AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay: ದಳಪತಿ ವಿಜಯ್​ ಕುಟುಂಬದಲ್ಲಿ ಕಲಹ? ‘ವಾರಿಸು’ ರಿಲೀಸ್​ ಸಮಯದಲ್ಲಿ ಹಬ್ಬಿದೆ ಡಿವೋರ್ಸ್​ ಸುದ್ದಿ

Thalapathy Vijay Divorce: ಹಿಂದೂ ಮತ್ತು ಕ್ರಿಶ್ಚಿಯನ್​ ಸಂಪ್ರದಾಯದ ಪ್ರಕಾರ ದಳಪತಿ ವಿಜಯ್-ಸಂಗೀತಾ ಮದುವೆ ನೆರವೇರಿತ್ತು. ಈ ಜೋಡಿಗೆ ಒಬ್ಬರು ಮಕ್ಕಳು ಇದ್ದಾರೆ. ಡಿವೋರ್ಸ್​ ವದಂತಿ ಹಬ್ಬಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

Thalapathy Vijay: ದಳಪತಿ ವಿಜಯ್​ ಕುಟುಂಬದಲ್ಲಿ ಕಲಹ? ‘ವಾರಿಸು’ ರಿಲೀಸ್​ ಸಮಯದಲ್ಲಿ ಹಬ್ಬಿದೆ ಡಿವೋರ್ಸ್​ ಸುದ್ದಿ
ದಳಪತಿ ವಿಜಯ್, ಸಂಗೀತಾ
TV9 Web
| Updated By: ಮದನ್​ ಕುಮಾರ್​|

Updated on:Jan 06, 2023 | 2:36 PM

Share

ಖ್ಯಾತ ನಟ ದಳಪತಿ ವಿಜಯ್​ ಅವರು ‘ವಾರಿಸು’ ಸಿನಿಮಾದ (Varisu Movie) ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಈ ಚಿತ್ರದ ಗೆಲುವು ಅವರ ಪಾಲಿಗೆ ತುಂಬ ಮುಖ್ಯ ಆಗಲಿದೆ. ಜನವರಿ 12ರಂದು ಈ ಸಿನಿಮಾ ಅದ್ದೂರಿಯಾಗಿ ತೆರೆಕಾಣಲಿದೆ. ಅದರ ನಡುವೆ ಒಂದು ಬ್ಯಾಡ್​ ನ್ಯೂ​ಸ್​ ಹಬ್ಬಿದೆ. ದಳಪತಿ ವಿಜಯ್​ (Thalapathy Vijay) ಅವರ ಸಂಸಾರದಲ್ಲಿ ಕಲಹ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಪತ್ನಿ ಸಂಗೀತಾ ಜೊತೆಗಿನ 22 ವರ್ಷಗಳ ದಾಂಪತ್ಯ ಜೀವನಕ್ಕೆ ದಳಪತಿ ವಿಜಯ್​ ಅಂತ್ಯ ಹಾಡಲಿದ್ದಾರೆ ಎಂದೆಲ್ಲ ಸುದ್ದಿ ಹಬ್ಬಿದೆ. ಈ ರೀತಿ ಗುಸುಗುಸು ಹರಡಲು ಒಂದೆರಡು ಕಾರಣಗಳಿವೆ. ಡಿವೋರ್ಸ್​ ವದಂತಿ (Thalapathy Vijay Divorce) ಎಂದರೆ ಕೊಂಚ ಗಂಭೀರವಾದ ವಿಚಾರವೇ ಸರಿ. ಈ ಬಗ್ಗೆ ವಿಜಯ್ ಮತ್ತು ಸಂಗೀತಾ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

ದಳಪತಿ ವಿಜಯ್​ ಡಿವೋರ್ಸ್​ ವದಂತಿಗೆ ಕಾರಣ ಏನು?

ವಿಜಯ್​ ಅವರು ತಮ್ಮ ಪತ್ನಿ ಸಂಗೀತಾ ಅವರಿಂದ ದೂರ ಇದ್ದಾರಾ ಎಂಬಂತಹ ಅನುಮಾನ ಹಲವರಿಗೆ ಮೂಡಿದೆ. ಅದಕ್ಕೆ ಕಾರಣ ಇಷ್ಟೇ.. ಇತ್ತೀಚಿನ ದಿನಗಳಲ್ಲಿ ಈ ಜೋಡಿ ಎಲ್ಲಿಯೂ ಜೊತೆಯಾಗಿ ಕಾಣಿಸಿಕೊಂಡಿಲ್ಲ. ನಿರ್ದೇಶಕ ಅಟ್ಲಿ ಅವರ ಪತ್ನಿಯ ಸೀಮಂತ ಕಾರ್ಯಕ್ರಮದಲ್ಲಿ ವಿಜಯ್​ ಪತ್ನಿ ಸಂಗೀತಾ ಕಾಣಿಸಿಕೊಳ್ಳಲಿಲ್ಲ. ಅಲ್ಲದೇ ‘ವಾರಿಸು’ ಚಿತ್ರದ ಟ್ರೇಲರ್​ ಬಿಡುಗಡೆ ಸಂದರ್ಭದಲ್ಲೂ ಅವರು ಗೈರಾಗಿದ್ದರು. ಹಾಗಾಗಿ ಡಿವೋರ್ಸ್​ ವದಂತಿ ಹಬ್ಬಿದೆ.

ಇದನ್ನೂ ಓದಿ: Thalapathy Vijay: ‘ವಾರಿಸು’ ಟ್ರೇಲರ್‌ಗೆ ಸಖತ್ ಪ್ರತಿಕ್ರಿಯೆ; ಗೆಲುವಿನ ನಿರೀಕ್ಷೆಯಲ್ಲಿ ದಳಪತಿ ವಿಜಯ್

ಇದನ್ನೂ ಓದಿ
Image
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Image
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

ಇಷ್ಟೆಲ್ಲ ಅಂತೆ-ಕಂತೆಗಳು ಹಬ್ಬಿದ್ದರೂ ಕೂಡ ಅಸಲಿ ವಿಷಯ ಬೇರೆಯೇ ಇದೆ ಎನ್ನುತ್ತಿವೆ ಕೆಲವು ಮೂಲಗಳು. ಪ್ರಸ್ತುತ ಸಂಗೀತಾ ಅವರು ಮಕ್ಕಳ ಜೊತೆ ಫಾರಿನ್​ ಟ್ರಿಪ್​ ತೆರಳಿದ್ದಾರೆ. ಆ ಕಾರಣದಿಂದ ಅವರು ಭಾರತದಲ್ಲಿ ಕೆಲವು ಸಮಾರಂಭಗಳಿಗೆ ಹಾಜರಿ ಹಾಕಲು ಸಾಧ್ಯವಾಗಿಲ್ಲ. ಅದನ್ನೇ ಕಾರಣವಾಗಿ ಇಟ್ಟುಕೊಂಡು ಕೆಲವರು ಗಾಸಿಪ್​ ಹಬ್ಬಿಸಿದ್ದಾರೆ ಎಂಬ ಮಾತು ಕೂಡ ಕೇಳಿಬಂದಿದೆ.

ಇದನ್ನೂ ಓದಿ: Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​

ಸಂಗೀತಾ ಮತ್ತು ದಳಪತಿ ವಿಜಯ್​ ಮದುವೆ ಆಗಿದ್ದು 1999ರ ಆಗಸ್ಟ್​ 25ರಂದು. ಇವರದ್ದು ಲವ್​ ಮ್ಯಾರೇಜ್​. ವಿಜಯ್​ ಅವರ ನಟನೆಗೆ ಸಂಗೀತಾ ಫ್ಯಾನ್​ ಆಗಿದ್ದರು. ಸಿನಿಮಾವೊಂದರ ಶೂಟಿಂಗ್​ ವೇಳೆ ವಿಜಯ್ ಅವರನ್ನು ಸಂಗೀತಾ ಭೇಟಿಯಾಗಿ ಮನೆಗೆ ಬರುವಂತೆ ಆಹ್ವಾನ ನೀಡಿದ್ದರು. ಆ ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದು, ಪ್ರೀತಿ ಹುಟ್ಟಿತು. ಎರಡೂ ಕುಟುಂಬದ ಒಪ್ಪಿಗೆ ಮೇರೆಗೆ ಮದುವೆ ನೆರವೇರಿತ್ತು.

ಹಿಂದೂ ಮತ್ತು ಕ್ರಿಶ್ಚಿಯನ್​ ಸಂಪ್ರದಾಯದ ಪ್ರಕಾರ ವಿಜಯ್​ ಮತ್ತು ಸಂಗೀತಾ ಮದುವೆ ನೆರವೇರಿತ್ತು. ಈ ಜೋಡಿಗೆ ಒಬ್ಬರು ಮಕ್ಕಳು ಇದ್ದಾರೆ. ಡಿವೋರ್ಸ್​ ವದಂತಿ ಹಬ್ಬಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:36 pm, Fri, 6 January 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!