AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಟಾಲಿವುಡ್​ ನಟ TNR ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

TNR Death: ಟಿಎನ್​ಆರ್​ ಅವರು ಅನೇಕ ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿದ್ದರು. ನಟ ನಾನಿ, ನಿರ್ಮಾಪಕ ಬಂಡ್ಲ ಗಣೇಶ್​, ನಿರ್ದೇಶಕ ಮಾರುತಿ ಸೇರಿದಂತೆ ಅನೇಕರು ಟಿಎನ್​ಆರ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಕೊರೊನಾದಿಂದ ಟಾಲಿವುಡ್​ ನಟ TNR ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು
ಟಿಎನ್ಆರ್
ಮದನ್​ ಕುಮಾರ್​
| Edited By: |

Updated on: May 10, 2021 | 4:04 PM

Share

ಕೊರೊನಾದಿಂದ ಸಂಭವಿಸುತ್ತಿರುವ ಸೆಲೆಬ್ರಿಟಿಗಳ ಸಾವಿನ ಸರಣಿ ಸದ್ಯಕ್ಕಂತೂ ನಿಲ್ಲುವಂತೆ ಕಾಣುತ್ತಿಲ್ಲ. ಎಲ್ಲ ಭಾಷೆಯ ಚಿತ್ರರಂಗದ ಕಲಾವಿದರು ಈ ಮಹಾಮಾರಿಗೆ ಬಲಿ ಆಗುತ್ತಿದ್ದಾರೆ. ತೆಲುಗು ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ನಿಭಾಯಿಸುವ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ನಟ ಟಿಎನ್​ಆರ್​ ಅವರು ಸೋಮವಾರ (ಮೇ 10) ಹೈದರಾಬಾದ್​ನಲ್ಲಿ ನಿಧನರಾದರು. ಟಿಎನ್​ಆರ್​ ಎಂದೇ ಫೇಮಸ್​ ಆಗಿದ್ದ ಅವರ ಪೂರ್ಣ ಹೆಸರು ತುಮ್ಮಲ ನರಸಿಂಹ ರೆಡ್ಡಿ. ಅವರ ಅಗಲಿಕೆಗೆ ಟಾಲಿವುಡ್​ ಮಂದಿ ಸಂತಾಪ ಸೂಚಿಸುತ್ತಿದ್ದಾರೆ.

ಸಿನಿಮಾ ಪತ್ರಕರ್ತರಾಗಿದ್ದ ಟಿಎನ್​ಆರ್​ ಅವರು ತಮ್ಮ ಯೂಟ್ಯೂಬ್​ ಚಾನಲ್​ ಮೂಲಕ ಹಲವಾರು ಸೆಲೆಬ್ರಿಟಿಗಳ ಸಂದರ್ಶನ ಮಾಡಿದ್ದರು. ಮಹಾಮಹೇಶ್ವರ ಉಗ್ರ ರೂಪಸ್ಯ, ಹಿಟ್​, ಜಾರ್ಜ್​ ರೆಡ್ಡಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿದ್ದರು. ನಟ ನಾನಿ, ನಿರ್ಮಾಪಕ ಬಂಡ್ಲ ಗಣೇಶ್​, ನಿರ್ದೇಶಕ ಮಾರುತಿ ಸೇರಿದಂತೆ ಅನೇಕರು ಟಿಎನ್​ಆರ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

‘ಟಿಎನ್​ಆರ್​ ಅವರು ನಿಧನರಾದರು ಎಂಬ ಸುದ್ದಿ ಕೇಳಿ ಶಾಕ್​ ಆಯಿತು. ಅವರ ಕೆಲವು ಸಂದರ್ಶನಗಳನ್ನು ನಾನು ನೋಡಿದ್ದೇನೆ. ತುಂಬ ಚೆನ್ನಾಗಿ ಅಧ್ಯಯನ ಮಾಡಿಕೊಂಡು ಬಂದು, ಅತಿಥಿಗಳು ಮನಬಿಚ್ಚಿ ಮಾತನಾಡುವಂತೆ ಮಾಡುವ ಸಾಮರ್ಥ್ಯ ಅವರಲ್ಲಿ ಇತ್ತು. ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ’ ಎಂದು ನಾನಿ ಟ್ವೀಟ್​ ಮಾಡಿದ್ದಾರೆ.

ಖ್ಯಾತ ನಟ ರಾಹುಲ್​ ವೋಹ್ರಾ ಅವರು ಕೊರೊನಾದಿಂದ ನಿಧನರಾದ ಸುದ್ದಿ ಭಾನುವಾರವಷ್ಟೇ (ಮೇ 9) ಕೇಳಿಬಂದಿತ್ತು. ಮರುದಿನವೇ ಮತ್ತೊಬ್ಬ ನಟನನ್ನು ಚಿತ್ರರಂಗ ಕಳೆದುಕೊಂಡಿದೆ. ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಕಾಲಿವುಡ್​ ನಿರ್ದೇಶಕ ಕೆ.ವಿ. ಆನಂದ್​, ರವಿರತ್ನ ಕಾಳಿದಾಸ ಚಿತ್ರದ ನಿರ್ದೇಶಕ ರೇಣುಕಾ ಶರ್ಮಾ, ನಟ ಶಂಕನಾದ ಅರವಿಂದ್​, ಯುವ ನಿರ್ಮಾಪಕ ಡಿ.ಎಸ್​. ಮಂಜುನಾಥ್, ಮರಾಠಿ ನಟಿ ಅಭಿಲಾಷಾ ಪಾಟಿಲ್​​ ಸೇರಿದಂತೆ ಅನೇಕರು ಕೊರೊನಾದಿಂದ ಅಸುನೀಗಿದ್ದಾರೆ. ಸಾವಿನ ಸರಣಿ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ:

ಆಕ್ಸಿಜನ್​ ಬೇಕು ಎಂದು ಮೋದಿಗೆ ಕೈ ಮುಗಿದು ಬೇಡಿಕೊಂಡಿದ್ದ ನಟ ರಾಹುಲ್​ ಕೊರೊನಾದಿಂದ ನಿಧನ

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ