AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಟಾಲಿವುಡ್​ ನಟ TNR ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

TNR Death: ಟಿಎನ್​ಆರ್​ ಅವರು ಅನೇಕ ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿದ್ದರು. ನಟ ನಾನಿ, ನಿರ್ಮಾಪಕ ಬಂಡ್ಲ ಗಣೇಶ್​, ನಿರ್ದೇಶಕ ಮಾರುತಿ ಸೇರಿದಂತೆ ಅನೇಕರು ಟಿಎನ್​ಆರ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಕೊರೊನಾದಿಂದ ಟಾಲಿವುಡ್​ ನಟ TNR ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು
ಟಿಎನ್ಆರ್
ಮದನ್​ ಕುಮಾರ್​
| Edited By: |

Updated on: May 10, 2021 | 4:04 PM

Share

ಕೊರೊನಾದಿಂದ ಸಂಭವಿಸುತ್ತಿರುವ ಸೆಲೆಬ್ರಿಟಿಗಳ ಸಾವಿನ ಸರಣಿ ಸದ್ಯಕ್ಕಂತೂ ನಿಲ್ಲುವಂತೆ ಕಾಣುತ್ತಿಲ್ಲ. ಎಲ್ಲ ಭಾಷೆಯ ಚಿತ್ರರಂಗದ ಕಲಾವಿದರು ಈ ಮಹಾಮಾರಿಗೆ ಬಲಿ ಆಗುತ್ತಿದ್ದಾರೆ. ತೆಲುಗು ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ನಿಭಾಯಿಸುವ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ನಟ ಟಿಎನ್​ಆರ್​ ಅವರು ಸೋಮವಾರ (ಮೇ 10) ಹೈದರಾಬಾದ್​ನಲ್ಲಿ ನಿಧನರಾದರು. ಟಿಎನ್​ಆರ್​ ಎಂದೇ ಫೇಮಸ್​ ಆಗಿದ್ದ ಅವರ ಪೂರ್ಣ ಹೆಸರು ತುಮ್ಮಲ ನರಸಿಂಹ ರೆಡ್ಡಿ. ಅವರ ಅಗಲಿಕೆಗೆ ಟಾಲಿವುಡ್​ ಮಂದಿ ಸಂತಾಪ ಸೂಚಿಸುತ್ತಿದ್ದಾರೆ.

ಸಿನಿಮಾ ಪತ್ರಕರ್ತರಾಗಿದ್ದ ಟಿಎನ್​ಆರ್​ ಅವರು ತಮ್ಮ ಯೂಟ್ಯೂಬ್​ ಚಾನಲ್​ ಮೂಲಕ ಹಲವಾರು ಸೆಲೆಬ್ರಿಟಿಗಳ ಸಂದರ್ಶನ ಮಾಡಿದ್ದರು. ಮಹಾಮಹೇಶ್ವರ ಉಗ್ರ ರೂಪಸ್ಯ, ಹಿಟ್​, ಜಾರ್ಜ್​ ರೆಡ್ಡಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿದ್ದರು. ನಟ ನಾನಿ, ನಿರ್ಮಾಪಕ ಬಂಡ್ಲ ಗಣೇಶ್​, ನಿರ್ದೇಶಕ ಮಾರುತಿ ಸೇರಿದಂತೆ ಅನೇಕರು ಟಿಎನ್​ಆರ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

‘ಟಿಎನ್​ಆರ್​ ಅವರು ನಿಧನರಾದರು ಎಂಬ ಸುದ್ದಿ ಕೇಳಿ ಶಾಕ್​ ಆಯಿತು. ಅವರ ಕೆಲವು ಸಂದರ್ಶನಗಳನ್ನು ನಾನು ನೋಡಿದ್ದೇನೆ. ತುಂಬ ಚೆನ್ನಾಗಿ ಅಧ್ಯಯನ ಮಾಡಿಕೊಂಡು ಬಂದು, ಅತಿಥಿಗಳು ಮನಬಿಚ್ಚಿ ಮಾತನಾಡುವಂತೆ ಮಾಡುವ ಸಾಮರ್ಥ್ಯ ಅವರಲ್ಲಿ ಇತ್ತು. ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ’ ಎಂದು ನಾನಿ ಟ್ವೀಟ್​ ಮಾಡಿದ್ದಾರೆ.

ಖ್ಯಾತ ನಟ ರಾಹುಲ್​ ವೋಹ್ರಾ ಅವರು ಕೊರೊನಾದಿಂದ ನಿಧನರಾದ ಸುದ್ದಿ ಭಾನುವಾರವಷ್ಟೇ (ಮೇ 9) ಕೇಳಿಬಂದಿತ್ತು. ಮರುದಿನವೇ ಮತ್ತೊಬ್ಬ ನಟನನ್ನು ಚಿತ್ರರಂಗ ಕಳೆದುಕೊಂಡಿದೆ. ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಕಾಲಿವುಡ್​ ನಿರ್ದೇಶಕ ಕೆ.ವಿ. ಆನಂದ್​, ರವಿರತ್ನ ಕಾಳಿದಾಸ ಚಿತ್ರದ ನಿರ್ದೇಶಕ ರೇಣುಕಾ ಶರ್ಮಾ, ನಟ ಶಂಕನಾದ ಅರವಿಂದ್​, ಯುವ ನಿರ್ಮಾಪಕ ಡಿ.ಎಸ್​. ಮಂಜುನಾಥ್, ಮರಾಠಿ ನಟಿ ಅಭಿಲಾಷಾ ಪಾಟಿಲ್​​ ಸೇರಿದಂತೆ ಅನೇಕರು ಕೊರೊನಾದಿಂದ ಅಸುನೀಗಿದ್ದಾರೆ. ಸಾವಿನ ಸರಣಿ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ:

ಆಕ್ಸಿಜನ್​ ಬೇಕು ಎಂದು ಮೋದಿಗೆ ಕೈ ಮುಗಿದು ಬೇಡಿಕೊಂಡಿದ್ದ ನಟ ರಾಹುಲ್​ ಕೊರೊನಾದಿಂದ ನಿಧನ

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!