AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೈವಿ ರಿಲೀಸ್​ಗೂ ಮುನ್ನ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟ ಕಂಗನಾ ರಣಾವತ್​

ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ.

ತಲೈವಿ ರಿಲೀಸ್​ಗೂ ಮುನ್ನ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟ ಕಂಗನಾ ರಣಾವತ್​
ನಟಿ ಕಂಗನಾ
ರಾಜೇಶ್ ದುಗ್ಗುಮನೆ
|

Updated on: Apr 09, 2021 | 9:39 PM

Share

ಕೊರೊನಾ ವೈರಸ್​ ಎರಡನೇ ಅಲೆಗೆ ಸಿನಿಮಾ ರಂಗ ಮತ್ತೆ ತೊಂದರೆಗೆ ಸಿಲುಕಿದೆ. ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಇದರಿಂದಾಗಿ ಅನೇಕ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿದೆ. ಈಗ ಈ ಸಾಲಿಗೆ ಕಂಗನಾ ರಣಾವತ್​ ನಟನೆಯ ತಲೈವಿ ಸಿನಿಮಾ ಹೊಸ ಸೇರ್ಪಡೆ. ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ. ಎಂ.ಜಿ.ಆರ್​. ಪಾತ್ರದಲ್ಲಿ ಅರವಿಂದ್​ ಸ್ವಾಮಿ ಹಾಗೂ ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್​ ಬಣ್ಣ ಹಚ್ಚಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡಿದ್ದರು ಎನ್ನುವುದು ವಿಶೇಷ. ಈ ಎಲ್ಲಾ ಕಾರಣಕ್ಕಾಗಿ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ, ಈಗ ಚಿತ್ರತಂಡ ಶುಕ್ರವಾರ ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವ ಬಗ್ಗೆ ಘೋಷಣೆ ಮಾಡಿದೆ.

ನಾವು ಈ ಸಿನಿಮಾ ಮಾಡೋಕೆ ತುಂಬಾನೇ ಶ್ರಮ ಹಾಕಿದ್ದೇವೆ. ಸಿನಿಮಾ ತಂಡದಲ್ಲಿರುವ ಪ್ರತಿ ಸದಸ್ಯರು ಈ ಸಿನಿಮಾಗಾಗಿ ದುಡಿದಿದ್ದಾರೆ. ಬೇರೆ ಬೇರೆ ಭಾಷೆಗಳಲ್ಲಿ ನಾವು ಸಿನಿಮಾವನ್ನು ತೆರೆಗೆ ತರುತ್ತಿದ್ದೇವೆ. ಆದರೆ, ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ, ಚಿತ್ರತಂಡದ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಏಪ್ರಿಲ್​ 23ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಸರ್ಕಾರದ ಕೆಲ ನಿರ್ಬಂಧಗಳಿಂದ ಸಿನಿಮಾ ಮುಂದೂಡಿದ್ದೇವೆ ಎಂದು ಟ್ವೀಟ್​ ಮಾಡಲಾಗಿದೆ.

ಸದ್ಯ, ಚಿತ್ರತಂಡದಿಂದ ಮುಂದಿನ ರಿಲೀಸ್​ ದಿನಾಂಕ ಯಾವಾಗ ಎಂಬುದು ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಕೊರೊನಾ ಪ್ರಕರಣಗಳು ಕಡಿಮೆ ಆದ ನಂತರದಲ್ಲಿ ಸಿನಿಮಾ ತೆರೆಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?

 

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ