AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Thalapathy 69’ ವಿಜಯ್ ಕೊನೆಯ ಸಿನಿಮಾ; ಖಚಿತಪಡಿಸಿದ ಕೆವಿಎನ್ ಸಂಸ್ಥೆ

ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯ ವೆಂಕಟ್ ಅವರು ಬಂಡವಾಳ ಹೂಡತ್ತಿದ್ದಾರೆ. ಇದೇ ನಿರ್ಮಾಣ ಸಂಸ್ಥೆ ಮೂಲಕ  ‘Thalapathy 69’ ಚಿತ್ರ ಸಿದ್ಧವಾಗಲಿದೆ. ಈ ಚಿತ್ರದ ಬಗ್ಗೆ ಇಂದು (ಸೆಪ್ಟೆಂಬ್ 14) ಸಂಜೆ 5 ಗಂಟೆಗೆ ಅಪ್​ಡೇಟ್ ಕೊಡೋದಾಗಿ ಕೆವಿಎನ್ ಸಂಸ್ಥೆ ತಿಳಿಸಿದೆ.

‘Thalapathy 69’ ವಿಜಯ್ ಕೊನೆಯ ಸಿನಿಮಾ; ಖಚಿತಪಡಿಸಿದ ಕೆವಿಎನ್ ಸಂಸ್ಥೆ
ವಿಜಯ್
ರಾಜೇಶ್ ದುಗ್ಗುಮನೆ
|

Updated on:Sep 14, 2024 | 7:18 AM

Share

ದಳಪತಿ ವಿಜಯ್ ಅವರು ತಮ್ಮ 69ನೇ ಸಿನಿಮಾಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದು ವಿಜಯ್ ಅವರ ಕೊನೆಯ ಸಿನಿಮಾ ಆಗಿರಲಿದೆ. ಇತ್ತೀಚೆಗಷ್ಟೇ ರಿಲೀಸ್ ಆದ ‘GOAT’ ಸಿನಿಮಾ ಫ್ಲಾಪ್ ಆಗಿದೆ. ಈ ಕಾರಣಕ್ಕೆ ಅವರ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಎಂದು ‘ಕೆವಿಎನ್ ಪ್ರೊಡಕ್ಷನ್ಸ್’ ಖಚಿತಪಡಿಸಿದೆ.

ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗುತ್ತಿದ್ದಾರೆ. ಈ ಕಾರಣಕ್ಕೆ ‘Thalapathy 69’ ಅವರ ಕೊನೆಯ ಸಿನಿಮಾ ಆಗಲಿದೆ ಎಂದು ಹೇಳಲಾಗಿತ್ತು. ಇದಾದ ಬಳಿಕವೂ ಅವರು ಕೆಲವು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂದು ವರದಿ ಆಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈಗ ರಿಲೀಸ್ ಆಗಿರೋ ವಿಡಿಯೋದಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ‘Thalapathy 69’ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಅಪ್​​ಡೇಟ್ ಇಂದು (ಸೆಪ್ಟೆಂಬರ್ 14) ಸಿಗಲಿದೆ. ಈ ಮೊದಲು ವಿಜಯ್ ಸಿನಿಮಾ ರಿಲೀಸ್ ಆದಾಗ ಫ್ಯಾನ್ಸ್ ಹೇಗೆ ಸಂಭ್ರಮಿಸಿದ್ದರು ಎನ್ನುವುದರ ಫೋಟೋ ಹಂಚಿಕೊಳ್ಳಲಾಗಿದೆ. ವಿಡಿಯೋದ ಕೊನೆಯಲ್ಲಿ ‘ಕೊನೆಯ ಬಾರಿ Thalapathy 69’ ಎಂದು ಬರೆಯಲಾಗಿದೆ. ಈ ಮೂಲಕ ಇದು ವಿಜಯ್ ಕೊನೆಯ ಸಿನಿಮಾ ಎಂಬುದನ್ನು ಖಚಿತಪಡಿಸಿದ್ದಾರೆ.

‘ತಮಿಳಗ ವೆಟ್ರಿ ಕಳಗಂ’ ಅನ್ನೋದು ವಿಜಯ್ ಪಕ್ಷದ ಹೆಸರು. ಅವರು ಮುಂದಿನ ದಿನಗಳಲ್ಲಿ ಪಕ್ಷ ಕಟ್ಟು ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡಲಿದ್ದಾರೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಕನ್ನಡ ನಿರ್ಮಾಣ ಸಂಸ್ಥೆಯಿಂದ ಬಂಡವಾಳ; ಟೀಸರ್ ರಿಲೀಸ್

ಕೆವಿಎನ್ ಪ್ರೊಡಕ್ಷನ್ಸ್ ದೊಡ್ಡ ದೊಡ್ಡ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಕನ್ನಡದಲ್ಲಿ ‘ಕೆಡಿ’ ಹಾಗೂ ‘ಟಾಕ್ಸಿಕ್’ ಚಿತ್ರವನ್ನು ಈ ನಿರ್ಮಾಣ ಸಂಸ್ಥೆ ಸಿದ್ಧಪಡಿಸುತ್ತಿದೆ. ‘Thalapathy 69’ ಕೆವಿಎನ್​ ಸಂಸ್ಥೆಯ ತಮಿಳಿನ ಮೊದಲ ಸಿನಿಮಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:17 am, Sat, 14 September 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್