Valimai: ಬೈಕ್​ ಸ್ಟಂಟ್​ ಮಾಡುತ್ತ ಫ್ಯಾನ್ಸ್​ ಎದೆಬಡಿತ ಹೆಚ್ಚಿಸಿದ ಅಜಿತ್​; ಹೇಗಿದೆ ಗೊತ್ತಾ ‘ವಲಿಮೈ’ ಝಲಕ್​​?

Ajith Kumar: ‘ವಲಿಮೈ’ ಚಿತ್ರದಲ್ಲಿ ಅಜಿತ್​ ಸಿಕ್ಕಾಪಟ್ಟೆ ಆ್ಯಕ್ಷನ್​ ಮಾಡಿದ್ದಾರೆ. ಸಾಹಸ ದೃಶ್ಯಗಳೇ ಈ ಸಿನಿಮಾದಲ್ಲಿ ಹೈಲೈಟ್​ ಆಗಿರಲಿವೆ ಎಂಬುದಕ್ಕೆ ವಿಡಿಯೋ​ ಮೂಲಕ ಸಾಕ್ಷಿ ಸಿಕ್ಕಿದೆ. ಅಜಿತ್​ ವಿಶೇಷವಾಗಿ ಬೈಕ್​ ಸ್ಟಂಟ್​ ಮಾಡಿದ್ದಾರೆ.

Valimai: ಬೈಕ್​ ಸ್ಟಂಟ್​ ಮಾಡುತ್ತ ಫ್ಯಾನ್ಸ್​ ಎದೆಬಡಿತ ಹೆಚ್ಚಿಸಿದ ಅಜಿತ್​; ಹೇಗಿದೆ ಗೊತ್ತಾ ‘ವಲಿಮೈ’ ಝಲಕ್​​?
‘ವಲಿಮೈ’ ಚಿತ್ರದಲ್ಲಿ ಅಜಿತ್​ ಕುಮಾರ್​
Follow us
| Updated By: ಮದನ್​ ಕುಮಾರ್​

Updated on: Sep 24, 2021 | 8:27 AM

ನಟ ಅಜಿತ್​ ಅಜಿತ್​ ಕುಮಾರ್​ ಅಭಿಮಾನಿಗಳು ಬಹುಕಾಲದಿಂದ ‘ವಲಿಮೈ’ ಚಿತ್ರದ ಅಪ್​ಡೇಟ್​ಗಾಗಿ ಕಾಯುತ್ತಿದ್ದರು. ಸೋಶಿಯಲ್​ ಮೀಡಿಯಾ ಮೂಲಕ ಪದೇಪದೇ ನಿರ್ಮಾಪಕ ಬೋನಿ ಕಪೂರ್​ಗೆ ಒತ್ತಾಯ ಹೇರುತ್ತಿದ್ದರು. ಅಂತಹ ಎಲ್ಲ ಅಪ್ಪಟ ಅಭಿಮಾನಿಗಳಿಗೆ ಚಿತ್ರತಂಡದ ಕಡೆಯಿಂದ ಈಗ ಒಂದು ಅಪ್​ಡೇಟ್​ ಸಿಕ್ಕಿದೆ. ಟೀಸರ್ ರೀತಿಯ​ ಚಿಕ್ಕ ತುಣುಕು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗೆಗಿನ ಕ್ರೇಜ್​ ಹೆಚ್ಚಿಸಲಾಗಿದೆ. ಅಲ್ಲದೇ ‘ವಲಿಮೈ’ ರಿಲೀಸ್​ ದಿನಾಂಕ ಕೂಡ ಅನೌನ್ಸ್​ ಮಾಡಲಾಗಿದೆ. 2022ರ ಸಂಕ್ರಾಂತಿ ಹಬ್ಬಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ.

ಅಜಿತ್​ ಕುಮಾರ್​ಗೆ ತಮಿಳುನಾಡಿನಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಅಭಿಮಾನಿಗಳಿದ್ದಾರೆ. 2019ರ ಆಗಸ್ಟ್​ನಲ್ಲಿ ಬಿಡುಗಡೆಯಾದ ‘ನೇರ್ಕೊಂಡ ಪಾರ್ವೈ’ ಬಳಿಕ ಅವರ ಬೇರೆ ಯಾವುದೇ ಸಿನಿಮಾ ತೆರೆಕಂಡಿಲ್ಲ. ಹಾಗಾಗಿ ಅಜಿತ್​ ಅವರನ್ನು ದೊಡ್ಡ ಪರದೆ ಮೇಲೆ ನೋಡಲು ಫ್ಯಾನ್ಸ್​ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಆದಷ್ಟು ಬೇಗ ‘ವಲಿಮೈ’ ಬಿಡುಗಡೆಯಾಗಲಿ ಎಂದು ಹಂಬಲಿಸುತ್ತಿದ್ದ ಅಭಿಮಾನಿಗಳಿಗೆಲ್ಲ ಈ ವಿಡಿಯೋ ತುಣುಕಿನ​ ಮೂಲಕ ಸಿಹಿ ಸುದ್ದಿ ನೀಡಲಾಗಿದೆ. ಈ ಸಿನಿಮಾದಲ್ಲಿ ಆ್ಯಕ್ಷನ್​ ಹೇಗಿರಲಿದೆ ಎಂಬುದರ ಝಲಕ್​ ಕೂಡ ಈ ವಿಡಿಯೋದಲ್ಲಿ ತೋರಿಸಲಾಗಿದೆ.

‘ವಲಿಮೈ’ ಚಿತ್ರದಲ್ಲಿ ಅಜಿತ್​ ಸಿಕ್ಕಾಪಟ್ಟೆ ಆ್ಯಕ್ಷನ್​ ಮಾಡಿದ್ದಾರೆ. ಸಾಹಸ ದೃಶ್ಯಗಳೇ ಸಿನಿಮಾದ ಹೈಲೈಟ್​ ಆಗಿರಲಿವೆ ಎಂಬುದಕ್ಕೆ ವಿಡಿಯೋ​ ಮೂಲಕ ಸಾಕ್ಷಿ ಸಿಕ್ಕಿದೆ. ಅದರಲ್ಲೂ ಅಜಿತ್​ ವಿಶೇಷವಾಗಿ ಬೈಕ್​ ಸ್ಟಂಟ್​ ಮಾಡಿದ್ದಾರೆ. ಅದನ್ನು ಕಂಡರೆ ಮೈನವಿರೇಳುವಂತಿದೆ. ದೊಡ್ಡ ಪರದೆಯಲ್ಲಿ ಈ ಸಾಹಸ ದೃಶ್ಯಗಳನ್ನು ನೋಡಿದರೆ ಪ್ರೇಕ್ಷಕರ ಎದೆಬಡಿತ ಹೆಚ್ಚುವುದು ಗ್ಯಾರಂಟಿ. ಯೂಟ್ಯೂಬ್​ನಲ್ಲಿ​ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 52 ಲಕ್ಷಕ್ಕೂ ಅಧಿಕ ಬಾರಿ ಈ ವಿಡಿಯೋ ವೀಕ್ಷಣೆ ಕಂಡಿದೆ. ಇದನ್ನು ಚಿತ್ರತಂಡ ಟೀಸರ್​ ಎಂದು ಕರೆದಿಲ್ಲ. ಮುಂದಿನ ದಿನಗಳಲ್ಲಿ ಟೀಸರ್​ ಮತ್ತು ಟ್ರೇಲರ್​ ಬಿಡುಗಡೆ ಆಗಲಿದೆ. ಅದಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

‘ನೇರ್ಕೊಂಡ ಪಾರ್ವೈ’ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದ ಎಚ್​. ವಿನೋದ್​ ಅವರೇ ‘ವಲಿಮೈ’ ಚಿತ್ರಕ್ಕೂ ನಿರ್ದೇಶನ ಮಾಡಿದ್ದಾರೆ. ಬೋನಿ ಕಪೂರ್​ ಬಂಡವಾಳ ಹೂಡಿದ್ದಾರೆ. ಹಾಗಾಗಿ ಈ ಕಾಂಬಿನೇಷನ್​ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ನಾಯಕಿಯಾಗಿ ಹುಮಾ ಖುರೇಶಿ ನಟಿಸಿದ್ದಾರೆ.

ಇದನ್ನೂ ಓದಿ:

Ajith Kumar: ನಟ ಅಜಿತ್​ ಮನೆಗೆ ಬಾಂಬ್​ ಬೆದರಿಕೆ ಕರೆ; ಪೊಲೀಸ್​ ತಪಾಸಣೆಯಿಂದ ಬಯಲಾದ ಸತ್ಯವೇನು?

Viral Video: ಚೆನ್ನೈನಲ್ಲಿ ಆಟೋದಲ್ಲಿ ಪ್ರಯಾಣಿಸಿದ ಸ್ಟಾರ್​ ನಟನ ಸರಳತೆ ನೋಡಿ ಅಭಿಮಾನಿಗಳು ಫುಲ್​ ಖುಷ್​

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ