AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ದರ ವಿವಾದ; ಮುಖ್ಯಮಂತ್ರಿ ಭೇಟಿ ಮಾಡಿದ ಸ್ಟಾರ್​ ನಟರು

ಅಕ್ಕಿನೇನಿ ನಾಗಾರ್ಜುನ ಅವರು ಸಭೆಗೆ ಆಗಮಿಸಿರಲಿಲ್ಲ. ಇದಕ್ಕೆ ಕಾರಣವೂ ಇದೆ. ಅವರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಹೀಗಾಗಿ, ಮನೆಯಲ್ಲೇ ಅವರು ಕ್ವಾರಂಟೈನ್​ ಆಗಿದ್ದಾರೆ. ಈ ಮೊದಲು ಅವರು ಟಿಕೆಟ್​ ದರದ ವಿಚಾರದಲ್ಲಿ ನೀಡಿದ್ದ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು.

ಟಿಕೆಟ್​ ದರ ವಿವಾದ; ಮುಖ್ಯಮಂತ್ರಿ ಭೇಟಿ ಮಾಡಿದ ಸ್ಟಾರ್​ ನಟರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 10, 2022 | 3:11 PM

Share

ಸಿನಿಮಾ ​ ಟಿಕೆಟ್ ದರ (Ticket Price)​ ವಿಚಾರದಲ್ಲಿ ಆಂಧ್ರ ಪ್ರದೇಶದಲ್ಲಿ ಹೊಸ ನಿಯಮ ಜಾರಿಗೆ ಬಂದು ಹಲವು ತಿಂಗಳು ಕಳೆದಿದೆ. ಸಿನಿಮಾ ಟಿಕೆಟ್​ ದರ ಮಲ್ಟಿಪ್ಲೆಕ್ಸ್​ಗಳಲ್ಲಿ 250 ರೂಪಾಯಿ ದಾಟುವಂತಿಲ್ಲ. ಸಿಂಗಲ್​ ಸ್ಕ್ರೀನ್​ಗಳಲ್ಲೂ ದರಕ್ಕೆ ಕಡಿವಾಣ ಹಾಕಲಾಗಿದೆ. ಇದರಿಂದ ಎಲ್ಲಾ ಸಿನಿಮಾಗಳ ಕಲೆಕ್ಷನ್​ಗೆ ದೊಡ್ಡ ಮಟ್ಟದ ಹೊಡೆತ ಕೊಡುತ್ತಿದೆ. ಹೀಗಾಗಿ, ಈ ವಿಚಾರದ ಬಗ್ಗೆ ಇಂದು ತೆಲುಗು ಸ್ಟಾರ್​ ನಟರು ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಅವರನ್ನು (YS Jagan Mohan Reddy) ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎನ್ನುವ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಸಿನಿಮಾ ಟಿಕೆಟ್​ಗೆ ಸರ್ಕಾರ ದರ ನಿಗದಿ ಮಾಡಿದೆ. ನಗರ ವ್ಯಾಪ್ತಿಯಲ್ಲಿ ಇರುವ ಮಲ್ಟಿಪ್ಲೆಕ್ಸ್​ಗಳಿಗೆ ಟಿಕೆಟ್​ ಮೊತ್ತ 75 ರೂಪಾಯಿ ಕನಿಷ್ಠ ಹಾಗೂ 250 ಗರಿಷ್ಟ ಮೊತ್ತ ನಿಗದಿ ಮಾಡಿದೆ. ಎಸಿ ಹಾಗೂ ಎಸಿ ರಹಿತ ಚಿತ್ರಮಂದಿರಗಳ ಟಿಕೆಟ್​ ದರ 20-100 ರೂ ಅಂತರದಲ್ಲಿ ಇರಬೇಕು. ಪಂಚಾಯತ್​ ಭಾಗದಲ್ಲಿ ಟಿಕೆಟ್ ಕನಿಷ್ಠ ದರ 20 ರೂಪಾಯಿಗೂ ಕಡಿಮೆ ಇಡಲು ಸೂಚಿಸಲಾಗಿದೆ. ಇದು ಸಿನಿಮಾ ಕಲೆಕ್ಷನ್​ಗೆ ಹೊಡೆತ ನೀಡುತ್ತಿದೆ. ಈ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.

ಚಿರಂಜೀವಿ, ಪ್ರಭಾಸ್​, ಮಹೇಶ್​ ಬಾಬು, ರಾಜಮೌಳಿ, ಕೊರಟಾಲ ಶಿವ, ನಿರಂಜನ್​ ರೆಡ್ಡಿ ಮೊದಲಾದವರು ಇಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್​. ಜಗನ್​ ಮೋಹನ್​ ರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ.  ಟಿಕೆಟ್​ ದರ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮಿತಿ ಒಂದನ್ನು ರಚನೆ ಮಾಡಿದೆ. ಆ ಸಮಿತಿ ಟಿಕೆಟ್​ ದರದ ಬಗ್ಗೆ ಅಧ್ಯಯನ ನಡೆಸುತ್ತಿದೆ. ಸಿಎಂ ಜಗನ್​ ಅವರು ಈ ವಿಚಾರದಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಸಭೆಗೆ ಅಕ್ಕಿನೇನಿ ನಾಗಾರ್ಜುನ ಗೈರು

ಅಕ್ಕಿನೇನಿ ನಾಗಾರ್ಜುನ ಅವರು ಸಭೆಗೆ ಆಗಮಿಸಿರಲಿಲ್ಲ. ಇದಕ್ಕೆ ಕಾರಣವೂ ಇದೆ. ಅವರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಹೀಗಾಗಿ, ಮನೆಯಲ್ಲೇ ಅವರು ಕ್ವಾರಂಟೈನ್​ ಆಗಿದ್ದಾರೆ. ಈ ಮೊದಲು ಅವರು ಟಿಕೆಟ್​ ದರದ ವಿಚಾರದಲ್ಲಿ ನೀಡಿದ್ದ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು.

ನಾಗಾರ್ಜುನ ನಟನೆಯ ‘ಬಂಗಾರ್ರಾಜು’ ಚಿತ್ರ ಜನವರಿ 14ರಂದು ತೆರೆಗೆ ಬಂದಿದೆ. ಈ ಸಿನಿಮಾ ರಿಲೀಸ್​ಗೂ ಮೊದಲು ಮಾತನಾಡಿರುವ ಅವರು, ‘ಈ ದರದಿಂದ ನಮ್ಮ ಸಿನಿಮಾಗೆ ಯಾವುದೇ ತೊಂದರೆ ಆಗುವುದಿಲ್ಲ’ ಎಂದಿದ್ದರು. ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುತ್ತಿರುವಾಗ ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ ಎನ್ನುವ ಮಾತು ಕೇಳಿ ಬಂದಿತ್ತು. ಇದರಲ್ಲಿ ನಾಗಾರ್ಜುನ ಅವರ ಸ್ವಾರ್ಥ ಇದೆ ಎಂದು ಕೆಲವರು ಹೇಳಿದ್ದರು. ಅಭಿಮಾನಿಗಳು ಕೂಡ ಅಸಮಾಧಾನ ಹೊರಹಾಕಿದ್ದರು.

ಇದನ್ನೂ ಓದಿ: ಅಲ್ಲು ಅರ್ಜುನ್​ ಜತೆ ರನ್ನಿಂಗ್​ ರೇಸ್​ಗೆ ಇಳಿದ ಮಗಳು ಅಲ್ಲು ಅರ್ಹಾ; ವೈರಲ್​ ಆಯ್ತು ವಿಡಿಯೋ

‘ಸಮಂತಾ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಿಲ್ಲ’; ಕಿಡಿಕಾರಿದ ಅಕ್ಕಿನೇನಿ ನಾಗಾರ್ಜುನ