳಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಭೀಕರ ಅಪಘಾತಕ್ಕೆ ತುತ್ತಾದ ನಟ ಸಾಯಿ ಧರಂ ತೇಜ್: ಅತಿವೇಗದಲ್ಲಿ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದೇ ಕಾರಣ ಎಂಬ ಶಂಕೆ
ಭೀಕರ ಅಪಘಾತಕ್ಕೆ ತುತ್ತಾದ ನಟ ಸಾಯಿ ಧರಂ ತೇಜ್
TV9 Web
| Updated By: Skanda|

Updated on: Sep 11, 2021 | 6:58 AM

Share

ಹೈದರಾಬಾದ್: ತೆಲುಗು ನಟ ಸಾಯಿ ಧರಂ ತೇಜ್ ಚಲಾಯಿಸುತ್ತಿದ್ದ​ ಬೈಕ್ ಗಂಭೀರ​ ಅಪಘಾತಕ್ಕೆ ಒಳಗಾಗಿರುವ ಘಟನೆ ಹೈದರಾಬಾದ್‌ನ ಮಾದಾಪುರ ಕೇಬಲ್ ಬ್ರಿಡ್ಜ್​​ ಬಳಿ ನಡೆದಿದೆ. 34 ವರ್ಷದ ಈ ನಟ ತನ್ನ ಸ್ಪೋರ್ಟ್ಸ್ ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅಪಘಾತದಲ್ಲಿ ನಟ ಸಾಯಿ ಧರಂ ತೇಜ್ ಗಂಭೀರವಾಗಿ ಗಾಯಗೊಂಡಿದ್ದು, ಹೈದರಾಬಾದ್​​ನ ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ವೇಳೆ ಸಾಯಿ ಧರಂ ತೇಜ್ ಹೆಲ್ಮೆಟ್​ ಧರಿಸಿದ್ದರು ಆದ್ದರಿಂದ ತಲೆ ಭಾಗಕ್ಕೆ ಬೀಳಬೇಕಾಗಿದ್ದ ತೀವ್ರ ಸ್ವರೂಪದ ಏಟು ತಪ್ಪಿಹೋಗಿದೆ. ಅತಿಯಾದ ವೇಗದಲ್ಲಿ ಬೈಕ್​ ಓಡಿಸಿದ್ದರಿಂದಲೇ ಅನಾಹುತ ಸಂಭವಿಸಿರುವುದು ಮೇಲ್ನೋಟಕ್ಕೆ ಕಾಣಿಸಿದ್ದು, ಸ್ಪೋರ್ಟ್ಸ್ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಯಿ ಧರಂ ತೇಜ್ ಅವರ​ ಬಲಗಣ್ಣು, ಎದೆ, ಹೊಟ್ಟೆ ಭಾಗದಲ್ಲಿ ಗಾಯಗಳಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಅಪಘಾತಕ್ಕೆ ಒಳಗಾಗಿರುವ ಯುವ ನಟನನ್ನು ನೋಡಲು ನಟ ಚಿರಂಜೀವಿ, ಪವನ್​ ಕಲ್ಯಾಣ್​ ಸೇರಿದಂತೆ ಕೆಲವರು ಆಸ್ಪತ್ರೆಗೆ ಆಗಮಿಸಿದ್ದಾರೆ. ಸಾಯಿ ಧರಂ ತೇಜ್​ ಅವರನ್ನು ನೋಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪವನ್ ಕಲ್ಯಾಣ್, ಸಾಯಿ ಧರಮ್ ತೇಜ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರು ಕೋಮಾದಲ್ಲಿ ಇದ್ದಾರೆ. ಆದರೂ ಶೀಘ್ರದಲ್ಲೇ ಚೇತರಿಸಿಕೊಳ್ಳುವ ಭರವಸೆ ಇದೆ. ಆ ಬಗ್ಗೆ ಚಿಂತಿಸಬೇಕಾದದ್ದು ಏನೂ ಇಲ್ಲ. ಇನ್ನೂ ಉತ್ತಮ ಚಿಕಿತ್ಸೆ ಬೇಕಾದಲ್ಲಿ ಅದಕ್ಕೆ ಸೂಕ್ತ ವ್ಯವಸ್ಥೆಯೂ ಆಗಲಿದೆ. ಗಾಬರಿ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರಾತ್ರಿ ಮತ್ತೊಂದು ಶಾಸಕ ಪುತ್ರಿ ಕಾರ್ ಅಪಘಾತ: ಯಲಹಂಕ ಫ್ಲೈ ಓವರ್ ಮೇಲೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು 

ಅಪಘಾತಕ್ಕೂ ಮುನ್ನ ಜಿಗ್​ಜ್ಯಾಗ್​ ರೈಡ್: ಪೊಲೀಸರ​ ಮೇಲೆಯೇ ಕಾರು ಹತ್ತಿಸೋ ಯತ್ನ, ಜೊಮ್ಯಾಟೋ ಹುಡುಗ ಜಸ್ಟ್​ ಮಿಸ್

(Telugu actor Sai Dharam Tej met with major accident under treatment in ICU)

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ