AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಮ್’ ನಿರ್ದೇಶಕನ ಜತೆ ದಳಪತಿ ವಿಜಯ್ ಸಿನಿಮಾ; ‘ವಾರಿಸು’ ಗೆದ್ದ ಖುಷಿಯಲ್ಲಿ ಹೊಸ ಚಿತ್ರ ಘೋಷಣೆ  

Thalapathy 67: ದಳಪತಿ ವಿಜಯ್ ಅವರು ಸಾಕಷ್ಟು ವೇಗವಾಗಿ ಸಿನಿಮಾ ಕೆಲಸ ಮಾಡಿ ಮುಗಿಸುತ್ತಾರೆ. ‘ವಾರಿಸು’ ರಿಲೀಸ್ ಆದ 20 ದಿನಕ್ಕೆ ಅವರ ಹೊಸ ಸಿನಿಮಾ ಘೋಷಣೆ ಆಗಿದೆ.

‘ವಿಕ್ರಮ್’ ನಿರ್ದೇಶಕನ ಜತೆ ದಳಪತಿ ವಿಜಯ್ ಸಿನಿಮಾ; ‘ವಾರಿಸು’ ಗೆದ್ದ ಖುಷಿಯಲ್ಲಿ ಹೊಸ ಚಿತ್ರ ಘೋಷಣೆ  
ವಿಜಯ್ ಹಾಗೂ ಲೋಕೇಶ್
ರಾಜೇಶ್ ದುಗ್ಗುಮನೆ
|

Updated on:Jan 31, 2023 | 10:00 AM

Share

2022ರಲ್ಲಿ ರಿಲೀಸ್ ಆದ ಸೂಪರ್ ಹಿಟ್ ಚಿತ್ರಗಳ ಪೈಕಿ ‘ವಿಕ್ರಮ್’ (Vikram Movie) ಕೂಡ ಒಂದು. ಕಮಲ್ ಹಾಸನ್ ನಟನೆಯ ಈ ಚಿತ್ರಕ್ಕೆ ಲೋಕೇಶ್ ಕನಗರಾಜ್ (Lokesh Kanagaraj) ಅವರು ನಿರ್ದೇಶನ ಮಾಡಿದ್ದರು. ಈಗ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ದಳಪತಿ ವಿಜಯ್ ಅವರ 67ನೇ ಚಿತ್ರಕ್ಕೆ ಲೋಕೇಶ್ ನಿರ್ದೇಶನ ಮಾಡುತ್ತಾರೆ ಎನ್ನುವ ಸುದ್ದಿ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈ ವಿಚಾರ ಈಗ ಅಧಿಕೃತವಾಗಿದೆ. ‘ವಾರಿಸು’ ಗೆದ್ದ ಖುಷಿಯಲ್ಲಿ ವಿಜಯ್ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ.

ದಳಪತಿ ವಿಜಯ್ ಅವರು ಸಾಕಷ್ಟು ವೇಗವಾಗಿ ಸಿನಿಮಾ ಕೆಲಸ ಮಾಡಿ ಮುಗಿಸುತ್ತಾರೆ. ಒಂದು ಸಿನಿಮಾ ಗೆದ್ದ ಬಳಿಕ ಮತ್ತೊಂದು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ. ‘ವಾರಿಸು’ ರಿಲೀಸ್ ಆದ 20 ದಿನಕ್ಕೆ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ದಳಪತಿ 67’ ಎಂದು ಹೆಸರು ಇಡಲಾಗಿದೆ. ಈ ಚಿತ್ರಕ್ಕೆ ‘7 ಸ್ಕ್ರೀನ್‌ ಸ್ಟುಡಿಯೋಸ್‌’ ಬಂಡವಾಳ ಹೂಡುತ್ತಿದೆ.

ಇದನ್ನೂ ಓದಿ
Image
ಯುವ ನಟಿಯ ಜತೆ ದಳಪತಿ ವಿಜಯ್ ಡೇಟಿಂಗ್​? ವಿಚ್ಛೇದನ ಸುದ್ದಿ ಹುಟ್ಟಲು ಇದುವೇ ಕಾರಣ
Image
‘ವಾರಿಸು’ದಲ್ಲಿ ರಶ್ಮಿಕಾ ಮಂದಣ್ಣ ಪಾತ್ರಕ್ಕಿಲ್ಲ ತೂಕ; ಈ ಸಿನಿಮಾ ಮಾಡಿದ್ದಕ್ಕೆ ಕಾರಣ ತಿಳಿಸಿದ ನಟಿ  
Image
Thalapathy 67: ರಶ್ಮಿಕಾ ಬಳಿಕ ದಳಪತಿ ವಿಜಯ್ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ? ‘ಸಿಂಪಲ್​ ಸ್ಟಾರ್​’ಗೆ ಕಾಲಿವುಡ್​ನಲ್ಲಿ ಬೇಡಿಕೆ

ಈ ಹಿಂದೆ ವಿಜಯ್‌ ನಟನೆಯ ‘ಮಾಸ್ಟರ್‌’ ಚಿತ್ರಕ್ಕೆ ಲೋಕೇಶ್‌ ಕನಗರಾಜ್​ ನಿರ್ದೇಶನ ಮಾಡಿದ್ದರು. ಇದು ವಿಜಯ್‌ ಜತೆ ಅವರ ಎರಡನೇ ಪ್ರಾಜೆಕ್ಟ್‌. ಮತ್ತೊಮ್ಮೆ ಮೋಡಿ ಮಾಡಲು ‘ಮಾಸ್ಟರ್‌’ ಜೋಡಿ ಸಿದ್ಧವಾಗಿದೆ. ವಿಶೇಷ ಎಂದರೆ ಈ ಚಿತ್ರಕ್ಕೆ ಈಗಾಗಲೇ ಶೂಟಿಂಗ್ ಕೂಡ ಆರಂಭ ಆಗಿದೆ.

ಇದನ್ನೂ ಓದಿ: ಪ್ರಪಂಚದಲ್ಲೇ 2ನೇ ಸ್ಥಾನ ಪಡೆದ ರಶ್ಮಿಕಾ ಮಂದಣ್ಣ ಹೊಸ ಸಾಂಗ್​ ‘ರಂಜಿದಮೆ..’

‘ಕೈದಿ’, ‘ಮಾಸ್ಟರ್​’, ‘ವಿಕ್ರಮ್​’ ಅಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಲೋಕೇಶ್​ಗೆ ಇದೆ. ಈ ಕಾರಣಕ್ಕೆ ಅವರ ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಮೊದಲು ಲೋಕೇಶ್ ಜತೆ ಕೆಲಸ ಮಾಡಿ ಅನುಭವ ಇರುವ ಅನಿರುದ್ಧ್​ ರವಿಚಂದರ್​ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ. ವಿಜಯ್ ಹಾಗೂ ಅನಿರುದ್ಧ್ ಒಟ್ಟಾಗಿ ಕೆಲಸ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದು. ಶೀಘ್ರದಲ್ಲೇ ಈ ಚಿತ್ರದ ಟೈಟಲ್ ರಿವೀಲ್ ಆಗಲಿದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:55 am, Tue, 31 January 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ