AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್​ ಲುಕ್​ನಲ್ಲಿ ಬಂದ ರಜನಿಕಾಂತ್; 169ನೇ ಚಿತ್ರದಲ್ಲಿ ಸೂಪರ್​ ಸ್ಟಾರ್​ ಲುಕ್​ ನೋಡಿ ಫ್ಯಾನ್ಸ್​ ಫಿದಾ

ನೆಲ್ಸನ್​ ದಿಲೀಪ್​ ಕುಮಾರ್ ಅವರು ‘ಬೀಸ್ಟ್’ ಚಿತ್ರದ ಕೊನೆಯ ಹಂತದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಈ ಮೊದಲು ‘ಡಾಕ್ಟರ್​​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಅವರು ರಜನಿಕಾಂತ್​ ಜತೆ ಈಗ ಕೈಜೋಡಿಸುತ್ತಿದ್ದಾರೆ ಅನ್ನೋದು ವಿಶೇಷ. ಈ

ಮಾಸ್​ ಲುಕ್​ನಲ್ಲಿ ಬಂದ ರಜನಿಕಾಂತ್; 169ನೇ ಚಿತ್ರದಲ್ಲಿ ಸೂಪರ್​ ಸ್ಟಾರ್​ ಲುಕ್​ ನೋಡಿ ಫ್ಯಾನ್ಸ್​ ಫಿದಾ
ರಜನಿ ಹೊಸ ಸಿನಿಮಾ ಪೋಸ್ಟರ್​
TV9 Web
| Edited By: |

Updated on: Feb 10, 2022 | 7:49 PM

Share

ಇತ್ತೀಚೆಗೆ ತೆರೆಗೆ ಬಂದ ‘ಸೂಪರ್​ ಸ್ಟಾರ್​’ ರಜನಿಕಾಂತ್ (Rajanikanth) ​​ ನಟನೆಯ ‘ಅಣ್ಣಾಥೆ’ ಚಿತ್ರ (Annaatthe Movie) ಸೂಪರ್ ಹಿಟ್​ ಆಗಿತ್ತು. ಈಗ ರಜನಿಕಾಂತ್ ನಟನೆಯ 169ನೇ ಸಿನಿಮಾ ಬಗ್ಗೆ ಚರ್ಚೆಗಳು ಹುಟ್ಟಿಕೊಂಡಿದ್ದವು. ಈ ಬಗ್ಗೆ ಅನೇಕ ವರದಿಗಳು ಪ್ರಕಟಗೊಂಡಿದ್ದವು. ಈಗ ಅದು ನಿಜವಾಗಿದೆ. ರಜನಿ ಮುಂದಿನ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ರಜನಿಕಾಂತ್​ ಅವರು ಮಾಸ್​ ಲುಕ್​ನಲ್ಲಿರುವ ಪೋಸ್ಟರ್​ ಸಖತ್​ ವೈರಲ್​ ಆಗುತ್ತಿದೆ. ಸ್ಮಗ್ಲಿಂಗ್​ ಕಥೆಯ ಸುತ್ತ ಸಿನಿಮಾದ ಕಥೆ ಸಾಗಲಿದೆ ಎನ್ನಲಾಗುತ್ತಿದೆ. ಈ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ. ಈ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ನೆಲ್ಸನ್​ ದಿಲೀಪ್​ ಕುಮಾರ್ () ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದು, ಅನಿರುದ್ಧ ರವಿಚಂದರ್​ ಸಂಗೀತ ಚಿತ್ರಕ್ಕಿರಲಿದೆ.

ನೆಲ್ಸನ್​ ದಿಲೀಪ್​ ಕುಮಾರ್ ಅವರು ‘ಬೀಸ್ಟ್’ ಚಿತ್ರದ ಕೊನೆಯ ಹಂತದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುವ ನಿರೀಕ್ಷೆ ಇದೆ. ನೆಲ್ಸನ್​ ದಿಲೀಪ್​ ಅವರು ಈ ಮೊದಲು ‘ಡಾಕ್ಟರ್​​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಅವರು ರಜನಿಕಾಂತ್​ ಜತೆ ಈಗ ಕೈಜೋಡಿಸುತ್ತಿದ್ದಾರೆ ಅನ್ನೋದು ವಿಶೇಷ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಹೀಗಾಗಿ, ತಾತ್ಕಾಲಿಕವಾಗಿ ‘ಥಲೈವರ್​ 169’ ಎಂದು ಕರೆಯಲಾಗುತ್ತಿದೆ.

ಚಿಕ್ಕ ವಿಡಿಯೋ ತುಣುಕನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮೊದಲಿಗೆ ಅನಿರುದ್ಧ ಅವರನ್ನು ತೋರಿಸಿದರೆ ಆ ಬಳಿಕ ನೆಲ್ಸನ್​ ಅವರನ್ನು ತೋರಿಸಲಾಗಿದೆ. ರಜನಿಕಾಂತ್​ ಅವರು ಸ್ಟೈಲಿಶ್​ ಆಗಿ ಕನ್ನಡಕ ಧರಿಸಿ ಮಿಂಚಿದ್ದಾರೆ. ಇದು ವಿಶಿಷ್ಟವಾದ ಸಿನಿಮಾ ಆಗಿರಲಿದ್ದು, ಏಪ್ರಿಲ್ ಅಂತ್ಯ/ಮೇ ಆರಂಭದಲ್ಲಿ ಚಿತ್ರ ಸೆಟ್ಟೇರಲಿದೆ. ಆ ನಂತರ ವೇಗವಾಗಿ ಶೂಟಿಂಗ್​ ಪೂರ್ಣಗೊಳಿಸಿ, ಮುಂದಿನ ವರ್ಷದ ಸಂಕ್ರಾಂತಿ ವೇಳೆಗೆ ಸಿನಿಮಾ ತೆರೆಗೆ ತರುವ ಆಲೋಚನೆಯಲ್ಲಿ ಚಿತ್ರ ತಂಡ ಇದೆ ಎಂದು ವರದಿ ಆಗಿದೆ.

ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಲಿದ್ದು, ಅನಿರುದ್ಧ್ ಸಂಗೀತ ಮತ್ತು ಹಿನ್ನೆಲೆ ಸಂಗೀತವನ್ನು ಮಾಡಲಿದ್ದಾರೆ. ಈ ಚಿತ್ರಕ್ಕೆ ನಾಯಕಿ ಯಾರು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಧನುಷ್​ ಒಳ್ಳೆಯ ಅಳಿಯ’ ಎಂದು ಮಗಳ ಗಂಡನನ್ನು ರಜನಿಕಾಂತ್​ ಹೊಗಳಿದ್ದ ವಿಡಿಯೋ ವೈರಲ್​

ಡಿವೋರ್ಸ್​ ಬಳಿಕ ರಜನಿ ಪುತ್ರಿಗೆ ಮತ್ತೆ ಕಂಟಕ; ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ ರಜನಿಕಾಂತ್​

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ