AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಂಗನಾ ರಣಾವತ್​ ‘ತಲೈವಿ’ಗೆ ಐದು ರಾಷ್ಟ್ರ ಪ್ರಶಸ್ತಿ ಬರಲೇಬೇಕು, ಇಲ್ಲವಾದರೆ ಬೇಸರವಾಗುತ್ತದೆ’

ಈಗಾಗಲೇ ರಿಲೀಸ್​ ಆಗಿರುವ ಸಿನಿಮಾದ ಪೋಸ್ಟರ್​, ಟ್ರೇಲರ್​ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದಲ್ಲಿ ಜಯಲಲಿತಾ ರೀತಿಯಲ್ಲೇ ಕಾಣುತ್ತಿದ್ದಾರೆ ಕಂಗನಾ. ಇದು ಸಿನಿಮಾಗೆ ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

‘ಕಂಗನಾ ರಣಾವತ್​ ‘ತಲೈವಿ’ಗೆ ಐದು ರಾಷ್ಟ್ರ ಪ್ರಶಸ್ತಿ ಬರಲೇಬೇಕು, ಇಲ್ಲವಾದರೆ ಬೇಸರವಾಗುತ್ತದೆ’
ಕಂಗನಾ ರಣಾವತ್ ಅಭಿನಯದ ‘ತಲೈವಿ’
TV9 Web
| Edited By: |

Updated on: Sep 06, 2021 | 7:11 PM

Share

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜೀವನ ಆಧರಿಸಿ ‘ತಲೈವಿ’ ಸಿನಿಮಾ ಸಿದ್ಧಗೊಂಡಿದೆ. ಕೊವಿಡ್​ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಆದರೆ, ಈಗ ಸೆಪ್ಟೆಂಬರ್​ 10ರಂದು ಸಿನಿಮಾ ಎಲ್ಲೆಡೆ ಬಿಡುಗಡೆ ಆಗುತ್ತಿದೆ. ಬಾಲಿವುಡ್​ ನಟಿ ಕಂಗನಾ ಈ ಸಿನಿಮಾದಲ್ಲಿ ನಟಿಸಿದ್ದಾರೆ ಎಂಬುದು ಒಂದು ಕಡೆಯಾದರೆ, ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದ ಸಿಎಂ ಜಯಲಲಿತಾ ಜೀವನ ಆಧಾರಿತ ಸಿನಿಮಾ ಎಂಬುದು ಮತ್ತೊಂದು ಕಡೆ. ‘ತಲೈವಿ’ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದ್ದು, ಇದರ ರಿಲೀಸ್​ಗೆ ಅನೇಕರು ಕಾಯುತ್ತಿದ್ದಾರೆ. ಈ ಮಧ್ಯೆ ಸಿನಿಮಾದ ನಿರ್ಮಾಪಕರು, ‘ತಲೈವಿ’ ಸಿನಿಮಾಗೆ ಕನಿಷ್ಠ 5 ರಾಷ್ಟ್ರ ಪ್ರಶಸ್ತಿಗಳು ಬರಬೇಕು ಎಂದು ನಿರೀಕ್ಷಿಸುತ್ತಿದ್ದಾರೆ.

ತಮಿಳುನಾಡಿನಲ್ಲಿ ಅಮ್ಮ ಎಂದೇ ಖ್ಯಾತಿ ಪಡೆದವರು ಜಯಲಲಿತಾ. ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರು ಮೃತಪಟ್ಟಾಗ ಆದ ಶಾಕ್​ನಿಂದ ಅನೇಕರು ಆತ್ಮಹತ್ಯೆ ಮಾಡಿಕೊಂಡ ಉದಾಹರಣೆ ಕೂಡ ಇದೆ. ಈಗ ಅವರ ಜೀವನ ಆಧರಿಸಿ ಸಿನಿಮಾ ಸಿದ್ಧಗೊಂಡಿದ್ದು, ಜಯಲಲಿತಾ ಪಾತ್ರವನ್ನು ಕಂಗನಾ ನಿರ್ವಹಿಸಿದ್ದಾರೆ.

ಈಗಾಗಲೇ ರಿಲೀಸ್​ ಆಗಿರುವ ಸಿನಿಮಾದ ಪೋಸ್ಟರ್​, ಟ್ರೇಲರ್​ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದಲ್ಲಿ ಜಯಲಲಿತಾ ರೀತಿಯಲ್ಲೇ ಕಾಣುತ್ತಿದ್ದಾರೆ ಕಂಗನಾ. ಇದು ಸಿನಿಮಾಗೆ ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಸೆಪ್ಟೆಂಬರ್ 10 ಗಣೇಶ ಚತುರ್ಥಿ. ಈ ವಿಶೇಷ ದಿನದಂದೇ ಸಿನಿಮಾ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಚಿತ್ರತಂಡ ಹೈದರಾಬಾದ್​ನಲ್ಲಿ ಗ್ರ್ಯಾಂಡ್​ ಆಗಿ  ಪ್ರಿ-ರಿಲೀಸ್​ ಇವೆಂಟ್​ ಹಮ್ಮಿಕೊಂಡಿತ್ತು. ಚಿತ್ರದ ನಿರ್ಮಾಪಕ ವಿಷ್ಣು ವರ್ಧನ್​ ಇಂದುರಿ ಅವರು ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ವ್ಯಕ್ತಪಡಿಸಿದರು.

‘ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಸಿನಿಮಾ ಅದ್ಭುತವಾಗಿ ಮೂಡಿ ಬಂದಿದೆ. ಈ ಸಿನಿಮಾದಲ್ಲಿ ಕಂಗನಾ ನಟನೆ ಅದ್ಭುತವಾಗಿದೆ. ‘ತಲೈವಿ’ ಕನಿಷ್ಠ 5 ರಾಷ್ಟ್ರ ಪ್ರಶಸ್ತಿಗಳನ್ನು ಬಾಚಿಕೊಳ್ಳಬೇಕು. ಇಲ್ಲವಾದರೆ, ನನಗೆ ತುಂಬಾನೇ ಬೇಸರವಾಗುತ್ತದೆ’ ಎಂದರು.

ಕೊವಿಡ್​ ಎರಡನೇ ಅಲೆ ಮುಗಿಯುವ ಹಂತದಲ್ಲಿದೆ. ಈ ಮಧ್ಯೆ ಮೂರನೇ ಅಲೆ ಎದುರಾಗುವ ಭಯ ಕಾಡುತ್ತಿದೆ. ಈ ಕಾರಣಕ್ಕೆ ಅನೇಕ ರಾಜ್ಯಗಳಲ್ಲಿ ಇನ್ನೂ ಚಿತ್ರಮಂದಿರಗಳಲ್ಲಿ ಸಂಪೂರ್ಣ ಭರ್ತಿಗೆ ಅವಕಾಶ ನೀಡಿಲ್ಲ. ಈ ಮೊದಲು ರಿಲೀಸ್​ ಆದ ಅಕ್ಷಯ್​ ಕುಮಾರ್​ ನಟನೆಯ ‘ಬೆಲ್​ ಬಾಟಮ್​’ ಚಿತ್ರ ಉತ್ತಮ ವಿಮರ್ಶೆ ಪಡೆದುಕೊಂಡ ಹೊರತಾಗಿಯೂ ಬಾಕ್ಸ್​ ಆಫೀಸ್​ನಲ್ಲಿ ಗಳಿಕೆ ಮಾಡಿಲ್ಲ. ‘ತಲೈವಿ’ ಚಿತ್ರಕ್ಕೂ ಇದೇ ತೊಂದರೆ ಎದುರಾದರೂ ಅಚ್ಚರಿ ಇಲ್ಲ.

ಇದನ್ನೂ ಓದಿ: Thalaivii: ‘ತಲೈವಿ’ ಚಿತ್ರದ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಕಂಗನಾ; ಜಯಲಲಿತಾ ಸ್ಮಾರಕಕ್ಕೆ ಭೇಟಿ

Thalaivii: ಕಂಗನಾ ಆಕ್ರೋಶದ ನಂತರ ‘ತಲೈವಿ’ಯ ಪ್ರದರ್ಶನಕ್ಕೆ PVR ಒಪ್ಪಿಗೆ; ಆದರೂ ಬಗೆಹರಿದಿಲ್ಲ ಹಿಂದಿ ಆವೃತ್ತಿಯ ಸಮಸ್ಯೆ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ