AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ಗೆ ಡಬ್ಬಿಂಗ್​ ಭಯ; ತೆಲಂಗಾಣ, ಆಂಧ್ರದಲ್ಲಿ ಸಂಕ್ರಾಂತಿ ವೇಳೆ ಬೇರೆ ಭಾಷೆಯ ಚಿತ್ರಗಳಿಗೆ ಸಂಕಷ್ಟ

Tollywood News | Dubbing Movies: ಆಂಧ್ರ ಮತ್ತು ತೆಲಂಗಾಣದಲ್ಲಿ ಹಬ್ಬಗಳ ಸಂದರ್ಭದಲ್ಲಿ ಡಬ್ಬಿಂಗ್​ ಸಿನಿಮಾಗಳ ಬಿಡುಗಡೆಗೆ ಆದ್ಯತೆ​ ನೀಡಬಾರದು ಎಂದು ಅಲ್ಲಿನ ನಿರ್ಮಾಪಕರ ಸಂಘ ತೀರ್ಮಾನಿಸಿದೆ. ಈ ನಿರ್ಧಾರ ದೊಡ್ಡ ಚರ್ಚೆ ಹುಟ್ಟುಹಾಕಿದೆ.

ಟಾಲಿವುಡ್​ಗೆ ಡಬ್ಬಿಂಗ್​ ಭಯ; ತೆಲಂಗಾಣ, ಆಂಧ್ರದಲ್ಲಿ ಸಂಕ್ರಾಂತಿ ವೇಳೆ ಬೇರೆ ಭಾಷೆಯ ಚಿತ್ರಗಳಿಗೆ ಸಂಕಷ್ಟ
ಅಜಿತ್​, ವಿಜಯ್​
TV9 Web
| Edited By: |

Updated on:Nov 13, 2022 | 9:43 PM

Share

ಪ್ಯಾನ್​ ಇಂಡಿಯಾ ಸಿನಿಮಾಗಳಿಂದಾಗಿ (Pan India Movies) ಬೇರೆ ಬೇರೆ ಭಾಷೆಯ ಚಿತ್ರರಂಗದ ನಡುವೆ ಉತ್ತಮ ಒಡನಾಡ ಶುರುವಾಗಿದೆ. ಆದರೆ 2023ರ ಆರಂಭದಲ್ಲಿ ಬೇರೆ ಬೇರೆ ಚಿತ್ರರಂಗಗಳ ನಡುವೆ ಬಿರುಕು ಮೂಡುವ ಸಾಧ್ಯತೆ ಗೋಚರಿಸುತ್ತಿದೆ. ಡಬ್ಬಿಂಗ್​ ಸಿನಿಮಾಗಳ ವಿಷಯದಲ್ಲಿ ಟಾಲಿವುಡ್​ (Tollywood) ನಿರ್ಮಾಪಕರು ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ. 2023ರ ಸಂಕ್ರಾಂತಿಯಲ್ಲಿ ಆಂಧ್ರ ಮತ್ತು ತೆಲಂಗಾಣದಲ್ಲಿ ತೆಲುಗು ಚಿತ್ರಗಳನ್ನು ಹೊರತು ಪಡಿಸಿ ಬೇರೆ ಭಾಷೆಯ ಡಬ್ಬಿಂಗ್​ ಸಿನಿಮಾಗಳಿಗೆ ಚಿತ್ರಮಂದಿರ ನೀಡಬಾರದು ಎಂದು ತೆಲುಗು ನಿರ್ಮಾಪಕರ ಸಂಘವು (Telugu Film Producers Council) ಎಲ್ಲ ವಿತರಕರಿಗೆ ಮತ್ತು ಪ್ರದರ್ಶಕರಿಗೆ ಸೂಚನೆ ನೀಡಿದೆ. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದೆ.

ಡಬ್ಬಿಂಗ್​ ಸಿನಿಮಾಗಳು ಎಲ್ಲ ರಾಜ್ಯಗಳಲ್ಲಿ ರಾರಾಜಿಸುತ್ತಿವೆ. ಕನ್ನಡದ ‘ಕಾಂತಾರ’ ಸಿನಿಮಾ ತೆಲುಗಿಗೆ ಡಬ್​ ಆಗಿ ಧೂಳೆಬ್ಬಿಸಿದೆ. ಹಲವು ತೆಲುಗು ಚಿತ್ರಗಳಿಗೆ ಗಲ್ಲಾಪೆಟ್ಟಿಗೆಯಲ್ಲಿ ರಿಷಬ್​ ಶೆಟ್ಟಿಯ ಈ ಕನ್ನಡ ಸಿನಿಮಾ ಪೈಪೋಟಿ ನೀಡಿದೆ. ಈಗ ತಮಿಳಿನ ‘ವಾರಿಸು’ ಸಿನಿಮಾ ಕೂಡ ತೆಲುಗಿಗೆ ಡಬ್​ ಆಗಿ ತೆರೆಕಾಣಲು ಸಜ್ಜಾಗಿದೆ. ಆದರೆ ಸಂಕ್ರಾಂತಿ ಸಂದರ್ಭದಲ್ಲಿ ಡಬ್ಬಿಂಗ್​ ಸಿನಿಮಾಗಳ ಬಿಡುಗಡೆಗೆ ಆಂಧ್ರ ಮತ್ತು ತೆಲಂಗಾಣದಲ್ಲಿ ಆದತ್ಯೆ​ ನೀಡಬಾರದು ಎಂದು ಅಲ್ಲಿನ ನಿರ್ಮಾಪಕರ ಸಂಘ ತೀರ್ಮಾನಿಸಿದೆ.

ತೆಲುಗಿನ ಖ್ಯಾತ ನಿರ್ಮಾಪಕ ದಿಲ್​ ರಾಜು ಅವರು ತಮಿಳಿನ ‘ವಾರಿಸು’ ಚಿತ್ರದ ತೆಲುಗು ವರ್ಷನ್​ ಅನ್ನು ಆಂಧ್ರ ಮತ್ತು ತೆಲಂಗಾಣದಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಆದರೆ ಕೆಲವೇ ವರ್ಷಗಳ ಹಿಂದೆ ಇದೇ ದಿಲ್​ ರಾಜು ಅವರು ಡಬ್ಬಿಂಗ್​ ಚಿತ್ರಗಳ ವಿರುದ್ಧ ಮಾತನಾಡಿದ್ದರು. ಅಂದಿನ ಅವರ ಹೇಳಿಕೆಯನ್ನು ಈಗ ಮತ್ತೆ ನೆನಪಿಸುವ ಕಾರ್ಯ ಆಗುತ್ತಿದೆ. ಒಟ್ಟಾರೆಯಾಗಿ ಈ ವಿಚಾರ ಚಿತ್ರರಂಗದಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿದೆ.

ಇದನ್ನೂ ಓದಿ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
Kabza Movie: 7 ಭಾಷೆಗಳಲ್ಲಿ ಧೂಳೆಬ್ಬಿಸಲಿದೆ ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ; ಭರದಿಂದ ಸಾಗುತ್ತಿದೆ ಡಬ್ಬಿಂಗ್​ ಕೆಲಸ
Image
ಸೌತ್​ ಸಿನಿಮಾಗಳ ಎದುರು ಹಿಂದಿ ಚಿತ್ರಗಳು ಸೋತಿದ್ದು ಯಾಕೆ? ಎಲ್ಲವನ್ನೂ ವಿವರಿಸಿದ ಮನೋಜ್​ ಬಾಜ್​ಪಾಯಿ
Image
ಡಬ್ಬಿಂಗ್​ ಚಿತ್ರದ ಕನ್ನಡ ವರ್ಷನ್​ಗೆ ಹೆಚ್ಚು ಥಿಯೇಟರ್​ ಸಿಗಲ್ಲ ಯಾಕೆ? ಪ್ರಾಕ್ಟಿಕಲ್​ ಕಾರಣ ತಿಳಿಸಿದ ‘83’ ವಿತರಕ ಜಾಕ್​​ ಮಂಜು

ಒಂದು ವೇಳೆ ಸಂಕ್ರಾಂತಿ, ದಸರಾ ಮುಂತಾದ ಹಬ್ಬದ ಸಂದರ್ಭದಲ್ಲಿ ಆಂಧ್ರ ಮತ್ತು ತೆಲಂಗಾಣದ ಥಿಯೇಟರ್​ಗಳಲ್ಲಿ ತೆಲುಗು ಚಿತ್ರಗಳಿಗೆ ಮಾತ್ರ ಆದ್ಯತೆ ನೀಡಬೇಕು ಎಂದು ಅಲ್ಲಿನ ನಿರ್ಮಾಪಕರು ಕಠಿಣ ತೀರ್ಮಾನ ತೆಗೆದುಕೊಂಡರೆ ಬೇರೆ ಭಾಷೆಯ ಚಿತ್ರಗಳಿಗೆ ತೊಂದರೆ ಆಗಲಿದೆ. ಅದೇ ರೀತಿ, ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಭಾರತದಲ್ಲೂ ಇಂಥ ಪರಿಸ್ಥಿತಿ ನಿರ್ಮಾಣವಾದರೆ ಪ್ಯಾನ್​ ಇಂಡಿಯಾ​ ಚಿತ್ರಗಳ ಮಾರುಕಟ್ಟೆಗೆ ದೊಡ್ಡ ಪೆಟ್ಟು ಬೀಳುವುದು ಖಚಿತ.

ಡಬ್ಬಿಂಗ್​ ಸಿನಿಮಾಗಳಿಗೆ ತೆಲುಗು ಮಂದಿ ಕಡಿವಾಣ ಹಾಕುವುದು ನಿಜವೇ ಹೌದಾದರೆ ಕರ್ನಾಟಕದಲ್ಲೂ ತೆಲುಗು ಸಿನಿಮಾಗಳ ರಿಲೀಸ್​ಗೆ ಅವಕಾಶ ನೀಡಬಾರದು ಎಂದು ಸೋಶಿಯಲ್​ ಮೀಡಿಯಾದಲ್ಲಿ ಕನ್ನಡದ ಪ್ರೇಕ್ಷಕರಿಂದ ಒತ್ತಾಯ ಕೇಳಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:19 pm, Sun, 13 November 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ