AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಜ್ಯೋತಿಕಾ? 20 ವರ್ಷದ ಬಳಿಕ ದಳಪತಿ ವಿಜಯ್​ ಜೊತೆ ನಟನೆ

ಖ್ಯಾತ ನಟಿ ಜ್ಯೋತಿಕಾ ಅವರ ಬಗ್ಗೆ ಒಂದು ಇಂಟರೆಸ್ಟಿಂಗ್​ ಸುದ್ದಿ ಕೇಳಿಬಂದಿದೆ. ದಳಪತಿ ವಿಜಯ್​ ನಟಿಸಲಿರುವ ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಜ್ಯೋತಿಕಾ ಕೂಡ ಒಂದು ಪ್ರಮುಖ ಪಾತ್ರ ಮಾಡಲಿದ್ದಾರೆ. ಬರೋಬ್ಬರಿ 20 ವರ್ಷಗಳ ಬಳಿಕ ಜ್ಯೋತಿಕಾ ಮತ್ತು ದಳಪತಿ ವಿಜಯ್​ ಅವರು ತೆರೆಹಂಚಿಕೊಳ್ಳುತ್ತಿದ್ದಾರೆ ಎಂಬುದು ವಿಶೇಷ.

ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಜ್ಯೋತಿಕಾ? 20 ವರ್ಷದ ಬಳಿಕ ದಳಪತಿ ವಿಜಯ್​ ಜೊತೆ ನಟನೆ
ದಳಪತಿ ವಿಜಯ್​, ಜ್ಯೋತಿಕಾ
ಮದನ್​ ಕುಮಾರ್​
|

Updated on: Aug 13, 2023 | 7:52 AM

Share

ನಟಿ ಜ್ಯೋತಿಕಾ (Jyothika) ಅವರು ಒಂದು ಕಾಲದಲ್ಲಿ ಸಖತ್​ ಬ್ಯುಸಿ ಹಿರೋಯಿನ್​ ಆಗಿದ್ದರು. ಅನೇಕ ಹೀರೋಗಳ ಜೊತೆಗೆ ನಟಿಸಿ ಅವರು ಸೈ ಎನಿಸಿಕೊಂಡಿದ್ದರು. ಆದರೆ ಸೂರ್ಯ (Suriya) ಜೊತೆ ಮದುವೆ ಆದ ಬಳಿಕ ಅವರು ಸಿನಿಮಾಗಳ ಆಯ್ಕೆಯಲ್ಲಿ ಸಖತ್​ ಚ್ಯೂಸಿ ಆದರ. ಹಾಗಂತ ಅವರು ಸಂಪೂರ್ಣವಾಗಿ ಚಿತ್ರರಂಗದಿಂದ ದೂರ ಉಳಿದುಕೊಂಡಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಾ, ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿ ಇದ್ದಾರೆ. ಈಗ ಜ್ಯೋತಿಕಾ ಅವರ ಬಗ್ಗೆ ಒಂದು ಇಂಟರೆಸ್ಟಿಂಗ್​ ಸುದ್ದಿ ಕೇಳಿಬಂದಿದೆ. ದಳಪತಿ ವಿಜಯ್​ (Thalapathy Vijay) ನಟಿಸಲಿರುವ ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಜ್ಯೋತಿಕಾ ಕೂಡ ಒಂದು ಪ್ರಮುಖ ಪಾತ್ರ ಮಾಡಲಿದ್ದಾರೆ. ಬರೋಬ್ಬರಿ 20 ವರ್ಷಗಳ ಬಳಿಕ ಇವರಿಬ್ಬರು ತೆರೆಹಂಚಿಕೊಳ್ಳುತ್ತಿದ್ದಾರೆ ಎಂಬುದು ವಿಶೇಷ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಸೃಷ್ಟಿ ಆಗಿದೆ.

ದಳಪತಿ ವಿಜಯ್​ ಅವರು ಈಗ ‘ಲಿಯೋ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಚಿತ್ರಕ್ಕೆ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರ ಜೊತೆಗೆ ರಾಜಕೀಯ ಪ್ರವೇಶದ ಬಗ್ಗೆಯೂ ವಿಜಯ್​ ಆಲೋಚಿಸುತ್ತಿದ್ದಾರೆ ಎನ್ನಲಾಗಿದೆ. ಈ ನಡುವೆ ಅವರ ಹೊಸ ಸಿನಿಮಾದ ಬಗ್ಗೆಯೂ ಗಾಸಿಪ್​ ಹಬ್ಬಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತಯಾರಾಗಲಿರುವ ವಿಜಯ್​ ಅವರ ಹೊಸ ಚಿತ್ರಕ್ಕೆ ವೆಂಕಟ್​ ಪ್ರಭು ನಿರ್ದೇಶನ ಮಾಡಲಿದ್ದು, ಆ ಚಿತ್ರದಲ್ಲಿ ಜ್ಯೋತಿಕಾ ಕೂಡ ನಟಿಸುತ್ತಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Jyothika: 50ನೇ ಚಿತ್ರದ ಬಿಡುಗಡೆಯ ಸಂಭ್ರಮದಲ್ಲಿ ಜ್ಯೋತಿಕಾ; ಅಚ್ಚರಿಯ ಗಿಫ್ಟ್ ನೀಡಿದ ಆಮೆಜಾನ್ ಪ್ರೈಮ್

ತಮಿಳು, ತೆಲುಗು, ಕನ್ನಡ ಹಾಗೂ ಹಿಂದಿ ಸಿನಿಮಾಗಳಲ್ಲಿ ಜ್ಯೋತಿಕಾ ಮಿಂಚಿದ್ದಾರೆ. ತಮಿಳಿನ ‘ಖುಷಿ’ (2000), ‘ತಿರುಮಲೈ’ (2003) ಸಿನಿಮಾಗಳಲ್ಲಿ ಜ್ಯೋತಿಕಾ ಮತ್ತು ದಳಪತಿ ವಿಜಯ್​ ಅವರು ಜೊತೆಯಾಗಿ ನಟಿಸಿದ್ದರು. ಈಗ ಅವರು 2 ದಶಕದ ಬಳಿಕ ತೆರೆಹಂಚಿಕೊಳ್ಳಲಿದ್ದಾರೆ ಎಂಬ ವಿಷಯ ಕೇಳಿ ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ. ಈ ಸುದ್ದಿ ಬಗ್ಗೆ ಸಿನಿಮಾ ತಂಡದಿಂದ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ. ಈ ಸಿನಿಮಾದಲ್ಲಿ ಜ್ಯೋತಿಕಾ ಅವರು ನಾಯಕಿ ಪಾತ್ರ ಮಾಡುತ್ತಾರೋ ಅಥವಾ ಬೇರೆ ಯಾವುದಾದರೂ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚುತ್ತಾರೋ ಎಂಬುದು ಕೂಡ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ಫ್ಯಾಮಿಲಿ ಸಮೇತ ಮುಂಬೈನಲ್ಲಿ ಸೆಟ್ಲ್​ ಆದ ನಟ ಸೂರ್ಯ; ಚೆನ್ನೈ ತೊರೆಯುವಂಥದ್ದು ಏನಾಯ್ತು?

ಜ್ಯೋತಿಕಾ ಅವರಿಗೆ ಈಗ 44 ವರ್ಷ ವಯಸ್ಸು. ಚಿತ್ರರಂಗದಲ್ಲಿ ಅವರು ಈಗಲೂ ಬೇಡಿಕೆ ಉಳಿಸಿಕೊಂಡಿದ್ದಾರೆ. ಅಜಯ್​ ದೇವಗನ್​ ಮತ್ತು ಆರ್​. ಮಾಧನವನ್​ ನಟಿಸಲಿರುವ ಬಾಲಿವುಡ್​ನ ಹೊಸ ಸಿನಿಮಾದಲ್ಲಿ ಜ್ಯೋತಿಕಾ ಅಭಿನಯಿಸುತ್ತಿದ್ದಾರೆ. ಪತಿ, ಕಾಲಿವುಡ್​ ನಟ ಸೂರ್ಯ ಅವರ ವೃತ್ತಿಜೀವನಕ್ಕೆ ಜ್ಯೋತಿಕಾ ಬೆಂಬಲವಾಗಿ ನಿಂತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?