ಪ್ರಭಾಸ್​ಗೆ ಜೋಕರ್​ ಎಂದ ಬಾಲಿವುಡ್​ ನಟನ ವಿರುದ್ಧ ಕಲಾವಿದರ ಸಂಘದಿಂದ ದೀರ್ಘ ಪತ್ರ

ಪ್ರಭಾಸ್​ ಅವರ ಪರವಾಗಿ ಕಲಾವಿದರ ಸಂಘದವರು ನಿಂತುಕೊಂಡಿದ್ದಾರೆ. ಆ ಮೂಲಕ ಟಾಲಿವುಡ್​ ಮಂದಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ನಟ ಅರ್ಷದ್​ ವಾರ್ಸಿ ಅವರು ಪ್ರಭಾಸ್​ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಯನ್ನು ತೆಲುಗು ಕಲಾವಿದರ ಸಂಘವು ಖಂಡಿಸಿದೆ. ಅಲ್ಲದೇ ಈ ಬಗ್ಗೆ ಸಂಘದ ಅಧ್ಯಕ್ಷ ವಿಷ್ಣು ಮಂಚು ಅವರು ಸುದೀರ್ಘವಾದ ಪತ್ರವನ್ನು ಬರೆದಿದ್ದಾರೆ.

ಪ್ರಭಾಸ್​ಗೆ ಜೋಕರ್​ ಎಂದ ಬಾಲಿವುಡ್​ ನಟನ ವಿರುದ್ಧ ಕಲಾವಿದರ ಸಂಘದಿಂದ ದೀರ್ಘ ಪತ್ರ
ಅರ್ಷದ್​ ವಾರ್ಸಿ, ಪ್ರಭಾಸ್​
Follow us
|

Updated on: Aug 23, 2024 | 5:23 PM

ನಟ ಪ್ರಭಾಸ್​ ಅವರ ಅಭಿಮಾನಿಗಳ ಭಾವನೆಗೆ ಧಕ್ಕೆ ಆಗುವ ರೀತಿಯಲ್ಲಿ ಬಾಲಿವುಡ್​ ನಟ ಅರ್ಷದ್​ ವಾರ್ಸಿ ಅವರು ಇತ್ತೀಚೆಗೆ ಮಾತನಾಡಿದ್ದರು. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್​ ಜೋಕರ್​ ರೀತಿ ಕಾಣುತ್ತಾರೆ ಎಂದು ಅರ್ಷದ್​ ವಾರ್ಸಿ ಹೇಳಿದ್ದನ್ನು ಅಭಿಮಾನಿಗಳು ಖಂಡಿಸಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೇ ಇಡೀ ತೆಲುಗು ಸಿನಿಮಾ ಕಲಾವಿದರ ಸಂಘ ಕೂಡ ಆಕ್ಷೇಪ ವ್ಯಕ್ತಪಡಿಸಿದೆ. ಅರ್ಷದ್​ ವಾರ್ಸಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ‘ಹಿಂದಿ ಸಿನಿಮಾ ಮತ್ತು ಕಿರುತೆರೆ ಕಲಾವಿದರ ಸಂಘ’ಕ್ಕೆ ತೆಲುಗು ಕಲಾವಿದರ ಸಂಘದಿಂದ ಪತ್ರ ಬರೆಯಲಾಗಿದೆ.

ತೆಲುಗು ಸಿನಿಮಾ ಕಲಾವಿದರ ಸಂಘದ ಅಧ್ಯಕ್ಷ ವಿಷ್ಣು ಮಂಜು ಅವರು ಈ ಪತ್ರ ಬರೆದಿದ್ದಾರೆ. ಹಿಂದಿ ಸಿನಿಮಾ ಮತ್ತು ಕಿರುತೆರೆ ಕಲಾವಿದರ ಸಂಘದ ಅಧ್ಯಕ್ಷೆ ಪೂನಂ ದಿಲೋನ್​ ಅವರಿಗೆ ಪತ್ರವನ್ನು ಬರೆಯಲಾಗಿದೆ. ‘ತೆಲುಗು ಚಿತ್ರರಂಗಕ್ಕೆ ಸಂಬಂಧಿಸಿದಂತೆ ಇದು ಮುಖ್ಯ ವಿಚಾರವಾಗಿದೆ’ ಎಂದು ವಿಷ್ಣು ಮಂಚು ಅವರು ಪತ್ರ ಆರಂಭಿಸಿದ್ದಾರೆ. ಅದರ ಪ್ರತಿ ಕೂಡ ಮಾಧ್ಯಮಗಳಿಗೆ ಲಭ್ಯವಾಗಿದೆ.

‘ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ಅರ್ಷದ್​ ವಾರ್ಸಿ ಅವರು ಕಲ್ಕಿ 2898 ಎಡಿ ಸಿನಿಮಾ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡರು. ಮಾತನಾಡುವ ಹಕ್ಕು ಎಲ್ಲರಿಗೂ ಇದೆ ಎಂಬುದನ್ನು ನಾನು ಗೌರವಿಸುತ್ತೇವೆ. ಆದರೆ, ಅವರು ಪ್ರಭಾಸ್​ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದರ ಬಗ್ಗೆ ವಿಷಾದವಿದೆ. ತೆಲುಗು ಚಿತ್ರರಂಗದ ಅನೇಕರಿಗೆ ಮತ್ತು ಪ್ರಭಾಸ್​ ಅವರ ಅಭಿಮಾನಿಗಳಿಗೆ ಈ ಹೇಳಿಕೆಯಿಂದ ನೋವಾಗಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ.

‘ಇಂದಿನ ಸೋಶಿಯಲ್​ ಮೀಡಿಯಾ ಯುಗದಲ್ಲಿ ಎಲ್ಲವೂ ವೇಗವಾಗಿ ಹಬ್ಬುತ್ತದೆ ಮತ್ತು ಚರ್ಚೆಗೆ ಕಾರಣವಾಗುತ್ತದೆ. ಸೆಲೆಬ್ರಿಟಿಗಳಾದ ನಾವು ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಪದಗಳಿಗೆ ಶಕ್ತಿ ಇದೆ. ಅವು ಸಂಬಂಧವನ್ನು ಬೆಳೆಸಬಹುದು, ಮುರಿಯಲೂಬಹುದು. ಅರ್ಷದ್​ ವಾರ್ಸಿ ಅವರ ಮಾತುಗಳಿಂದ ಅನಗತ್ಯವಾದ ನೆಗೆಟಿವಿಟಿ ಹಬ್ಬಿದೆ’ ಎಂದು ವಿಷ್ಣು ಮಂಚು ಅವರು ಬರೆದಿದ್ದಾರೆ.

ಇದನ್ನೂ ಓದಿ: ‘ಕಲ್ಕಿ ಚಿತ್ರದಲ್ಲಿ ಪ್ರಭಾಸ್​ನ ಜೋಕರ್ ರೀತಿ ತೋರಿಸಲಾಗಿದೆ’; ಬಾಲಿವುಡ್ ನಟನ ಬೇಸರ

‘ಮುಂದಿನ ದಿನಗಳಲ್ಲಿ ಯಾವುದೇ ಕಲಾವಿದರ ಬಗ್ಗೆ ಈ ರೀತಿ ಹೇಳಿಕೆ ನೀಡಬಾರದು ಎಂದು ಅರ್ಷದ್​ ವಾರ್ಸಿ ಅವರಿಗೆ ತಿಳಿಸಿ. ಪ್ರದೇಶವಾರು ಭೇದ ಇಲ್ಲದೇ ನಾವು ಪರಸ್ಪರ ಗೌರವ ಹೊಂದಿರಬೇಕು. ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು. ನಮ್ಮ ಶಕ್ತಿಯೇ ಒಗ್ಗಟ್ಟು. ಅದನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?