AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಹಾಡಿನಲ್ಲಿ 5 ಸಾವಿರ ಡ್ಯಾನ್ಸರ್ಸ್​; ಮೇಕಿಂಗ್​ಗೆ 10 ಕೋಟಿ ರೂಪಾಯಿ

Nagabhandham movie: ನಾಗಬಂಧಮ್ ಚಿತ್ರದಲ್ಲಿ 10 ಕೋಟಿ ರೂಪಾಯಿ ವೆಚ್ಚದ ಅದ್ದೂರಿ ಹಾಡನ್ನು ಚಿತ್ರೀಕರಿಸಲಾಗುತ್ತಿದೆ. 5000ಕ್ಕೂ ಹೆಚ್ಚು ನರ್ತಕರು ಭಾಗವಹಿಸುತ್ತಿದ್ದಾರೆ. ಅನಂತ ಪದ್ಮನಾಭಸ್ವಾಮಿ ದೇವಾಲಯದ ಪ್ರತಿರೂಪವನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗಿದೆ. ಪುಷ್ಪ ಚಿತ್ರದ ಹಾಡುಗಳ ಕೊರಿಯೋಗ್ರಾಫರ್ ಗಣೇಶ್ ಆಚಾರ್ಯ ಈ ಹಾಡಿಗೆ ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಈ ಹಾಡು ಮತ್ತು 10 ನಿಮಿಷಗಳ ದೃಶ್ಯಕ್ಕಾಗಿ 10 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ.

ಒಂದು ಹಾಡಿನಲ್ಲಿ 5 ಸಾವಿರ ಡ್ಯಾನ್ಸರ್ಸ್​; ಮೇಕಿಂಗ್​ಗೆ 10 ಕೋಟಿ ರೂಪಾಯಿ
Nagabandam
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 19, 2025 | 4:06 PM

Share

ಸಾಮಾನ್ಯವಾಗಿ ದೊಡ್ಡ ಬಜೆಟ್ ಸಿನಿಮಾಗಳು (Cinema) ಎಂದಾಗ ಪ್ರತಿ ಚಿತ್ರದ ದೃಶ್ಯ, ಹಾಡು, ಫೈಟ್​ಗಳು ಅದ್ಭುತವಾಗಿ ಮೂಡಿ ಬರುವಂತೆ ನೋಡಿಕೊಳ್ಳುತ್ತಾರೆ. ಈಗ ‘ನಾಗಬಂಧಂ’ ಹೆಸರಿನ ಚಿತ್ರವು ತೆಲುಗಿನಲ್ಲಿ ಸಿದ್ಧವಾಗುತ್ತಿದೆ. ಅಭಿಷೇಕ್ ನಮ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಜಗಪತಿ ಬಾಬು, ಬಿಎಸ್ ಅವಿನಾಶ್, ವಿರಾಟ್ ಕರ್ಣ, ಮುರಳಿ ಶರ್ಮ, ಐಶ್ವರ್ಯಾ ಮೆನನ್ ಮೊದಲಾದವರು ನಟಿಸುತ್ತಿದ್ದಾರೆ. ಈ ಚಿತ್ರದ ಹಾಡಿನ ಬಗ್ಗೆ ಚರ್ಚೆ ಶುರುವಾಗಿದೆ. ಇದರ ಬಜೆಟ್ ಅಚ್ಚರಿ ಮೂಡಿಸಿದೆ.

‘ನಾಗಬಂಧಮ್’ ಚಿತ್ರವನ್ನು ಕಿಶೋರ್ ಹಾಗೂ ವಿರಾಟ್ ಕರ್ಣ ನಿರ್ಮಾಣ ಮಾಡುತ್ತಿದ್ದಾರೆ.  ಈ ಚಿತ್ರವು ಪೋಸ್ಟ್ ಮೂಲಕ ಎಲ್ಲರ ಗಮನ ಸೆಳೆದಿದೆ. ಈ ಸಿನಿಮಾದಲ್ಲಿ ಒಂದು ಭರ್ಜರಿ ಸಾಂಗ್​ನ ಇಡಲು ತಂಡದವರು ಆಲೋಚಿಸಿದ್ದಾರೆ. ಇದಕ್ಕಾಗಿ ಬರೋಬ್ಬರಿ 10 ಕೋಟಿ ರೂಪಾಯಿ ಹಣವನ್ನು ಖರ್ಚು ಮಾಡಲಾಗುತ್ತಿದೆ. ಇದಕ್ಕೆ ಕಾರಣ ಹಾಡಿನ ಅದ್ದೂರಿತನ.

ಅನಂತ ಪದ್ಮನಾಭ ಸ್ವಾಮಿ ದೇವಾಲಯವನ್ನು ಸೆಟ್ ಮೂಲಕ ರೀ-ಕ್ರಿಯೇಟ್ ಮಾಡಲಾಗಿದೆ. ಇದು ನೋಡೋಕೆ ಥೇಟ್ ಅನಂತ ಪದ್ಮನಾಭ ಸ್ವಾಮಿ ದೇವಾಲಯದ ರೀತಿಯೇ ಕಾಣುತ್ತಿದೆ. ಗಣೇಶ್ ಆಚಾರ್ಯ ಅವರು ಹಾಡಿನ ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಈ ಮೊದಲು ಅವರು ‘ಪುಷ್ಪ’ ಹಾಗೂ ‘ಪುಷ್ಪ 2’ ಹಾಡಿಗಳನ್ನು ಕೊರಿಯೋಗ್ರಫಿ ಮಾಡಿದ್ದರು. ವಿರಾಟ್ ಕರ್ಣ ಹಾಗೂ ಇತರ 5000 ಡ್ಯಾನ್ಸರ್​ಗಳ ಜೊತೆ ಸಾಂಗ್​ನ ಶೂಟ್ ಮಾಡಲಾಗುತ್ತಿದೆ. ಈ ಹಾಡಿನ ಜೊತೆ 10 ನಿಮಿಷಗಳ ದೃಶ್ಯ ಇರಲಿದೆ. ಇದಕ್ಕಾಗಿ ನಿರ್ಮಾಪಕರು 10 ಕೋಟಿ ರೂಪಾಯಿ ಸುರಿಯಲು ರೆಡಿ ಆಗಿದ್ದಾರಂತೆ.

ಇದನ್ನೂ ಓದಿ:ಯುವರಾಜ್ ಕುಮಾರ್ ‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್

ಸಾಮಾನ್ಯವಾಗಿ ಈ ರೀತಿಯ ಅದ್ದೂರಿ ಹಾಡುಗಳನ್ನು ಮಾಡುವಾಗ ದೊಡ್ಡ ಬಜೆಟ್ ಹಾಕಲು ನಿರ್ಮಾಪಕರು ಒಪ್ಪೋದಿಲ್ಲ. ಹಾಡಿಗೆ ಇಷ್ಟು ಹಣ ಖರ್ಚಾದರೆ  ಮುಂದೇನು ಎನ್ನುವ ಪ್ರಶ್ನೆಯನ್ನು ಮಾಡುತ್ತಾರೆ. ಆದರೆ, ‘ನಾಗಬಂಧಮ್’ ಚಿತ್ರದ ನಿರ್ಮಾಪಕರು ಇದಕ್ಕೆ ಹಿಂಜರಿಕೆ ತೋರಿಸದೇ ಗಟ್ಟಿ ನಿರ್ಧಾರ ಮಾಡಿದ್ದಾರೆ.

ಭಾರತದ ಪ್ರಾಚೀನ ವಿಷ್ಣು ದೇವಾಲಯಗಳ  ಅನ್ವೇಷಣೆ, ನಾಗಬಂಧದ ನಿಗೂಢ ಆಚರಣೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಈ ಚಿತ್ರವು ಗುಪ್ತ ರಹಸ್ಯಗಳು ಮತ್ತು ಪವಿತ್ರ ಸಂಪ್ರದಾಯಗಳನ್ನು ಅನಾವರಣಗೊಳಿಸುತ್ತದೆ. ಈ ಸಿನಿಮಾ ಯಾವಾಗ ರಿಲೀಸ್ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!