AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ಗೆ ಜೋಕರ್​ ಎಂದ ಬಾಲಿವುಡ್​ ನಟನ ವಿರುದ್ಧ ಕಲಾವಿದರ ಸಂಘದಿಂದ ದೀರ್ಘ ಪತ್ರ

ಪ್ರಭಾಸ್​ ಅವರ ಪರವಾಗಿ ಕಲಾವಿದರ ಸಂಘದವರು ನಿಂತುಕೊಂಡಿದ್ದಾರೆ. ಆ ಮೂಲಕ ಟಾಲಿವುಡ್​ ಮಂದಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ನಟ ಅರ್ಷದ್​ ವಾರ್ಸಿ ಅವರು ಪ್ರಭಾಸ್​ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಯನ್ನು ತೆಲುಗು ಕಲಾವಿದರ ಸಂಘವು ಖಂಡಿಸಿದೆ. ಅಲ್ಲದೇ ಈ ಬಗ್ಗೆ ಸಂಘದ ಅಧ್ಯಕ್ಷ ವಿಷ್ಣು ಮಂಚು ಅವರು ಸುದೀರ್ಘವಾದ ಪತ್ರವನ್ನು ಬರೆದಿದ್ದಾರೆ.

ಪ್ರಭಾಸ್​ಗೆ ಜೋಕರ್​ ಎಂದ ಬಾಲಿವುಡ್​ ನಟನ ವಿರುದ್ಧ ಕಲಾವಿದರ ಸಂಘದಿಂದ ದೀರ್ಘ ಪತ್ರ
ಅರ್ಷದ್​ ವಾರ್ಸಿ, ಪ್ರಭಾಸ್​
ಮದನ್​ ಕುಮಾರ್​
|

Updated on: Aug 23, 2024 | 5:23 PM

Share

ನಟ ಪ್ರಭಾಸ್​ ಅವರ ಅಭಿಮಾನಿಗಳ ಭಾವನೆಗೆ ಧಕ್ಕೆ ಆಗುವ ರೀತಿಯಲ್ಲಿ ಬಾಲಿವುಡ್​ ನಟ ಅರ್ಷದ್​ ವಾರ್ಸಿ ಅವರು ಇತ್ತೀಚೆಗೆ ಮಾತನಾಡಿದ್ದರು. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್​ ಜೋಕರ್​ ರೀತಿ ಕಾಣುತ್ತಾರೆ ಎಂದು ಅರ್ಷದ್​ ವಾರ್ಸಿ ಹೇಳಿದ್ದನ್ನು ಅಭಿಮಾನಿಗಳು ಖಂಡಿಸಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೇ ಇಡೀ ತೆಲುಗು ಸಿನಿಮಾ ಕಲಾವಿದರ ಸಂಘ ಕೂಡ ಆಕ್ಷೇಪ ವ್ಯಕ್ತಪಡಿಸಿದೆ. ಅರ್ಷದ್​ ವಾರ್ಸಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ‘ಹಿಂದಿ ಸಿನಿಮಾ ಮತ್ತು ಕಿರುತೆರೆ ಕಲಾವಿದರ ಸಂಘ’ಕ್ಕೆ ತೆಲುಗು ಕಲಾವಿದರ ಸಂಘದಿಂದ ಪತ್ರ ಬರೆಯಲಾಗಿದೆ.

ತೆಲುಗು ಸಿನಿಮಾ ಕಲಾವಿದರ ಸಂಘದ ಅಧ್ಯಕ್ಷ ವಿಷ್ಣು ಮಂಜು ಅವರು ಈ ಪತ್ರ ಬರೆದಿದ್ದಾರೆ. ಹಿಂದಿ ಸಿನಿಮಾ ಮತ್ತು ಕಿರುತೆರೆ ಕಲಾವಿದರ ಸಂಘದ ಅಧ್ಯಕ್ಷೆ ಪೂನಂ ದಿಲೋನ್​ ಅವರಿಗೆ ಪತ್ರವನ್ನು ಬರೆಯಲಾಗಿದೆ. ‘ತೆಲುಗು ಚಿತ್ರರಂಗಕ್ಕೆ ಸಂಬಂಧಿಸಿದಂತೆ ಇದು ಮುಖ್ಯ ವಿಚಾರವಾಗಿದೆ’ ಎಂದು ವಿಷ್ಣು ಮಂಚು ಅವರು ಪತ್ರ ಆರಂಭಿಸಿದ್ದಾರೆ. ಅದರ ಪ್ರತಿ ಕೂಡ ಮಾಧ್ಯಮಗಳಿಗೆ ಲಭ್ಯವಾಗಿದೆ.

‘ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ಅರ್ಷದ್​ ವಾರ್ಸಿ ಅವರು ಕಲ್ಕಿ 2898 ಎಡಿ ಸಿನಿಮಾ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡರು. ಮಾತನಾಡುವ ಹಕ್ಕು ಎಲ್ಲರಿಗೂ ಇದೆ ಎಂಬುದನ್ನು ನಾನು ಗೌರವಿಸುತ್ತೇವೆ. ಆದರೆ, ಅವರು ಪ್ರಭಾಸ್​ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದರ ಬಗ್ಗೆ ವಿಷಾದವಿದೆ. ತೆಲುಗು ಚಿತ್ರರಂಗದ ಅನೇಕರಿಗೆ ಮತ್ತು ಪ್ರಭಾಸ್​ ಅವರ ಅಭಿಮಾನಿಗಳಿಗೆ ಈ ಹೇಳಿಕೆಯಿಂದ ನೋವಾಗಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ.

‘ಇಂದಿನ ಸೋಶಿಯಲ್​ ಮೀಡಿಯಾ ಯುಗದಲ್ಲಿ ಎಲ್ಲವೂ ವೇಗವಾಗಿ ಹಬ್ಬುತ್ತದೆ ಮತ್ತು ಚರ್ಚೆಗೆ ಕಾರಣವಾಗುತ್ತದೆ. ಸೆಲೆಬ್ರಿಟಿಗಳಾದ ನಾವು ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಪದಗಳಿಗೆ ಶಕ್ತಿ ಇದೆ. ಅವು ಸಂಬಂಧವನ್ನು ಬೆಳೆಸಬಹುದು, ಮುರಿಯಲೂಬಹುದು. ಅರ್ಷದ್​ ವಾರ್ಸಿ ಅವರ ಮಾತುಗಳಿಂದ ಅನಗತ್ಯವಾದ ನೆಗೆಟಿವಿಟಿ ಹಬ್ಬಿದೆ’ ಎಂದು ವಿಷ್ಣು ಮಂಚು ಅವರು ಬರೆದಿದ್ದಾರೆ.

ಇದನ್ನೂ ಓದಿ: ‘ಕಲ್ಕಿ ಚಿತ್ರದಲ್ಲಿ ಪ್ರಭಾಸ್​ನ ಜೋಕರ್ ರೀತಿ ತೋರಿಸಲಾಗಿದೆ’; ಬಾಲಿವುಡ್ ನಟನ ಬೇಸರ

‘ಮುಂದಿನ ದಿನಗಳಲ್ಲಿ ಯಾವುದೇ ಕಲಾವಿದರ ಬಗ್ಗೆ ಈ ರೀತಿ ಹೇಳಿಕೆ ನೀಡಬಾರದು ಎಂದು ಅರ್ಷದ್​ ವಾರ್ಸಿ ಅವರಿಗೆ ತಿಳಿಸಿ. ಪ್ರದೇಶವಾರು ಭೇದ ಇಲ್ಲದೇ ನಾವು ಪರಸ್ಪರ ಗೌರವ ಹೊಂದಿರಬೇಕು. ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು. ನಮ್ಮ ಶಕ್ತಿಯೇ ಒಗ್ಗಟ್ಟು. ಅದನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು