Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೈವಿ ರಿಲೀಸ್​ಗೂ ಮುನ್ನ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟ ಕಂಗನಾ ರಣಾವತ್​

ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ.

ತಲೈವಿ ರಿಲೀಸ್​ಗೂ ಮುನ್ನ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟ ಕಂಗನಾ ರಣಾವತ್​
ನಟಿ ಕಂಗನಾ
Follow us
ರಾಜೇಶ್ ದುಗ್ಗುಮನೆ
|

Updated on: Apr 09, 2021 | 9:39 PM

ಕೊರೊನಾ ವೈರಸ್​ ಎರಡನೇ ಅಲೆಗೆ ಸಿನಿಮಾ ರಂಗ ಮತ್ತೆ ತೊಂದರೆಗೆ ಸಿಲುಕಿದೆ. ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಇದರಿಂದಾಗಿ ಅನೇಕ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿದೆ. ಈಗ ಈ ಸಾಲಿಗೆ ಕಂಗನಾ ರಣಾವತ್​ ನಟನೆಯ ತಲೈವಿ ಸಿನಿಮಾ ಹೊಸ ಸೇರ್ಪಡೆ. ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ. ಎಂ.ಜಿ.ಆರ್​. ಪಾತ್ರದಲ್ಲಿ ಅರವಿಂದ್​ ಸ್ವಾಮಿ ಹಾಗೂ ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್​ ಬಣ್ಣ ಹಚ್ಚಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡಿದ್ದರು ಎನ್ನುವುದು ವಿಶೇಷ. ಈ ಎಲ್ಲಾ ಕಾರಣಕ್ಕಾಗಿ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ, ಈಗ ಚಿತ್ರತಂಡ ಶುಕ್ರವಾರ ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವ ಬಗ್ಗೆ ಘೋಷಣೆ ಮಾಡಿದೆ.

ನಾವು ಈ ಸಿನಿಮಾ ಮಾಡೋಕೆ ತುಂಬಾನೇ ಶ್ರಮ ಹಾಕಿದ್ದೇವೆ. ಸಿನಿಮಾ ತಂಡದಲ್ಲಿರುವ ಪ್ರತಿ ಸದಸ್ಯರು ಈ ಸಿನಿಮಾಗಾಗಿ ದುಡಿದಿದ್ದಾರೆ. ಬೇರೆ ಬೇರೆ ಭಾಷೆಗಳಲ್ಲಿ ನಾವು ಸಿನಿಮಾವನ್ನು ತೆರೆಗೆ ತರುತ್ತಿದ್ದೇವೆ. ಆದರೆ, ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ, ಚಿತ್ರತಂಡದ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಏಪ್ರಿಲ್​ 23ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಸರ್ಕಾರದ ಕೆಲ ನಿರ್ಬಂಧಗಳಿಂದ ಸಿನಿಮಾ ಮುಂದೂಡಿದ್ದೇವೆ ಎಂದು ಟ್ವೀಟ್​ ಮಾಡಲಾಗಿದೆ.

ಸದ್ಯ, ಚಿತ್ರತಂಡದಿಂದ ಮುಂದಿನ ರಿಲೀಸ್​ ದಿನಾಂಕ ಯಾವಾಗ ಎಂಬುದು ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಕೊರೊನಾ ಪ್ರಕರಣಗಳು ಕಡಿಮೆ ಆದ ನಂತರದಲ್ಲಿ ಸಿನಿಮಾ ತೆರೆಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?

 

ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ