AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಹೊಸ ಸೀಸನ್​ನಲ್ಲಿ ರವಿಚಂದ್ರನ್​ ಸಿನಿಮಾ ನಾಯಕಿ? ಕೇಳಿಬರ್ತಿದೆ ಸ್ಟಾರ್ ನಟಿ ಹೆಸರು

Bigg Boss: ಇಂದ್ರಜಿತ್​ ಲಂಕೇಶ್​ ನಿರ್ದೇಶನ ಮಾಡಿದ್ದ ಲವ್​ ಯೂ ಆಲಿಯಾ ಸಿನಿಮಾದಲ್ಲಿ ಭೂಮಿಕಾ ಚಾವ್ಲಾ ಬಣ್ಣ ಹಚ್ಚಿದ್ದರು. ಆ ಚಿತ್ರದಲ್ಲಿ ಅವರು ರವಿಚಂದ್ರನ್​ಗೆ ಜೋಡಿಯಾಗಿ ಅಭಿನಯಿಸಿದ್ದರು.

ಬಿಗ್​ ಬಾಸ್​ ಹೊಸ ಸೀಸನ್​ನಲ್ಲಿ ರವಿಚಂದ್ರನ್​ ಸಿನಿಮಾ ನಾಯಕಿ? ಕೇಳಿಬರ್ತಿದೆ ಸ್ಟಾರ್ ನಟಿ ಹೆಸರು
ರವಿಚಂದ್ರನ್​, ಭೂಮಿಕಾ ಚಾವ್ಲಾ, ಬಿಗ್​ ಬಾಸ್​
ಮದನ್​ ಕುಮಾರ್​
|

Updated on: Jun 05, 2021 | 12:46 PM

Share

ಈ ವರ್ಷ ಕೊರೊನಾ ವೈರಸ್​ ಹಾವಳಿ ಹೆಚ್ಚಾಗಿದ್ದರಿಂದ ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಅರ್ಧಕ್ಕೆ ನಿಲ್ಲಬೇಕಾಯಿತು. ಮಲಯಾಂಳ ಬಿಗ್​ ಬಾಸ್​ ಕಾರ್ಯಕ್ರಮಕ್ಕೂ ಅದೇ ಪರಿಸ್ಥಿತಿ ಬಂತು. ಎಲ್ಲ ಭಾಷೆಯಲ್ಲೂ ಈ ರಿಯಾಲಿಟಿ ಶೋಗೆ ದೊಡ್ಡ ಪ್ರೇಕ್ಷಕ ವರ್ಗವಿದೆ. ಹಿಂದಿಯಲ್ಲಿ ಈಗಾಗಲೇ ಯಶಸ್ವಿಯಾಗಿ 14 ಸೀಸನ್​ಗಳನ್ನು ಮುಗಿಸಲಾಗಿದೆ. ಈಗ 15ನೇ ಆವೃತ್ತಿಗೆ ಸಿದ್ಧತೆಗಳು ನಡೆಯುತ್ತಿವೆ. ಹೊಸ ಸೀಸನ್​ನಲ್ಲಿ ಯಾರೆಲ್ಲ ಭಾಗವಹಿಸಬಹುದು ಎಂಬ ಬಗ್ಗೆ ಈಗಾಗಲೇ ಗುಗುಸಗು ಕೇಳಿಬರಲಾರಂಭಿಸಿದೆ.

ಬಾಲಿವುಡ್​ ಸ್ಟಾರ್​ ನಟ ಸಲ್ಮಾನ್​ ಖಾನ್​ ನಡೆಸಿಕೊಡುವ ಈ ಶೋನಲ್ಲಿ ಸ್ಪರ್ಧಿಸಲು ಈಗಾಗಲೇ ಹಲವು ಸೆಲೆಬ್ರಿಟಿಗಳಿಗೆ ಆಫರ್​ ಮಾಡಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ಸುಶಾಂತ್​ ಸಿಂಗ್​ ರಜಪೂತ್​ ಪ್ರೇಯಸಿ ರಿಯಾ ಚಕ್ರವರ್ತಿಯ ಹೆಸರು ಹೇಳಿಬಂದಿತ್ತು. ಈಗ ಅನುಭವಿ ನಟಿ ಭೂಮಿಕಾ ಚಾವ್ಲಾ ಬಗ್ಗೆ ಕೂಡ ಸುದ್ದಿ ಹರಿದಾಡುತ್ತಿದೆ. ಬಿಗ್​ ಬಾಸ್​ ಹಿಂದಿ ಸೀಸನ್​ 15ರಲ್ಲಿ ಭೂಮಿಕಾ ಚಾವ್ಲಾ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಗ್​ ಬಾಸ್​ ಆಯೋಜಕರು ಈಗಾಗಲೇ ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

2000ನೇ ಇಸವಿಯಲ್ಲಿ ಟಾಲಿವುಡ್​ನಿಂದ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಭೂಮಿಕಾ ಚಾವ್ಲಾ ಅವರು ನಂತರ ತಮಿಳು, ಹಿಂದಿಯಲ್ಲೂ ಫೇಮಸ್​ ಆದರು. ಸಲ್ಮಾನ್​ ಖಾನ್​ ನಟನೆಯ ‘ತೆರೆ ನಾಮ್​’ ಸಿನಿಮಾದಲ್ಲಿ ಅವರು ನಾಯಕಿ ಆಗಿದ್ದರು. ಆ ಚಿತ್ರದಿಂದ ಅವರ ಜನಪ್ರಿಯತೆ ದುಪ್ಪಟ್ಟಾಯಿತು. ಈಗ ಸಲ್ಲು ನಡೆಸಿಕೊಡುವ ಶೋನಲ್ಲಿ ಅವರು ಕಂಟೆಸ್ಟೆಂಟ್​ ಆಗಿ ಭಾಗವಹಿಸಿದರೆ ಶೋ ಮೆರುಗು ಹೆಚ್ಚುವುದು ಗ್ಯಾರಂಟಿ.

ಇಂದ್ರಜಿತ್​ ಲಂಕೇಶ್​ ನಿರ್ದೇಶನ ಮಾಡಿದ್ದ ‘ಲವ್​ ಯೂ ಆಲಿಯಾ’ ಸಿನಿಮಾದಲ್ಲಿ ಭೂಮಿಕಾ ಚಾವ್ಲಾ ಬಣ್ಣ ಹಚ್ಚಿದ್ದರು. ಆ ಚಿತ್ರದಲ್ಲಿ ಅವರು ರವಿಚಂದ್ರನ್​ಗೆ ಜೋಡಿಯಾಗಿ ಅಭಿನಯಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ಪೋಷಕ ಪಾತ್ರಗಳನ್ನು ಮಾಡುತ್ತಿರುವ ಅವರು ಬಿಗ್​ ಬಾಸ್​ಗೆ ಆಗಮಿಸಿದರೆ ಚೆನ್ನಾಗಿರುತ್ತದೆ ಎಂಬ ಅಭಿಪ್ರಾಯ ನೆಟ್ಟಿಗರಿಂದ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಪ್ರತಿ ಸೀಸನ್​ನಲ್ಲೂ ಘಟಾನುಘಟಿಗಳನ್ನು ಕರೆದುಕೊಂಡು ಬರಬೇಕು ಎಂದು ಬಿಗ್​ ಬಾಸ್​ ಆಯೋಜಕರು ಪ್ರಯತ್ನ ನಡೆಸುತ್ತಾರೆ. ಕಳೆದ ವರ್ಷ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ನಡುವೆಯೇ ಹಿಂದಿ ಬಿಗ್​ ಬಾಸ್​ ನಡೆದಿತ್ತು. ಈಗ ಸದ್ಯ ಎರಡನೇ ಅಲೆ ಕಾಟ ಕೊಡುತ್ತಿರುವುದರಿಂದ ಎಲ್ಲ ರಿಯಾಲಿಟಿ ಶೋ, ಸಿನಿಮಾ, ಧಾರಾವಾಹಿ ಶೂಟಿಂಗ್​ಗೆ ಬ್ರೇಕ್​ ಹಾಕಲಾಗಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಸ್ಪರ್ಧಿ ಜೊತೆ ಫೋಟೋಗಾಗಿ ಮಹಡಿಯಿಂದ ಜಿಗಿದ ಹುಡುಗಿ; ಮುಂದೇನಾಯ್ತು?

ಪ್ರಭಾಸ್​ ಸಿನಿಮಾದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಅವಕಾಶ? ಜೋರಾಗಿ ಹಬ್ಬಿದ್ದ ಗಾಸಿಪ್​ನ ಅಸಲಿಯತ್ತು ಇಲ್ಲಿದೆ

Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ