AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೈವಿ ರಿಲೀಸ್​ಗೂ ಮುನ್ನ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟ ಕಂಗನಾ ರಣಾವತ್​

ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ.

ತಲೈವಿ ರಿಲೀಸ್​ಗೂ ಮುನ್ನ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟ ಕಂಗನಾ ರಣಾವತ್​
ನಟಿ ಕಂಗನಾ
ರಾಜೇಶ್ ದುಗ್ಗುಮನೆ
|

Updated on: Apr 09, 2021 | 9:39 PM

Share

ಕೊರೊನಾ ವೈರಸ್​ ಎರಡನೇ ಅಲೆಗೆ ಸಿನಿಮಾ ರಂಗ ಮತ್ತೆ ತೊಂದರೆಗೆ ಸಿಲುಕಿದೆ. ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಇದರಿಂದಾಗಿ ಅನೇಕ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿದೆ. ಈಗ ಈ ಸಾಲಿಗೆ ಕಂಗನಾ ರಣಾವತ್​ ನಟನೆಯ ತಲೈವಿ ಸಿನಿಮಾ ಹೊಸ ಸೇರ್ಪಡೆ. ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ. ಎಂ.ಜಿ.ಆರ್​. ಪಾತ್ರದಲ್ಲಿ ಅರವಿಂದ್​ ಸ್ವಾಮಿ ಹಾಗೂ ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್​ ಬಣ್ಣ ಹಚ್ಚಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡಿದ್ದರು ಎನ್ನುವುದು ವಿಶೇಷ. ಈ ಎಲ್ಲಾ ಕಾರಣಕ್ಕಾಗಿ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ, ಈಗ ಚಿತ್ರತಂಡ ಶುಕ್ರವಾರ ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವ ಬಗ್ಗೆ ಘೋಷಣೆ ಮಾಡಿದೆ.

ನಾವು ಈ ಸಿನಿಮಾ ಮಾಡೋಕೆ ತುಂಬಾನೇ ಶ್ರಮ ಹಾಕಿದ್ದೇವೆ. ಸಿನಿಮಾ ತಂಡದಲ್ಲಿರುವ ಪ್ರತಿ ಸದಸ್ಯರು ಈ ಸಿನಿಮಾಗಾಗಿ ದುಡಿದಿದ್ದಾರೆ. ಬೇರೆ ಬೇರೆ ಭಾಷೆಗಳಲ್ಲಿ ನಾವು ಸಿನಿಮಾವನ್ನು ತೆರೆಗೆ ತರುತ್ತಿದ್ದೇವೆ. ಆದರೆ, ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ, ಚಿತ್ರತಂಡದ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಏಪ್ರಿಲ್​ 23ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಸರ್ಕಾರದ ಕೆಲ ನಿರ್ಬಂಧಗಳಿಂದ ಸಿನಿಮಾ ಮುಂದೂಡಿದ್ದೇವೆ ಎಂದು ಟ್ವೀಟ್​ ಮಾಡಲಾಗಿದೆ.

ಸದ್ಯ, ಚಿತ್ರತಂಡದಿಂದ ಮುಂದಿನ ರಿಲೀಸ್​ ದಿನಾಂಕ ಯಾವಾಗ ಎಂಬುದು ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಕೊರೊನಾ ಪ್ರಕರಣಗಳು ಕಡಿಮೆ ಆದ ನಂತರದಲ್ಲಿ ಸಿನಿಮಾ ತೆರೆಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?

 

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ