AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಮೊದಲ ಸಿನಿಮಾ ಟೈಟಲ್? ಏನಿದು ಸುದ್ದಿ

ದಳಪತಿ ವಿಜಯ್ ಅವರ ಹೊಸ ಚಿತ್ರಕ್ಕೆ 'ನಾಲೈಯ ತೀರ್ಪು' ಎಂದು ಹೆಸರಿಡಲಾಗಿದೆ. ಇದು ಅವರ ಮೊದಲ ಚಿತ್ರದ ಹೆಸರೇ ಆಗಿದೆ. ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಿಸುತ್ತಿದ್ದು, ಪೂಜಾ ಹೆಗ್ಡೆ ಮತ್ತು ಬಾಬಿ ಡಿಯೋಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. 250-275 ಕೋಟಿ ರೂಪಾಯಿ ವಿಜಯ್ ಸಂಭಾವನೆ ಪಡೆದಿದ್ದಾರೆ. ವಿಜಯ್ ಅವರ ರಾಜಕೀಯ ಪ್ರವೇಶದ ಹಿನ್ನೆಲೆಯಲ್ಲಿ ಈ ಸಿನಿಮಾ ಹೆಚ್ಚು ಗಮನ ಸೆಳೆಯುತ್ತಿದೆ.

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಮೊದಲ ಸಿನಿಮಾ ಟೈಟಲ್? ಏನಿದು ಸುದ್ದಿ
ವಿಜಯ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Jan 25, 2025 | 7:15 AM

ದಳಪತಿ ವಿಜಯ್ ಅವರು ತಮ್ಮ ಹೊಸ ಸಿನಿಮಾದ ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ಅತಿ ವೇಗದಲ್ಲಿ ಸಿನಿಮಾ ಮಾಡಿ ಮುಗಿಸುವುದನ್ನು ಅವರನ್ನು ನೋಡಿ ಅನೇಕರು ಕಲಿಯಬೇಕಿದೆ. ಸದ್ಯ ಅವರ ನಟನೆಯ ಹೊಸ ಚಿತ್ರಕ್ಕೆ ‘ದಳಪತಿ 69’ ಎಂದು ತಾತ್ಕಾಲಿಕ ಟೈಟಲ್ ಇಡಲಾಗಿದೆ. ಈ ಚಿತ್ರದ ಟೈಟಲ್ ಏನು ಎಂಬುದು ರಿವೀಲ್ ಆಗಿದೆ. ವಿಜಯ್ ನಟನೆಯ ಮೊದಲ ಚಿತ್ರಕ್ಕೆ ಯಾವ ಟೈಟಲ್ ಇಡಲಾಗಿತ್ತೋ ಅದೇ ಟೈಟಲ್​ನ ಕೊನೆಯ ಚಿತ್ರಕ್ಕೂ ಇಡಲಾಗುತ್ತಿದೆ ಎನ್ನಲಾಗುತ್ತಿದೆ.

ವಿಜಯ್ ಅವರು ಬಾಲ ಕಲಾವಿದನಾಗಿ ಗಮನ ಸೆಳೆದವರು. ಆ ಬಳಿಕ ಅವರು ಹೀರೋ ಆದರು. 1992ರಲ್ಲಿ ರಿಲೀಸ್ ಆದ ‘ನಾಲೈಯ ತೀರ್ಪು’ ಸಿನಿಮಾ ಗಮನ ಸೆಳೆಯಿತು. ಇದು ಹೀರೋ ಆಗಿ ವಿಜಯ್ ನಟಿಸಿದ ಮೊದಲ ಸಿನಿಮಾ ಆಗಿದೆ. ಈಗ ಅವರ ಕೊನೆಯ ಚಿತ್ರಕ್ಕೆ ಇದೇ ಟೈಟಲ್ ಇಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ವಿಜಯ್ ಅವರ ಕೊನೆಯ ಚಿತ್ರಕ್ಕೆ ಎಚ್. ವಿನೋದ್ ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅಜಿತ್ ಜೊತೆ ಸಿನಿಮಾ ಮಾಡಿ ಅವರು ಗಮನ ಸೆಳೆದಿದ್ದಾರೆ. ವಿಜಯ್ ಹೊಸ ಚಿತ್ರದ ಟೈಟಲ್​​ನ ಶೀಘ್ರವೇ ರಿಲೀಸ್ ಮಾಡಲು ತಂಡ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ. ಅವರ ಕೊನೆಯ ಚಿತ್ರಕ್ಕೂ ಮೊದಲ ಚಿತ್ರದ ಟೈಟಲ್​​ನೇ ಇಟ್ಟಿದ್ದು ವಿಶೇಷ.

ಕರ್ನಾಟಕದ ‘ಕೆವಿಎನ್ ಪ್ರೊಡಕ್ಷನ್’ ವಿಜಯ್ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಸೆಟ್​ನ ಯಾವುದೇ ವಿಚಾರಗಳು ಲೀಕ್ ಆಗದಂತೆ ತಂಡ ನೋಡಿಕೊಳ್ಳುತ್ತಿದೆ. ಈ ಚಿತ್ರಕ್ಕೆ ವಿಜಯ್ ಅವರಿಗೆ ದೊಡ್ಡ ಮಟ್ಟದ ಸಂಭಾವನೆ ಕೊಡಲು ಕೆವಿಎನ್ ಒಪ್ಪಿದೆ. ಕೆಲವು ವರದಿಗಳ ಪ್ರಕಾರ 250-275 ಕೋಟಿ ರೂಪಾಯಿ ಸಂಭಾವನೆ ನೀಡಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಅಪಘಾತದಲ್ಲಿ ಎಲ್ಲವನ್ನೂ ಮರೆತಿದ್ದ ನಾಸರ್ ಮಗನಿಗೆ ನೆನಪು ತರಿಸಿದ್ದ ದಳಪತಿ ವಿಜಯ್

ಕೆಲವು ವರದಿಗಳ ಪ್ರಕಾರ ‘ನಾಲೈಯ ತೀರ್ಪು’ ಸಿನಿಮಾ ತೆಲುಗಿನ ‘ಭಗವಾನ್’ ಚಿತ್ರದ ರಿಮೇಕ್ ಎನ್ನಲಾಗಿದೆ. ಪೂಜಾ ಹೆಗ್ಡೆ ನಾಯಕಿ ಆಗಿ ನಟಿಸುತ್ತಿದ್ದು, ಬಾಬಿ ಡಿಯೋಲ್ ವಿಲನ್ ಪಾತ್ರ ಮಾಡಿದ್ದಾರೆ. ಈ ಚಿತ್ರ ಈ ವರ್ಷವೇ ರಿಲೀಸ್ ಆಗುವ ಸಾಧ್ಯತೆ ಇದೆ. 2026ರಲ್ಲಿ ತಮಿಳು ನಾಡು ಚುನಾವಣೆ ನಡೆಯಲಿದ್ದು, ವಿಜಯ್ ಪಕ್ಷ ಸ್ಪರ್ಧೆ ಮಾಡಲಿದೆ. ಅವರು ಗೆದ್ದು ಸಿಎಂ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ