AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ದೇವರಿಗೆ ಅವಹೇಳನ ಮಾಡಿದ ಆರೋಪ; ಬಿಗ್​ ಬಾಸ್​ ಕೊನೆಯ ಸೀಸನ್​ನ ಸ್ಪರ್ಧಿ ಅರೆಸ್ಟ್​

ಕಳೆದ ವರ್ಷ ‘ತೆಲುಗು ಬಿಗ್​ ಬಾಸ್​ ಸೀಸನ್​ 5’ ಪೂರ್ಣಗೊಂಡಿತ್ತು. ನಟ ಅಕ್ಕಿನೇನಿ ನಾಗಾರ್ಜುನ ಅವರು ಈ ಶೋ ನಡೆಸಿಕೊಟ್ಟಿದ್ದರು. ಆ ಸೀಸನ್​ನಲ್ಲಿ ಮನೆಗೆ ಎಂಟ್ರಿ ಕೊಟ್ಟಿದ್ದ ಸರಯು ಅವರು ಈಗ ಅರೆಸ್ಟ್​ ಆದ ಮಹಿಳೆ.

ಹಿಂದೂ ದೇವರಿಗೆ ಅವಹೇಳನ ಮಾಡಿದ ಆರೋಪ; ಬಿಗ್​ ಬಾಸ್​ ಕೊನೆಯ ಸೀಸನ್​ನ ಸ್ಪರ್ಧಿ ಅರೆಸ್ಟ್​
ಸರಯು
TV9 Web
| Edited By: |

Updated on:Feb 08, 2022 | 11:38 AM

Share

ಇತ್ತೀಚಿನ ವರ್ಷಗಳಲ್ಲಿ ಸೋಶಿಯಲ್ ಮೀಡಿಯಾ (Social Media) ಸಾಕಷ್ಟು ಸ್ಟ್ರಾಂಗ್​ ಆಗಿದೆ. ಯಾವುದೇ ಕಮೆಂಟ್​ಗಳನ್ನು ಮಾಡುವಾಗ, ಯಾವುದೇ ಪೋಸ್ಟ್​ಗಳನ್ನು ಹಾಕುವಾಗ ತುಂಬಾನೇ ಎಚ್ಚರಿಕೆಯಿಂದ ಇರಬೇಕು. ಈಗ ಬಿಗ್​ ಬಾಸ್​ (Bigg Boss) ಸ್ಪರ್ಧಿಗೂ ಇದೇ ಸಮಸ್ಯೆ ಆಗಿದೆ. ಯೂಟ್ಯೂಬ್​ನಲ್ಲಿ ಪೋಸ್ಟ್​ ಮಾಡಿದ ವಿಡಿಯೋದಲ್ಲಿ ಇರುವ ಅವಹೇಳನಕಾರಿ ವಿಚಾರದಿಂದ ಅವರು ಅರೆಸ್ಟ್​ ಆಗಿದ್ದಾರೆ. ಅವರನ್ನು ಪೊಲೀಸರು ಅರೆಸ್ಟ್​ ಮಾಡಿ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಕೆಲವರು ಇವರ ಪರ ಬ್ಯಾಟ್​ ಬೀಸಿದರೆ, ಇನ್ನೂ ಕೆಲವರು ಇವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕಳೆದ ವರ್ಷ ‘ತೆಲುಗು ಬಿಗ್​ ಬಾಸ್​ ಸೀಸನ್​ 5’ ಪೂರ್ಣಗೊಂಡಿತ್ತು. ನಟ ಅಕ್ಕಿನೇನಿ ನಾಗಾರ್ಜುನ ಅವರು ಈ ಶೋ ನಡೆಸಿಕೊಟ್ಟಿದ್ದರು. ಆ ಸೀಸನ್​ನಲ್ಲಿ ಮನೆಗೆ ಎಂಟ್ರಿ ಕೊಟ್ಟಿದ್ದ ಸರಯು ಅವರು ಈಗ ಅರೆಸ್ಟ್​ ಆದ ಮಹಿಳೆ. ಬಿಗ್​ ಬಾಸ್​ ಮನೆಯಲ್ಲಿ ತಮ್ಮ ನೇರ ನಡೆನುಡಿಯಿಂದ ಅವರು ಸುದ್ದಿಯಾಗಿದ್ದರು. ಸಾಕಷ್ಟು ಕಾಂಟ್ರವರ್ಸಿಗಳನ್ನು ಅವರು ಮಾಡಿಕೊಂಡಿದ್ದಾರೆ. ಈಗ ಅವರ ಹೆಸರಿಗೆ ಹೊಸ ವಿವಾದವೊಂದು ಸುತ್ತಿಕೊಂಡಿದ್ದು, ಈ ಪ್ರಕರಣದಲ್ಲಿ ಅವರನ್ನು ಅರೆಸ್ಟ್​ ಮಾಡಲಾಗಿದೆ.

ಸರಯು ರೆಸ್ಟೋರೆಂಟ್​ ಒಂದರ ಪ್ರಚಾರಕ್ಕೆ ವಿಡಿಯೋ ಒಂದನ್ನು ಯೂಟ್ಯೂಬ್​ನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋದಲ್ಲಿ ಸರಯೂ ಮತ್ತಿತರರು ತಲೆಯ ಮೇಲೆ ಗಣಪತಿ ಬಪ್ಪಾ ಮೋರೆಯಾ ಬ್ಯಾಂಡ್ ಧರಿಸಿದ್ದರು. ದೇವರ ಗೊಂಬೆಗಳನ್ನು ಧರಿಸಿ ಮದ್ಯ ಸೇವನೆ ಮಾಡಿದ್ದರು. ಇದು ವಿವಾದ ಹತ್ತಿಕೊಳ್ಳಲು ಪ್ರಮುಖ ಕಾರಣವಾಗಿತ್ತು.

ಈ ಘಟನೆಗೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್​ ಸಂಘಟನೆಯವರು ಸರಯೂ ವಿರುದ್ಧ ದೂರು ದಾಖಲು ಮಾಡಿದ್ದರು. ಸಿರ್ಸಿಲ್ಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಅಲ್ಲಿಯೇ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಹೈದರಾಬಾದ್​ನ ಬಂಜಾರ್​ ಹಿಲ್ಸ್​ ಪೊಲೀಸ್​ ಠಾಣೆಗೆ ಹಸ್ತಾಂತರ ಮಾಡಲಾಗಿತ್ತು. ಈ ಕಾರಣಕ್ಕೆ ಬಂಜಾರ್​ ಹಿಲ್ಸ್​ ಪೊಲೀಸರು ಸರಯು ಅವರನ್ನು ಅರೆಸ್ಟ್ ಮಾಡಿದ್ದಾರೆ.

ಈ ಘಟನೆಯನ್ನು ವಿಶ್ವ ಹಿಂದೂ ಪರಿಷತ್​ ಸಂಘಟನೆಯವರು ಖಂಡಿಸಿದ್ದಾರೆ. ಅಲ್ಲದೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಪೊಲೀಸರು ಮುಂದೆ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ರೀಲ್ಸ್ ಮಾಡುವಾಗ ಬಿಗ್ ಬಾಸ್ ಸ್ಪರ್ಧಿ ಧರಿಸಿದ ಬಟ್ಟೆ ನೋಡಿ ಶಾಕ್ ಆದ ಅಭಿಮಾನಿಗಳು

Bigg Boss 5 Winner: ‘ಬಿಗ್​ ಬಾಸ್​ ತೆಲುಗು 5’ ವಿನ್ನರ್​ ಯಾರು? ಇಲ್ಲಿದೆ ಮಾಹಿತಿ

Published On - 11:37 am, Tue, 8 February 22

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ