AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆ ಸೇರಲಿದ್ದಾರೆ ಸ್ಟಾರ್ ಕಾಮಿಡಿಯನ್?

ಅಲಿ ತೆಲುಗು ಚಿತ್ರರಂಗದಲ್ಲಿ ಮಾತ್ರ ಹೆಸರು ಮಾಡಿಲ್ಲ. 2010ರಲ್ಲಿ ತೆರೆಗೆ ಬಂದ ಕನ್ನಡದ ಸೂಪರ್​ ಚಿತ್ರದಲ್ಲಿ ಅವರು ನಟಿಸಿದ್ದರು. 2014ರ ನಮೋ ಭೂತಾತ್ಮ, ಕೆಂಪೇಗೌಡ 2 ಸಿನಿಮಾಗಳಲ್ಲಿ ಅಲಿ ಆ್ಯಕ್ಟ್​ ಮಾಡಿದ್ದಾರೆ.

ಬಿಗ್ ಬಾಸ್ ಮನೆ ಸೇರಲಿದ್ದಾರೆ ಸ್ಟಾರ್ ಕಾಮಿಡಿಯನ್?
ಅಲಿ
TV9 Web
| Edited By: |

Updated on: Jul 06, 2021 | 3:31 PM

Share

ತೆಲುಗು ಬಿಗ್​ ಬಾಸ್​ ನಾಲ್ಕು ಸೀಸನ್ ಪೂರ್ಣಗೊಳಿಸಿದೆ. ​ಈಗ ಐದನೇ ಸೀಸನ್​ಗೆ ಸಿದ್ಧತೆಗಳು ನಡೆಯುತ್ತಿವೆ. ಆರಂಭದಲ್ಲಿ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಶುರು ಮಾಡುವ ಆಲೋಚನೆ ವಾಹಿನಿಯದ್ದಾಗಿತ್ತು. ಆದರೆ, ಕೊವಿಡ್​ ಕಾರಣದಿಂದ ಬಿಗ್​ ಬಾಸ್​ ಆರಂಭ ದಿನಾಂಕ ಮುಂದೂಡಲ್ಪಟ್ಟಿದೆ. ಆಗಸ್ಟ್​ ವೇಳೆಗೆ ತೆಲುಗು ಬಿಗ್​ ಬಾಸ್​ ಸೀಸನ್-5ಅನ್ನು ಆರಂಭಿಸುವ ಆಲೋಚನೆಯನ್ನು ವಾಹಿನಿ ಹೊಂದಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಬಿಗ್​ ಬಾಸ್​ ಮನೆ ಸೇರುವವರ ಸಂಭಾವ್ಯ ಪಟ್ಟಿ ಹರಿದಾಡುತ್ತಿದೆ.

ಟಾಲಿವುಡ್​ನ ಸ್ಟಾರ್​ ಕಾಮಿಡಿಯನ್​ ಅಲಿ ಅವರನ್ನು ಬಿಗ್​ ಬಾಸ್​ ಮನೆ ಒಳಗೆ ಕಳುಹಿಸುವ ಆಲೋಚನೆಯಲ್ಲಿ ವಾಹಿನಿ ಇದೆ. ಈಗಾಲೇ ಅವರನ್ನು ಅಪ್ರೋಚ್​ ಮಾಡಲಾಗಿದ್ದು, ಇದಕ್ಕೆ ಅವರು ಒಕೆ ಎಂದಿದ್ದಾರೆ ಎನ್ನಲಾಗಿದೆ.

ಅಲಿ ತೆಲುಗು ವಲಯದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ತಮ್ಮ ಹಾಸ್ಯದ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದಾರೆ. ಈ ಕಾರಣಕ್ಕೆ ಅವರು ಈ ಶೋಗೆ ಬಂದರೆ ಟಿಆರ್​ಪಿ ಹೆಚ್ಚಲಿದೆ ಎಂಬುದು ವಾಹಿನಿಯ ಲೆಕ್ಕಾಚಾರ.

ಅಲಿ ತೆಲುಗು ಚಿತ್ರರಂಗದಲ್ಲಿ ಮಾತ್ರ ಹೆಸರು ಮಾಡಿಲ್ಲ. 2010ರಲ್ಲಿ ತೆರೆಗೆ ಬಂದ ಕನ್ನಡದ ಸೂಪರ್​ ಚಿತ್ರದಲ್ಲಿ ಅವರು ನಟಿಸಿದ್ದರು. 2014ರ ನಮೋ ಭೂತಾತ್ಮ, ಕೆಂಪೇಗೌಡ 2 ಸಿನಿಮಾಗಳಲ್ಲಿ ಅಲಿ ಆ್ಯಕ್ಟ್​ ಮಾಡಿದ್ದಾರೆ. ಸದ್ಯ, ವಿಜಯ್​ ದೇವರಕೊಂಡ ನಟನೆಯ ‘ಲೈಗರ್​’ ಸಿನಿಮಾದಲ್ಲಿಯೂ ಅಲಿ ಅಭಿನಯಿಸುತ್ತಿದ್ದಾರೆ.

ಅಲಿ ಜತೆಗೆ ಸಾಕಷ್ಟು ಜನರ ಹೆಸರು ಸಂಭಾವ್ಯ ಪಟ್ಟಿಯಲ್ಲಿದೆ. ತೆಲುಗಿನಲ್ಲಿ ‘ರಾಬರ್ಟ್’ ಸಿನಿಮಾದ ಹಾಡನ್ನು ಹಾಡಿದ ಗಾಯಕಿ ಮಂಗ್ಲಿ, ಆ್ಯಂಕರ್​ ರವಿ, ಶರಣ್​ ನಟನೆಯ ‘ಅಧ್ಯಕ್ಷ’ ಸಿನಿಮಾದ ನಾಯಕಿ ಹೆಬ್ಬಾ ಪಟೇಲ್​ ಸೇರಿ ಅನೇಕರು ಬಿಗ್​ ಬಾಸ್​ ಮನೆ ಸೇರುತ್ತಿದ್ದಾರೆ ಎನ್ನಲಾಗುತ್ತಿದೆ. ಶೋ ಆರಂಭವಾದ ನಂತರವೇ ಈ ಕುತೂಹಲಕ್ಕೆ ತೆರೆ ಬೀಳಲಿದೆ.

ತೆಲುಗು ಬಿಗ್​ ಬಾಸ್​-4ರಲ್ಲಿ ಅಭಿಜೀತ್​ ವಿನ್ನರ್​ ಆಗಿದ್ದರು. ಅಖಿಲ್​ ಸಾರ್ಥಕ್​ ಹಾಗೂ ಸೋಹೆಲ್​ ಕ್ರಮವಾಗಿ ಮೊದಲ ಹಾಗೂ ಎರಡನೇ ರನ್ನರ್​ ಅಪ್​ ಆಗಿದ್ದರು.

ಇದನ್ನೂ ಓದಿ:

Divya Uruduga: ಕನ್ನಡ ಬಿಗ್​ ಬಾಸ್​ ಸೀಸನ್​ 8ರಲ್ಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

 ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಅರವಿಂದ್​ ವಿರುದ್ಧ ಸೇಡು ತೀರಿಸಿಕೊಂಡ ನಿಧಿ ಸುಬ್ಬಯ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!